ಏಟ್ರಿಯಾ ವಿಶ್ವವಿದ್ಯಾಲಯದ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ ಎಂಐಟಿಯ ನೂತನ ಎಂಜಿನಿಯರಿಂಗ್ ಶಿಕ್ಷಣ ಬದಲಾವಣೆ ಕಾರ್ಯಕ್ರಮದಕಾರ್ಯನಿರ್ವಾಹಕ ನಿರ್ದೇಶಕ ಡಾ.ಬಾಬಿ ಮಿತ್ರ, ‘ವಿದ್ಯಾರ್ಥಿಗಳಲ್ಲಿ ಭವಿಷ್ಯದ ಬಗ್ಗೆ ದೂರದೃಷ್ಟಿ ಹೊಂದುವುದನ್ನು ಕಲಿಸಬೇಕು.ಸವಾಲುಗಳನ್ನು ಎದುರಿಸಲು ಮತ್ತು ಅವುಗಳನ್ನು ಯಾವುದೇ ಸಂದರ್ಭದಲ್ಲಾದರೂ ಅವಕಾಶಗಳಾಗಿ ಪರಿವರ್ತಿಸುವ ಸಾಮರ್ಥ್ಯ ಬೆಳೆಸಿಕೊಳ್ಳುವ ರೀತಿಯಲ್ಲಿ ಅವರನ್ನು ಬಲಿಷ್ಠಗೊಳಿಸಬೇಕು’ ಎಂದರು.