‘ಶ್ರೀವರ್ಧನ್ ಅವರೇ ನಾಲ್ಕು ಮಹಡಿಯ ಮನೆ ನಿರ್ಮಿಸುತ್ತಿದ್ದರು. ಅಲ್ಲಿ ಕೆಲಸ ಮಾಡುತ್ತಿದ್ದ ವಿಷ್ಣುಕುಮಾರ್, ಮಹಡಿಯ ಸರಳುಗಳನ್ನು ಜೋಡಿಸುತ್ತಿದ್ದರು. ಒಂದು ಸರಳು ಕಟ್ಟಡದ ಪಕ್ಕದಲ್ಲೇ ಹಾದುಹೋಗಿರುವ ವಿದ್ಯುತ್ ತಂತಿಗೆ ತಗುಲಿತ್ತು. ಕ್ಷಣಮಾತ್ರದಲ್ಲಿ ಸರಳುಗಳಲ್ಲಿ ವಿದ್ಯುತ್ ಪ್ರವಹಿಸಿ ವಿಷ್ಣಕುಮಾರ್ ಅವರಿಗೆ ತಗುಲಿತ್ತು. ಸ್ಥಳದಲ್ಲೇ ಅವರು ಮೃತಪಟ್ಟರು. ಈ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿಕೆ ನೀಡಿದ್ದಾರೆ’ ಎಂದೂ ಪೊಲೀಸರು ತಿಳಿಸಿದರು.