<p><strong>ಆನೇಕಲ್:</strong> ತಾಯಿಯಿಂದ ಬೇರ್ಪಟ್ಟು ಒಂದು ತಿಂಗಳಿನಿಂದ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಆರೈಕೆಯಲ್ಲಿದ್ದ ಮರಿಯಾನೆ ಸರಸ್ವತಿ ಶುಕ್ರವಾರ ಬೆಳಗಿನ ಜಾವ ಮೃತಪಟ್ಟಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕಿ ವನಶ್ರೀ ವಿಪಿನ್ ಸಿಂಗ್ ತಿಳಿಸಿದ್ದಾರೆ.</p>.<p>ಮಾರ್ಚ್ 3ರಂದು ಆನೆ ಹಿಂಡಿನಿಂದ ಬೇರ್ಪಟ್ಟು ರಾಗಿಹಳ್ಳಿ ಸಮೀಪ ಈ ಮರಿಯಾನೆ ಕಾಣಿಸಿಕೊಂಡಿತ್ತು. ಸಂರಕ್ಷಿಸಿ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಆರೈಕೆ ಮಾಡಲಾಗುತ್ತಿತ್ತು. ಮರಿಯಾನೆ ಕೆಲ ದಿನಗಳಿಂದ ಅತಿಸಾರ ಬೇಧಿಯಿಂದ ಬಳಲುತ್ತಿತ್ತು. ಗುರುವಾರ ರಾತ್ರಿ ಹೊಟ್ಟನೋವು ಮತ್ತು ಅತಿಸಾರ ಬೇಧಿ ಹೆಚ್ಚಾಗಿತ್ತು. ಬನ್ನೇರುಘಟ್ಟದ ಜೈವಿಕ ಉದ್ಯಾನದ ವೈದ್ಯರು ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.</p>.<p>ಆನೆ ಮರಿಯನ್ನು ಉಳಿಸಿಕೊಳ್ಳುವ ಸಂಬಂಧ ಸ್ವತಃ ಅರಣ್ಯ ಸಚಿವ ಆನಂದ್ ಸಿಂಗ್ ಅವರು ಮೂರು ಬಾರಿ ಉದ್ಯಾನಕ್ಕೆ ಭೇಟಿ ನೀಡಿ ಜತನದಿಂದ ನೋಡಿಕೊಳ್ಳುವಂತೆ ಸೂಚನೆ ನೀಡಿದ್ದರು. ತಾಯಿಯೊಂದಿಗೆ ಸೇರಿಸುವ ಪ್ರಯತ್ನ ಸಹ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ತಾಯಿಯಿಂದ ಬೇರ್ಪಟ್ಟು ಒಂದು ತಿಂಗಳಿನಿಂದ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಆರೈಕೆಯಲ್ಲಿದ್ದ ಮರಿಯಾನೆ ಸರಸ್ವತಿ ಶುಕ್ರವಾರ ಬೆಳಗಿನ ಜಾವ ಮೃತಪಟ್ಟಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕಿ ವನಶ್ರೀ ವಿಪಿನ್ ಸಿಂಗ್ ತಿಳಿಸಿದ್ದಾರೆ.</p>.<p>ಮಾರ್ಚ್ 3ರಂದು ಆನೆ ಹಿಂಡಿನಿಂದ ಬೇರ್ಪಟ್ಟು ರಾಗಿಹಳ್ಳಿ ಸಮೀಪ ಈ ಮರಿಯಾನೆ ಕಾಣಿಸಿಕೊಂಡಿತ್ತು. ಸಂರಕ್ಷಿಸಿ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಆರೈಕೆ ಮಾಡಲಾಗುತ್ತಿತ್ತು. ಮರಿಯಾನೆ ಕೆಲ ದಿನಗಳಿಂದ ಅತಿಸಾರ ಬೇಧಿಯಿಂದ ಬಳಲುತ್ತಿತ್ತು. ಗುರುವಾರ ರಾತ್ರಿ ಹೊಟ್ಟನೋವು ಮತ್ತು ಅತಿಸಾರ ಬೇಧಿ ಹೆಚ್ಚಾಗಿತ್ತು. ಬನ್ನೇರುಘಟ್ಟದ ಜೈವಿಕ ಉದ್ಯಾನದ ವೈದ್ಯರು ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.</p>.<p>ಆನೆ ಮರಿಯನ್ನು ಉಳಿಸಿಕೊಳ್ಳುವ ಸಂಬಂಧ ಸ್ವತಃ ಅರಣ್ಯ ಸಚಿವ ಆನಂದ್ ಸಿಂಗ್ ಅವರು ಮೂರು ಬಾರಿ ಉದ್ಯಾನಕ್ಕೆ ಭೇಟಿ ನೀಡಿ ಜತನದಿಂದ ನೋಡಿಕೊಳ್ಳುವಂತೆ ಸೂಚನೆ ನೀಡಿದ್ದರು. ತಾಯಿಯೊಂದಿಗೆ ಸೇರಿಸುವ ಪ್ರಯತ್ನ ಸಹ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>