ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಲಾರಿಗೆ ಡಿಕ್ಕಿ, ಐಷರ್ ವಾಹನದ ಚಾಲಕ ಸಾವು

Published 29 ಡಿಸೆಂಬರ್ 2023, 15:36 IST
Last Updated 29 ಡಿಸೆಂಬರ್ 2023, 15:36 IST
ಅಕ್ಷರ ಗಾತ್ರ

ಬೆಂಗಳೂರು: ತಲಘಟ್ಟಪುರ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ನಾಗೇಗೌಡನ ಪಾಳ್ಯದ ಸೇತುವೆ ಬಳಿ ಲಾರಿ ಹಾಗೂ ಐಷರ್‌ ವಾಹನದ ನಡುವೆ ಶುಕ್ರವಾರ ಬೆಳಿಗ್ಗೆ ಅಪಘಾತ ಸಂಭವಿಸಿದ್ದು, ಐಷರ್‌ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭುವನೇಶ್ವರಿ ನಗರದ ನಿವಾಸಿ ಶಿವ (47) ಮೃತಪಟ್ಟವರು. ‌

‘ನಾಗೇಗೌಡನ ಪಾಳ್ಯದ ಸೇತುವೆ ಮಾರ್ಗವಾಗಿ ಕೊಯಮತ್ತೂರು ಕಡೆಗೆ ಲಾರಿ ಚಲಿಸುತ್ತಿತ್ತು. ಹಿಂಬದಿಯಿಂದ ಬಂದ ಐಷರ್‌ ವಾಹನವು ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಚಾಲಕನಿಗೆ ಗಂಭೀರ ಸ್ವರೂಪದ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದರು.

‘ಐಷರ್‌ ವಾನಹದಲ್ಲಿ ಕೋಳಿ ಸಾಗಣೆ ಮಾಡಲಾಗುತ್ತಿತ್ತು. ಚಾಲಕ ಅತಿವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ಅದೇ ಅಪಘಾತಕ್ಕೆ ಕಾರಣ’ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT