<p><strong>ಪೀಣ್ಯ ದಾಸರಹಳ್ಳಿ</strong>: 'ಪ್ರತಿಭೆ ಎನ್ನುವುದು ಹುಟ್ಟಿದಾಗ ಬರುವುದಲ್ಲ, ಸಿಕ್ಕ ಅವಕಾಶವನ್ನು ಬಳಸಿಕೊಂಡು ಪ್ರತಿಭಾವಂತರಾಗಿ ಬೆಳೆಯಬೇಕು’ ಎಂದು ಸಂಗೀತ ನಿರ್ದೇಶಕ ಹಂಸಲೇಖ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಹೆಸರಘಟ್ಟ ಮುಖ್ಯ ರಸ್ತೆಯ ಮೌಂಟ್ ಶೆಫರ್ಡ್ ಶಿಕ್ಷಣ ಸಂಸ್ಥೆಗಳು ಮತ್ತು ಎಂ.ಎಸ್. ವಾಣಿಜ್ಯ ಕಾಲೇಜಿನ 2025- 26ನೇ ಶೈಕ್ಷಣಿಕ ಸಾಲಿನ ಪದವಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ದೇಶದ ಸ್ವಾತಂತ್ರ್ಯ ಚಳವಳಿ ನಮಗೆ ಶಿಕ್ಷಣವನ್ನು ಕೊಟ್ಟಿದೆ. ಅದರಿಂದ ಉತ್ತಮ ಜ್ಞಾನ ಸಂಪಾದನೆ ಅಗತ್ಯವಾಗಿದೆ' ಎಂದರು.</p>.<p>ಮೌಂಟ್ ಶೆಫರ್ಡ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಾಲ್ಟರ್ ಜೈ ಸಿಂಗ್ ಮಾತನಾಡಿ, ‘ನಮ್ಮ ಜ್ಞಾನವೃದ್ಧಿಯ ಜೊತೆಗೆ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳುವುದೂ ಶಿಕ್ಷಣದ ಮುಖ್ಯ ಗುರಿ. ಹಾಗಾಗಿ ವಿದ್ಯಾರ್ಥಿಗಳು ಚೆನ್ನಾಗಿ ಅಭ್ಯಾಸ ಮಾಡಿ ಉತ್ತಮ ಫಲಿತಾಂಶ ಪಡೆದು ಸಮಾಜಕ್ಕೆ ಮಾದರಿಯಾಗಬೇಕು’ ಎಂದರು.</p>.<p>ಕಾಲೇಜಿನ ಪ್ರಾಚಾರ್ಯ ತಮ್ಮಯ್ಯ ಆರ್.ಬಿ. ಮಾತನಾಡಿ, ‘ತಮ್ಮ ಮಕ್ಕಳು ಎಲ್ಲರಿಗಿಂತ ಹೆಚ್ಚು ವಿದ್ಯಾವಂತರಾಗಬೇಕು ಎಂಬುವುದು ಪೋಷಕರ ಅಭಿಲಾಷೆ. ಆದರೆ ಈ ಉತ್ಸಹದಲ್ಲಿ ಮಕ್ಕಳ ಬಗ್ಗೆ ನಿಗಾ ವಹಿಸುವುದು ಕೂಡ ಮುಖ್ಯವಾಗಿದೆ’ ಎಂದು ಹೇಳಿದರು.</p>.<p>ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ ಕುಲಪತಿ ಪ್ರೊ. ನಾಗೇಶ್ ವಿ. ಬೆಟ್ಟಕೋಟೆ ಮಾತನಾಡಿದರು. ಈ ಸಂದರ್ಭದಲ್ಲಿ ಸಂಶೋಧನಾ ಕೇಂದ್ರ, ಕಂಪ್ಯೂಟರ್ ಲ್ಯಾಬ್ ಮತ್ತು ನವೀಕೃತ ಕ್ಯಾಂಟೀನ್ ಅನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ</strong>: 'ಪ್ರತಿಭೆ ಎನ್ನುವುದು ಹುಟ್ಟಿದಾಗ ಬರುವುದಲ್ಲ, ಸಿಕ್ಕ ಅವಕಾಶವನ್ನು ಬಳಸಿಕೊಂಡು ಪ್ರತಿಭಾವಂತರಾಗಿ ಬೆಳೆಯಬೇಕು’ ಎಂದು ಸಂಗೀತ ನಿರ್ದೇಶಕ ಹಂಸಲೇಖ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಹೆಸರಘಟ್ಟ ಮುಖ್ಯ ರಸ್ತೆಯ ಮೌಂಟ್ ಶೆಫರ್ಡ್ ಶಿಕ್ಷಣ ಸಂಸ್ಥೆಗಳು ಮತ್ತು ಎಂ.ಎಸ್. ವಾಣಿಜ್ಯ ಕಾಲೇಜಿನ 2025- 26ನೇ ಶೈಕ್ಷಣಿಕ ಸಾಲಿನ ಪದವಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ದೇಶದ ಸ್ವಾತಂತ್ರ್ಯ ಚಳವಳಿ ನಮಗೆ ಶಿಕ್ಷಣವನ್ನು ಕೊಟ್ಟಿದೆ. ಅದರಿಂದ ಉತ್ತಮ ಜ್ಞಾನ ಸಂಪಾದನೆ ಅಗತ್ಯವಾಗಿದೆ' ಎಂದರು.</p>.<p>ಮೌಂಟ್ ಶೆಫರ್ಡ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಾಲ್ಟರ್ ಜೈ ಸಿಂಗ್ ಮಾತನಾಡಿ, ‘ನಮ್ಮ ಜ್ಞಾನವೃದ್ಧಿಯ ಜೊತೆಗೆ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳುವುದೂ ಶಿಕ್ಷಣದ ಮುಖ್ಯ ಗುರಿ. ಹಾಗಾಗಿ ವಿದ್ಯಾರ್ಥಿಗಳು ಚೆನ್ನಾಗಿ ಅಭ್ಯಾಸ ಮಾಡಿ ಉತ್ತಮ ಫಲಿತಾಂಶ ಪಡೆದು ಸಮಾಜಕ್ಕೆ ಮಾದರಿಯಾಗಬೇಕು’ ಎಂದರು.</p>.<p>ಕಾಲೇಜಿನ ಪ್ರಾಚಾರ್ಯ ತಮ್ಮಯ್ಯ ಆರ್.ಬಿ. ಮಾತನಾಡಿ, ‘ತಮ್ಮ ಮಕ್ಕಳು ಎಲ್ಲರಿಗಿಂತ ಹೆಚ್ಚು ವಿದ್ಯಾವಂತರಾಗಬೇಕು ಎಂಬುವುದು ಪೋಷಕರ ಅಭಿಲಾಷೆ. ಆದರೆ ಈ ಉತ್ಸಹದಲ್ಲಿ ಮಕ್ಕಳ ಬಗ್ಗೆ ನಿಗಾ ವಹಿಸುವುದು ಕೂಡ ಮುಖ್ಯವಾಗಿದೆ’ ಎಂದು ಹೇಳಿದರು.</p>.<p>ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ ಕುಲಪತಿ ಪ್ರೊ. ನಾಗೇಶ್ ವಿ. ಬೆಟ್ಟಕೋಟೆ ಮಾತನಾಡಿದರು. ಈ ಸಂದರ್ಭದಲ್ಲಿ ಸಂಶೋಧನಾ ಕೇಂದ್ರ, ಕಂಪ್ಯೂಟರ್ ಲ್ಯಾಬ್ ಮತ್ತು ನವೀಕೃತ ಕ್ಯಾಂಟೀನ್ ಅನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>