<p>ಬೆಂಗಳೂರು: ಬಿಬಿಎಂಪಿ ಎಂಜಿನಿಯರ್ ಸೇರಿದಂತೆ ಯಾವ ಸಿಬ್ಬಂದಿಗೂ ಚುನಾವಣೆ ಕೆಲಸ ಹೆಚ್ಚುವರಿಯಾಗುವುದಿಲ್ಲ. ಹೊಸ ಕಾಮಗಾರಿಗಳು ಆರಂಭವಾಗದಿರುವುದರಿಂದ ಆ ಸಮಯವನ್ನು ಚುನಾವಣೆ ಕೆಲಸಕ್ಕೆ ನೀಡಬಹುದು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.</p>.<p>ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಹೊಸ ಟೆಂಡರ್, ಹೊಸ ಕಾರ್ಯಾದೇಶ, ಹೊಸದಾಗಿ ಕೆಲಸ ಆರಂಭಿಸುವಂತಿಲ್ಲ. ಹೀಗಾಗಿ, ಇದಕ್ಕಾಗಿ ಎಂಜಿನಿಯರ್ಗಳು ಸಾಕಷ್ಟು ಸಮಯವನ್ನು ನೀಡುತ್ತಿದ್ದರು. ಇದೀಗ ಆ ಕೆಲಸ ಇಲ್ಲದಿರುವುದರಿಂದ ಈಗಿರುವ ಕೆಲಸ ಜೊತೆಗೇ ಚುನಾವಣೆ ಕೆಲಸವನ್ನೂ ಮಾಡಬಹುದು ಎಂದು ಸುದ್ದಿಗಾರರಿಗೆ ಶುಕ್ರವಾರ ತಿಳಿಸಿದರು.</p>.<p>ಚುನಾವಣೆ ನೀತಿ ಸಂಹಿತೆ ನಿರ್ವಹಣೆಯ ಜವಾಬ್ದಾರಿಯನ್ನು ಈ ಹಿಂದೆ ಎಂಜಿನಿಯರ್ಗಳಿಗೆ ನೀಡಲಾಗುತ್ತಿತ್ತು. ಕಾಮಗಾರಿ ಕೆಲಸ ಮಾಡುವುದೂ ಅವರೇ, ನೀತಿ ಸಂಹಿತೆ ನಿರ್ವಹಣೆ ಅವರದ್ದೇ ಆದರೆ ಸರಿಯಾಗುವುದಿಲ್ಲ ಎಂದು ಈ ಬಾರಿ ಕೆಎಎಸ್ ಮಟ್ಟದ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.</p>.<p>ರಾಜಕಾಲುವೆ ವಿಭಾಗದ ಯಾವ ಸಿಬ್ಬಂದಿಗೂ ಚುನಾವಣೆ ಕೆಲಸ ನೀಡಲಾಗಿಲ್ಲ. ಹೀಗಾಗಿ ಅವರು ಮಳೆ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವ ಕೆಲಸ ನಿರ್ವಹಿಸಲಿದ್ದಾರೆ. ರಾಜಕಾಲುವೆ ನಿರ್ಮಾಣ ಕಾರ್ಯವೂ ತುರ್ತಾಗಿ ಆಗಲಿದೆ ಎಂದು ತಿಳಿಸಿದರು.</p>.<p>‘ಮಾಹಿತಿ ಸಂಗ್ರಹಿಸಿದರೆ ಕ್ರಮ’</p>.<p>‘ಯಾವುದೇ ಪಕ್ಷ, ಅಭ್ಯರ್ಥಿ ಸೇರಿದಂತೆ ಯಾರೂ ನಾಗರಿಕರ ಮಾಹಿತಿ ಸಂಗ್ರಹಿಸಲು ಅವಕಾಶ ಇಲ್ಲ. ಇಂತಹ ಕೆಲಸ ಮಾಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.</p>.<p>‘ನಗರದ ವಿಧಾನಸಭೆ ಕ್ಷೇತ್ರಗಳಲ್ಲಿ ಯಾವುದೇ ಸ್ಥಳದಲ್ಲಿ ಸಂಸ್ಥೆ, ಕಂಪನಿ ಒಳಗೊಂಡಂತೆ ಯಾರೂ ನಾಗರಿಕರಿಂದ ಮೊಬೈಲ್ ಸಂಖ್ಯೆ ಸೇರಿ ಯಾವ ಮಾಹಿತಿಯನ್ನೂ ಸಂಗ್ರಹಿಸುವಂತಿಲ್ಲ. ಮಹದೇವಪುರ ವ್ಯಾಪ್ತಿಯಲ್ಲಿ ಇಂತಹ ಪ್ರಕರಣವಾಗಿರುವ ಮಾಹಿತಿ ಇದ್ದು, ಜಿಲ್ಲಾಧಿಕಾರಿಯವರು ಕ್ರಮ ಕೈಗೊಳ್ಳುತ್ತಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬಿಬಿಎಂಪಿ ಎಂಜಿನಿಯರ್ ಸೇರಿದಂತೆ ಯಾವ ಸಿಬ್ಬಂದಿಗೂ ಚುನಾವಣೆ ಕೆಲಸ ಹೆಚ್ಚುವರಿಯಾಗುವುದಿಲ್ಲ. ಹೊಸ ಕಾಮಗಾರಿಗಳು ಆರಂಭವಾಗದಿರುವುದರಿಂದ ಆ ಸಮಯವನ್ನು ಚುನಾವಣೆ ಕೆಲಸಕ್ಕೆ ನೀಡಬಹುದು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.</p>.<p>ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಹೊಸ ಟೆಂಡರ್, ಹೊಸ ಕಾರ್ಯಾದೇಶ, ಹೊಸದಾಗಿ ಕೆಲಸ ಆರಂಭಿಸುವಂತಿಲ್ಲ. ಹೀಗಾಗಿ, ಇದಕ್ಕಾಗಿ ಎಂಜಿನಿಯರ್ಗಳು ಸಾಕಷ್ಟು ಸಮಯವನ್ನು ನೀಡುತ್ತಿದ್ದರು. ಇದೀಗ ಆ ಕೆಲಸ ಇಲ್ಲದಿರುವುದರಿಂದ ಈಗಿರುವ ಕೆಲಸ ಜೊತೆಗೇ ಚುನಾವಣೆ ಕೆಲಸವನ್ನೂ ಮಾಡಬಹುದು ಎಂದು ಸುದ್ದಿಗಾರರಿಗೆ ಶುಕ್ರವಾರ ತಿಳಿಸಿದರು.</p>.<p>ಚುನಾವಣೆ ನೀತಿ ಸಂಹಿತೆ ನಿರ್ವಹಣೆಯ ಜವಾಬ್ದಾರಿಯನ್ನು ಈ ಹಿಂದೆ ಎಂಜಿನಿಯರ್ಗಳಿಗೆ ನೀಡಲಾಗುತ್ತಿತ್ತು. ಕಾಮಗಾರಿ ಕೆಲಸ ಮಾಡುವುದೂ ಅವರೇ, ನೀತಿ ಸಂಹಿತೆ ನಿರ್ವಹಣೆ ಅವರದ್ದೇ ಆದರೆ ಸರಿಯಾಗುವುದಿಲ್ಲ ಎಂದು ಈ ಬಾರಿ ಕೆಎಎಸ್ ಮಟ್ಟದ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.</p>.<p>ರಾಜಕಾಲುವೆ ವಿಭಾಗದ ಯಾವ ಸಿಬ್ಬಂದಿಗೂ ಚುನಾವಣೆ ಕೆಲಸ ನೀಡಲಾಗಿಲ್ಲ. ಹೀಗಾಗಿ ಅವರು ಮಳೆ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವ ಕೆಲಸ ನಿರ್ವಹಿಸಲಿದ್ದಾರೆ. ರಾಜಕಾಲುವೆ ನಿರ್ಮಾಣ ಕಾರ್ಯವೂ ತುರ್ತಾಗಿ ಆಗಲಿದೆ ಎಂದು ತಿಳಿಸಿದರು.</p>.<p>‘ಮಾಹಿತಿ ಸಂಗ್ರಹಿಸಿದರೆ ಕ್ರಮ’</p>.<p>‘ಯಾವುದೇ ಪಕ್ಷ, ಅಭ್ಯರ್ಥಿ ಸೇರಿದಂತೆ ಯಾರೂ ನಾಗರಿಕರ ಮಾಹಿತಿ ಸಂಗ್ರಹಿಸಲು ಅವಕಾಶ ಇಲ್ಲ. ಇಂತಹ ಕೆಲಸ ಮಾಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.</p>.<p>‘ನಗರದ ವಿಧಾನಸಭೆ ಕ್ಷೇತ್ರಗಳಲ್ಲಿ ಯಾವುದೇ ಸ್ಥಳದಲ್ಲಿ ಸಂಸ್ಥೆ, ಕಂಪನಿ ಒಳಗೊಂಡಂತೆ ಯಾರೂ ನಾಗರಿಕರಿಂದ ಮೊಬೈಲ್ ಸಂಖ್ಯೆ ಸೇರಿ ಯಾವ ಮಾಹಿತಿಯನ್ನೂ ಸಂಗ್ರಹಿಸುವಂತಿಲ್ಲ. ಮಹದೇವಪುರ ವ್ಯಾಪ್ತಿಯಲ್ಲಿ ಇಂತಹ ಪ್ರಕರಣವಾಗಿರುವ ಮಾಹಿತಿ ಇದ್ದು, ಜಿಲ್ಲಾಧಿಕಾರಿಯವರು ಕ್ರಮ ಕೈಗೊಳ್ಳುತ್ತಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>