<p><strong>ಬೆಂಗಳೂರು:</strong> ‘ವಿದ್ಯಾರ್ಥಿ ದಿಸೆಯಲ್ಲಿ ಪಡೆಯುವ ಜ್ಞಾನವು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಮುಖ್ಯವಾಗಿರುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಶಿಸ್ತು ಹಾಗೂ ಉತ್ತಮ ನಡವಳಿಕೆಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ರಾಜ್ಯ ಒಕ್ಕಲಿಗರ ಸಂಘದ ಖಜಾಂಚಿ ಎಂ.ಎಸ್. ಉಮಾಪತಿ ತಿಳಿಸಿದರು.</p>.<p>ಬೆಂಗಳೂರು ತಾಂತ್ರಿಕ ಮಹಾವಿದ್ಯಾಲಯದ 2024-25 ಸಾಲಿನ ಮೊದಲ ವರ್ಷದ ಬಿ.ಇ. ತರಗತಿಗಳ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>'ವಿದ್ಯಾಥಿಗಳು ತಮ್ಮ ಪೋಷಕರ ಕನಸನ್ನು ನನಸು ಮಾಡಲು ಶ್ರಮ ವಹಿಸಿ ಓದಬೇಕು' ಎಂದು ಸಲಹೆ ನೀಡಿದರು.</p>.<p>ಎಬಿಬಿ ಕಂಪನಿ ಉಪಾಧ್ಯಕ್ಷ ಕರ್ನಲ್ ಎಸ್.ಆರ್.ಕಿರಣ್, ‘ಶೈಕ್ಷಣಿಕ ಜೀವನದಲ್ಲಿ ವಿದ್ಯಾರ್ಥಿಗಳು ಹೊಸತನದ ಅನ್ವೇಷಣೆಯಲ್ಲಿ ತೊಡಗಿಸಿಕೊಳ್ಳಬೇಕು' ಎಂದು ಕಿವಿ ಮಾತು ಹೇಳಿದರು. ವಿದ್ಯಾರ್ಥಿಗಳು ಅನುಸರಿಸಬೇಕಾದ ಶಿಸ್ತು, ನಾಯಕತ್ವ, ಜೀವನದ ಮೌಲ್ಯಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು.</p>.<p>ಡಿಟಿಐಸಿಐನ ಉಪ ಪ್ರಧಾನ ವ್ಯವಸ್ಥಾಪಕ ಜಯಂತ್ ದೇಶಪಾಂಡೆ, ವಾಹನ ಉದ್ಯಮದಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು.</p>.<p>ಕಲಾವಿದೆ ಕಲ್ಯಾಣಿ ಮೆನನ್, ‘ವಿದ್ಯಾರ್ಥಿಗಳು ಶಿಕ್ಷಣಕ್ಕೆ ನೀಡುವ ಮಹತ್ವವನ್ನು ಮಾನಸಿಕ, ದೈಹಿಕ ಆರೋಗ್ಯಕ್ಕೂ ನೀಡಬೇಕು. ವೃತ್ತಿ ಜೀವನದಲ್ಲಿ ಕಲಾತ್ಮಕ ಅಭಿವ್ಯಕ್ತಿಗೆ ಆದ್ಯತೆ ನೀಡಬೇಕು’ ಎಂದು ಹೇಳಿದರು.</p>.<p>ಬಿಐಟಿ ಕಾಲೇಜಿನ ಪ್ರಾಚಾರ್ಯ ಎಂ.ಯು ಅಶ್ವತ್ಥ್ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ವಿದ್ಯಾರ್ಥಿ ದಿಸೆಯಲ್ಲಿ ಪಡೆಯುವ ಜ್ಞಾನವು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಮುಖ್ಯವಾಗಿರುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಶಿಸ್ತು ಹಾಗೂ ಉತ್ತಮ ನಡವಳಿಕೆಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ರಾಜ್ಯ ಒಕ್ಕಲಿಗರ ಸಂಘದ ಖಜಾಂಚಿ ಎಂ.ಎಸ್. ಉಮಾಪತಿ ತಿಳಿಸಿದರು.</p>.<p>ಬೆಂಗಳೂರು ತಾಂತ್ರಿಕ ಮಹಾವಿದ್ಯಾಲಯದ 2024-25 ಸಾಲಿನ ಮೊದಲ ವರ್ಷದ ಬಿ.ಇ. ತರಗತಿಗಳ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>'ವಿದ್ಯಾಥಿಗಳು ತಮ್ಮ ಪೋಷಕರ ಕನಸನ್ನು ನನಸು ಮಾಡಲು ಶ್ರಮ ವಹಿಸಿ ಓದಬೇಕು' ಎಂದು ಸಲಹೆ ನೀಡಿದರು.</p>.<p>ಎಬಿಬಿ ಕಂಪನಿ ಉಪಾಧ್ಯಕ್ಷ ಕರ್ನಲ್ ಎಸ್.ಆರ್.ಕಿರಣ್, ‘ಶೈಕ್ಷಣಿಕ ಜೀವನದಲ್ಲಿ ವಿದ್ಯಾರ್ಥಿಗಳು ಹೊಸತನದ ಅನ್ವೇಷಣೆಯಲ್ಲಿ ತೊಡಗಿಸಿಕೊಳ್ಳಬೇಕು' ಎಂದು ಕಿವಿ ಮಾತು ಹೇಳಿದರು. ವಿದ್ಯಾರ್ಥಿಗಳು ಅನುಸರಿಸಬೇಕಾದ ಶಿಸ್ತು, ನಾಯಕತ್ವ, ಜೀವನದ ಮೌಲ್ಯಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು.</p>.<p>ಡಿಟಿಐಸಿಐನ ಉಪ ಪ್ರಧಾನ ವ್ಯವಸ್ಥಾಪಕ ಜಯಂತ್ ದೇಶಪಾಂಡೆ, ವಾಹನ ಉದ್ಯಮದಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು.</p>.<p>ಕಲಾವಿದೆ ಕಲ್ಯಾಣಿ ಮೆನನ್, ‘ವಿದ್ಯಾರ್ಥಿಗಳು ಶಿಕ್ಷಣಕ್ಕೆ ನೀಡುವ ಮಹತ್ವವನ್ನು ಮಾನಸಿಕ, ದೈಹಿಕ ಆರೋಗ್ಯಕ್ಕೂ ನೀಡಬೇಕು. ವೃತ್ತಿ ಜೀವನದಲ್ಲಿ ಕಲಾತ್ಮಕ ಅಭಿವ್ಯಕ್ತಿಗೆ ಆದ್ಯತೆ ನೀಡಬೇಕು’ ಎಂದು ಹೇಳಿದರು.</p>.<p>ಬಿಐಟಿ ಕಾಲೇಜಿನ ಪ್ರಾಚಾರ್ಯ ಎಂ.ಯು ಅಶ್ವತ್ಥ್ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>