‘ಕೋವಿಡ್ ಯೋಧರು, ಈ ಸೋಂಕು ನಿಯಂತ್ರಣ ಕಾರ್ಯದಲ್ಲಿ ಮುಂಚೂಣಿಯಲ್ಲಿರುವ ಪೊಲೀಸರು, ಬಿಬಿಎಂಪಿ ನೌಕರರು, ಸರ್ಕಾರಿ ಆಸ್ಪತ್ರೆಗಳ ಸಿಬ್ಬಂದಿ ಹಾಗೂ ವಲಸೆ ಕಾರ್ಮಿಕರಿಗೆ ಬಿರಿಯಾನಿ ಹಂಚುವ ಮೂಲಕ ಹಬ್ಬ ಆಚರಿಸಿದ್ದೇವೆ. ದೇಶದ ಏಕತೆ, ಕೋಮು ಸಾಮರಸ್ಯ ಮತ್ತು ಜಾತ್ಯತೀತತೆ ಎತ್ತಿ ಹಿಡಿಯುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಅವಕಾಶ ವಂಚಿತರಿಗೆ ಹಾಗೂ ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ತಮ್ಮ ಖುಷಿಯನ್ನೆಲ್ಲ ಮರೆತು ಇತರರ ಸೇವೆಗಾಗಿ ಪಣ ತೊಟ್ಟವರಿಗೂ ಹಬ್ಬದ ಖುಷಿ ಸಿಗಬೇಕು ಎಂಬುದು ನಮ್ಮ ಆಶಯ’ ಎಂದು ಉಸ್ಮಾನ್ ಷರೀಫ್ ತಿಳಿಸಿದರು.