ಕೆಂಗೇರಿ–4ನೇ ಉಪವಿಭಾಗದಲ್ಲಿ ವಿದ್ಯುತ್ ಪರಿವರ್ತಕ ಸ್ಫೋಟಗೊಳ್ಳುವ ಮುನ್ನವೇ ಸಾರ್ವಜನಿಕರು ’1912’ ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಆದರೆ, ಸಹಾಯವಾಣಿಯಲ್ಲಿನ ಸಿಬ್ಬಂದಿ ಕೆಂಗೇರಿ 4ನೇ ಉಪವಿಭಾಗದ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿಗೆ ಸಕಾಲದಲ್ಲಿ ಮಾಹಿತಿ ನೀಡಿಲ್ಲ. ಈ ಅವಘಡ ಸಂಭವಿಸಿದ ನಂತರ, ಸಹಾಯವಾಣಿ ಸಿಬ್ಬಂದಿಗಳಿಗೆ ದೂರವಾಣಿ ಮೂಲಕ ಸಂದೇಶ ರವಾನೆಯಾಗಿರುವುದು ತಿಳಿದು ಬಂದಿದೆ ಎಂದು ಸಂಘದ ಕಾರ್ಯದರ್ಶಿ ಎಸ್. ಕುಮಾರ್ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.