ಬೆಂಗಳೂರಿನ ಇತರೆ ಕಚೇರಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಕೆ.ಆರ್.ಪುರಂ, ಸೇರಿದಂತೆ ಹಲವು ಕಚೇರಿಗಳಿಗೆ, ಏಳು ಬ್ರೇಕ್ ಇನ್ಸ್ಪೆಕ್ಟರ್ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಕೆಲವರು ಸಮಂಜಸ ಉತ್ತರ ನೀಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪರೀಕ್ಷೆ ನಡೆಸದೇ ಪರವಾನಗಿ ನೀಡಿದ್ದಾರೆ. ಹಾಗಾಗಿ, ಡಿಎಲ್ ವಿಭಾಗದ ಮುಖ್ಯಸ್ಥರಾಗಿದ್ದ ಕೃಷ್ಣಾನಂದ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವಿವರ ನೀಡಿದರು.