<p><strong>ಬೆಂಗಳೂರು</strong>: ಕೆ.ಆರ್. ಪುರದ ಬಳಿಯಿರುವ ಎಲೆ ಮಲ್ಲಪ್ಪ ಶೆಟ್ಟಿ ಕೆರೆಯಲ್ಲಿ ತ್ಯಾಜ್ಯ ತುಂಬಿದ್ದು, ದಿನೇದಿನೇ ಹಾಳಾಗುತ್ತಿದೆ. ಈ ಕೆರೆಯ ಸ್ವಚ್ಛತಾ ಕಾರ್ಯವನ್ನು ಕೈಗೊಂಡಿರುವ ಸ್ಥಳೀಯ ನಾಗರಿಕರು, ‘ಎಲೆ ಮಲ್ಲಪ್ಪ ಶೆಟ್ಟಿ ಕೆರೆ ಉಳಿಸಿ’ ಅಭಿಯಾನ ಆರಂಭಿಸಿದ್ದಾರೆ.</p><p>ಮೇಡಹಳ್ಳಿ ರೈಸಿಂಗ್, ದ ಇಂಡಿಯನ್ ಪ್ಲಾಗರ್ಸ್ ಆರ್ಮಿ, ಫ್ರೆಂಡ್ಸ್ ಆಫ್ ಲೇಕ್ಸ್ ಹಾಗೂ ಎಲೆ ಮಲ್ಲಪ್ಪ ಶೆಟ್ಟಿ ಕೆರೆ ಸ್ವಯಂಸೇವಕರ ವತಿಯಿಂದ ಮೇ 25ರಂದು ಸ್ವಚ್ಛತಾ ಕಾರ್ಯವನ್ನು ಆಯೋಜಿಸಲಾಗಿದೆ.</p><p>ಎಲೆ ಮಲ್ಲಪ್ಪ ಶೆಟ್ಟಿ ಕೆರೆಯನ್ನು ಪ್ಲಾಸ್ಟಿಕ್ ರಹಿತ, ಕಸರಹಿತ, ಮಿಶ್ರತ್ಯಾಜ್ಯರಹಿತವನ್ನಾಗಿ ಮಾಡಲು ಸ್ವಚ್ಛತಾ ಕಾರ್ಯ ಒಂದು ಹೆಜ್ಜೆಯಾಗಿದೆ ಎಂದು ಪ್ಲಾಗ್ ರಾಜ್, ಸುಭಾಜಿತ್, ಮಾಧುರಿ ತಿಳಿಸಿದ್ದಾರೆ.</p><p>‘ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್ಜಿಟಿ) ಆದೇಶವಿದೆ, ಸ್ಥಳೀಯರೂ ಹೋರಾಟ ನಡೆಸುತ್ತಿದ್ದಾರೆ. ಇಷ್ಟಾದರೂ ಕೆರೆಯಲ್ಲಿ ಕಟ್ಟಡ ತ್ಯಾಜ್ಯವನ್ನು ಸುರಿಯಲಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಂಡಿಲ್ಲ. ಬಿಬಿಎಂಪಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇತ್ತ ಗಮನಹರಿಸುತ್ತಿಲ್ಲ. ನೂರಾರು ವರ್ಷಗಳ ಇತಿಹಾಸವಿರುವ 490 ಎಕರೆ ವಿಸ್ತೀರ್ಣದಲ್ಲಿರುವ ಎಲೆ ಮಲ್ಲಪ್ಪ ಶೆಟ್ಟಿ ಕೆರೆ ಒತ್ತುವರಿ, ಮಾಲಿನ್ಯದಿಂದ ನಲುಗುತ್ತಿದೆ. ಈ ಕೆರೆಯನ್ನು ಉಳಿಸಿ, ಸಂರಕ್ಷಿಸಲು ಸ್ಥಳೀಯ ಜನರು, ಸಂಘ–ಸಂಸ್ಥೆಗಳು ಹೋರಾಡುತ್ತಿವೆ’ ಎಂದಿದ್ದಾರೆ. ಸಂಪರ್ಕ: 86184 95574</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆ.ಆರ್. ಪುರದ ಬಳಿಯಿರುವ ಎಲೆ ಮಲ್ಲಪ್ಪ ಶೆಟ್ಟಿ ಕೆರೆಯಲ್ಲಿ ತ್ಯಾಜ್ಯ ತುಂಬಿದ್ದು, ದಿನೇದಿನೇ ಹಾಳಾಗುತ್ತಿದೆ. ಈ ಕೆರೆಯ ಸ್ವಚ್ಛತಾ ಕಾರ್ಯವನ್ನು ಕೈಗೊಂಡಿರುವ ಸ್ಥಳೀಯ ನಾಗರಿಕರು, ‘ಎಲೆ ಮಲ್ಲಪ್ಪ ಶೆಟ್ಟಿ ಕೆರೆ ಉಳಿಸಿ’ ಅಭಿಯಾನ ಆರಂಭಿಸಿದ್ದಾರೆ.</p><p>ಮೇಡಹಳ್ಳಿ ರೈಸಿಂಗ್, ದ ಇಂಡಿಯನ್ ಪ್ಲಾಗರ್ಸ್ ಆರ್ಮಿ, ಫ್ರೆಂಡ್ಸ್ ಆಫ್ ಲೇಕ್ಸ್ ಹಾಗೂ ಎಲೆ ಮಲ್ಲಪ್ಪ ಶೆಟ್ಟಿ ಕೆರೆ ಸ್ವಯಂಸೇವಕರ ವತಿಯಿಂದ ಮೇ 25ರಂದು ಸ್ವಚ್ಛತಾ ಕಾರ್ಯವನ್ನು ಆಯೋಜಿಸಲಾಗಿದೆ.</p><p>ಎಲೆ ಮಲ್ಲಪ್ಪ ಶೆಟ್ಟಿ ಕೆರೆಯನ್ನು ಪ್ಲಾಸ್ಟಿಕ್ ರಹಿತ, ಕಸರಹಿತ, ಮಿಶ್ರತ್ಯಾಜ್ಯರಹಿತವನ್ನಾಗಿ ಮಾಡಲು ಸ್ವಚ್ಛತಾ ಕಾರ್ಯ ಒಂದು ಹೆಜ್ಜೆಯಾಗಿದೆ ಎಂದು ಪ್ಲಾಗ್ ರಾಜ್, ಸುಭಾಜಿತ್, ಮಾಧುರಿ ತಿಳಿಸಿದ್ದಾರೆ.</p><p>‘ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್ಜಿಟಿ) ಆದೇಶವಿದೆ, ಸ್ಥಳೀಯರೂ ಹೋರಾಟ ನಡೆಸುತ್ತಿದ್ದಾರೆ. ಇಷ್ಟಾದರೂ ಕೆರೆಯಲ್ಲಿ ಕಟ್ಟಡ ತ್ಯಾಜ್ಯವನ್ನು ಸುರಿಯಲಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಂಡಿಲ್ಲ. ಬಿಬಿಎಂಪಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇತ್ತ ಗಮನಹರಿಸುತ್ತಿಲ್ಲ. ನೂರಾರು ವರ್ಷಗಳ ಇತಿಹಾಸವಿರುವ 490 ಎಕರೆ ವಿಸ್ತೀರ್ಣದಲ್ಲಿರುವ ಎಲೆ ಮಲ್ಲಪ್ಪ ಶೆಟ್ಟಿ ಕೆರೆ ಒತ್ತುವರಿ, ಮಾಲಿನ್ಯದಿಂದ ನಲುಗುತ್ತಿದೆ. ಈ ಕೆರೆಯನ್ನು ಉಳಿಸಿ, ಸಂರಕ್ಷಿಸಲು ಸ್ಥಳೀಯ ಜನರು, ಸಂಘ–ಸಂಸ್ಥೆಗಳು ಹೋರಾಡುತ್ತಿವೆ’ ಎಂದಿದ್ದಾರೆ. ಸಂಪರ್ಕ: 86184 95574</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>