<p><strong>ಯಲಹಂಕ</strong>: ‘ಕೋವಿಡ್ ಸಂಕಷ್ಟದಿಂದ ತತ್ತರಿಸಿರುವ ರಾಜ್ಯದ ಜನತೆಗೆ ವಿದ್ಯುತ್ ಬೆಲೆ ಏರಿಕೆಯ ಬರೆ ಎಳೆದಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ’ ಎಂದು ಜಯ ಜಯ ಕರ್ನಾಟಕ ಜನಪರ ವೇದಿಕೆ ಹೇಳಿದೆ.</p>.<p>ವೇದಿಕೆಯ ಬೆಂಗಳೂರು ಜಿಲ್ಲಾ ಅಧ್ಯಕ್ಷ ಜೆ.ಶ್ರೀನಿವಾಸ, ‘2020 ರ ನಂತರ ಪ್ರತಿ ಯುನಿಟ್ಗೆ 40 ಪೈಸೆಯಷ್ಟು ಏರಿಸಿದ್ದ ವಿದ್ಯುತ್ ದರವನ್ನು ಈಗ ಮತ್ತೆ ಪ್ರತಿ ಯುನಿಟ್ಗೆ 30 ಪೈಸೆ ಏರಿಸಲಾಗಿದೆ. ಆ ಮೂಲಕ ಜನರ ಮೇಲೆ ಸರ್ಕಾರ ದೊಡ್ಡ ಹೊರೆ ಹೊರೆಸಿದೆ’ ಎಂದು ದೂರಿದರು.</p>.<p>‘ವಿದ್ಯುತ್ ಸರಬರಾಜು ಕಂಪನಿಗಳು ನಷ್ಟದಲ್ಲಿವೆ ಎಂದು ಹೇಳುವ ಸರ್ಕಾರ, ಮೊದಲು ದುಬಾರಿ ಬೆಲೆಗೆ ವಿದ್ಯುತ್ ಖರೀದಿಸುವುದನ್ನು ನಿಲ್ಲಿಸಬೇಕು. ವಿದ್ಯುತ್ ಉತ್ಪಾದನೆ ಹೆಚ್ಚಿಸಿ, ಸೋರಿಕೆ ತಡೆಗಟ್ಟಬೇಕು. ಇಲಾಖೆಯಲ್ಲಿರುವ ಲೋಪಧೋಷಗಳನ್ನು ಸರಿಪಡಿಸಿದರೆ ಸಾಕಷ್ಟು ಸಮಸ್ಯೆಗಳು ಬಗೆಹರಿಯಲಿವೆ’ ಎಂದರು.</p>.<p>‘ಈಗಾಗಲೇ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯವಸ್ತುಗಳ ಬೆಲೆ ವಿಪರೀತ ಏರಿಕೆಯಾಗಿದ್ದು, ಇಂತಹ ಸಂದರ್ಭದಲ್ಲಿ ವಿದ್ಯುತ್ ದರ ಹೆಚ್ಚಳ ಸರಿಯಲ್ಲ. ಮುಖ್ಯಮಂತ್ರಿಗಳು ಕೂಡಲೇ ದರಏರಿಕೆ ಮಾಡದಂತೆ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳಿಗೆ ಆದೇಶ ನೀಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ</strong>: ‘ಕೋವಿಡ್ ಸಂಕಷ್ಟದಿಂದ ತತ್ತರಿಸಿರುವ ರಾಜ್ಯದ ಜನತೆಗೆ ವಿದ್ಯುತ್ ಬೆಲೆ ಏರಿಕೆಯ ಬರೆ ಎಳೆದಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ’ ಎಂದು ಜಯ ಜಯ ಕರ್ನಾಟಕ ಜನಪರ ವೇದಿಕೆ ಹೇಳಿದೆ.</p>.<p>ವೇದಿಕೆಯ ಬೆಂಗಳೂರು ಜಿಲ್ಲಾ ಅಧ್ಯಕ್ಷ ಜೆ.ಶ್ರೀನಿವಾಸ, ‘2020 ರ ನಂತರ ಪ್ರತಿ ಯುನಿಟ್ಗೆ 40 ಪೈಸೆಯಷ್ಟು ಏರಿಸಿದ್ದ ವಿದ್ಯುತ್ ದರವನ್ನು ಈಗ ಮತ್ತೆ ಪ್ರತಿ ಯುನಿಟ್ಗೆ 30 ಪೈಸೆ ಏರಿಸಲಾಗಿದೆ. ಆ ಮೂಲಕ ಜನರ ಮೇಲೆ ಸರ್ಕಾರ ದೊಡ್ಡ ಹೊರೆ ಹೊರೆಸಿದೆ’ ಎಂದು ದೂರಿದರು.</p>.<p>‘ವಿದ್ಯುತ್ ಸರಬರಾಜು ಕಂಪನಿಗಳು ನಷ್ಟದಲ್ಲಿವೆ ಎಂದು ಹೇಳುವ ಸರ್ಕಾರ, ಮೊದಲು ದುಬಾರಿ ಬೆಲೆಗೆ ವಿದ್ಯುತ್ ಖರೀದಿಸುವುದನ್ನು ನಿಲ್ಲಿಸಬೇಕು. ವಿದ್ಯುತ್ ಉತ್ಪಾದನೆ ಹೆಚ್ಚಿಸಿ, ಸೋರಿಕೆ ತಡೆಗಟ್ಟಬೇಕು. ಇಲಾಖೆಯಲ್ಲಿರುವ ಲೋಪಧೋಷಗಳನ್ನು ಸರಿಪಡಿಸಿದರೆ ಸಾಕಷ್ಟು ಸಮಸ್ಯೆಗಳು ಬಗೆಹರಿಯಲಿವೆ’ ಎಂದರು.</p>.<p>‘ಈಗಾಗಲೇ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯವಸ್ತುಗಳ ಬೆಲೆ ವಿಪರೀತ ಏರಿಕೆಯಾಗಿದ್ದು, ಇಂತಹ ಸಂದರ್ಭದಲ್ಲಿ ವಿದ್ಯುತ್ ದರ ಹೆಚ್ಚಳ ಸರಿಯಲ್ಲ. ಮುಖ್ಯಮಂತ್ರಿಗಳು ಕೂಡಲೇ ದರಏರಿಕೆ ಮಾಡದಂತೆ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳಿಗೆ ಆದೇಶ ನೀಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>