ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸೇರ್ಪಡೆ ಮತ್ತು ರದ್ದತಿ ಮಾಡಲಾದ ಮತದಾರರ ಪಟ್ಟಿಯ ಬಗ್ಗೆ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪದಾಧಿಕಾರಿಗಳೊಂದಿಗೆವಿಶೇಷ ಅಧಿಕಾರಿ ಅಜಯ್ ನಾಗಭೂಷಣ್ ಬುಧವಾರ ಸಭೆ ನಡೆಸಲಿದ್ದಾರೆ. ಮಹದೇವಪುರ ವಲಯದ ಜಂಟಿ ಆಯುಕ್ತರವರ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂದು ಕಂದಾಯ ಅಧಿಕಾರಿ ಶ್ರೀನಿವಾಸ್ ತಿಳಿಸಿದ್ದಾರೆ.