ಈ ಲೋಕಸಭಾ ಚುನಾವಣೆಯಲ್ಲಿಯೂ ಕಾರ್ಯ ನಿರ್ವಹಿಸಲು ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ. ರಾಜ್ಯದಲ್ಲಿ 15,000ಕ್ಕೂ ಅಧಿಕ ಕಾರ್ಯಕರ್ತೆಯರು ಕೆಲಸ ಮಾಡಲಿದ್ದಾರೆ. ಅವರಿಗೆ ಊಟ, ತಿಂಡಿ, ಟಿಎ, ಡಿಎ ಜೊತೆಗೆ ಸಂಭಾವನೆಯನ್ನು ನೀಡಲು ಆದೇಶಿಸಬೇಕು. ಸರ್ಕಾರಿ, ಅರೆ ಸರ್ಕಾರಿ ನೌಕರರನ್ನು ನಿಯೋಜಿಸಿದರೆ ಸಂಭಾವನೆ ನೀಡುವಂತೆ ಆಶಾ ಕಾರ್ಯಕರ್ತೆಯರಿಗೂ ನೀಡಬೇಕು ಎಂದು ಎಐಯುಟಿಯುಸಿ ಸಂಯೋಜಿತ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ, ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಒತ್ತಾಯಿಸಿದ್ದಾರೆ.