‘ಅರ್ಚನಾ ರೆಡ್ಡಿ (42) ಕೊಲೆಯಾದವರು. ಮೂಲತಃ ಜಿಗಣಿಯವರಾದ ಅವರು ಪ್ರಸ್ತುತ ಬೆಳ್ಳಂದೂರಿನಲ್ಲಿ ವಾಸವಿದ್ದರು. ಸೋಮವಾರ ಜಿಗಣಿ ಪುರಸಭೆಗೆ ಮತದಾನ ನಡೆದಿತ್ತು. ಮತ ಹಾಕಲು ಹೋಗಿದ್ದ ಅರ್ಚನಾ, ರಾತ್ರಿ 10.30ರ ಸುಮಾರಿಗೆ ಮಗನೊಂದಿಗೆ ಮನೆಗೆ ಮರಳುತ್ತಿದ್ದರು. ಹೊಸರೋಡ್ ಸಿಗ್ನಲ್ ಬಳಿ ಕಾರು ಅಡ್ಡಗಟ್ಟಿದ್ದ ಆರೋಪಿಗಳು ಮಚ್ಚು ಮತ್ತು ಲಾಂಗ್ಗಳಿಂದ ಅರ್ಚನಾ ಮೇಲೆ ಮನಸೋ ಇಚ್ಛೆ ದಾಳಿ ನಡೆಸಿದ್ದರು. ಇದನ್ನು ಕಂಡು ಭಯಭೀತರಾಗಿದ್ದ ಕಾರು ಚಾಲಕ ಹಾಗೂ ಅರ್ಚನಾ ಅವರ ಮಗ ಕಾರಿನಿಂದ ಇಳಿದು ಪರಾರಿಯಾಗಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.