‘ಒಮ್ಮೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ ನಂತರ ಆ ಪ್ರಕ್ರಿಯೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡಬಾರದು ಎಂದು ಕಾನೂನು ಸ್ಪಷ್ಟವಾಗಿ ಹೇಳುತ್ತದೆ. ಆದರೂ ಚುನಾವಣೆಗೆ ಸಂಬಂಧಿಸಿದ ಯಾವುದೇ ನಿಯಮಗಳು ಉಲ್ಲಂಘನೆಯಾಗುತ್ತಿವೆ ಎಂಬ ಬಗ್ಗೆ ಅರ್ಜಿದಾರರಿಗೆ ಆಕ್ಷೇಪ ಇದ್ದಲ್ಲಿ ಮತ್ತು ಚುನಾವಣೆಯ ಕಾನೂನು ಬದ್ಧತೆಯನ್ನು ಚುನಾವಣೆ ಮುಗಿದ ನಂತರವೇ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಬೇಕಿರುತ್ತದೆ. ಆದ್ದರಿಂದ, ನಿಗದಿಯಂತೆ ನೌಕರರ ಸಂಘವು ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಸಬಹುದು’ ಎಂದು ನ್ಯಾಯಪೀಠ ತಿಳಿಸಿದೆ.