<p><strong>ಬೆಂಗಳೂರು:</strong> ನಗರದಲ್ಲಿ ಯಾವುದೇ ಕಾರಣಕ್ಕೂ ಎಲಿವೇಟೆಡ್ ಕಾರಿಡಾರ್ ನಿರ್ಮಿಸಬಾರದು ಎಂದು ಸಿಟಿಜನ್ಸ್ ಫಾರ್ ಬೆಂಗಳೂರು (ಸಿಎಫ್ಬಿ) ಹಾಗೂ ಮಲ್ಲೇಶ್ವರ ಸ್ವಾಭಿಮಾನ ಸಂಸ್ಥೆಯ ಪ್ರತಿನಿಧಿಗಳು ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.</p>.<p>ಸಾರ್ವಜನಿಕ ಸಾರಿಗೆ ಉತ್ತೇಜಿಸಲು ಕ್ರಮ ತೆಗೆದುಕೊಳ್ಳಬೇಕು.ಬಸ್ ಪ್ರಯಾಣ ದರವನ್ನು ಕಡಿಮೆಗೊಳಿಸಬೇಕು. ಉಪನಗರ ರೈಲು ಯೋಜನೆಗೆ ಬೇಗ ಅನುಮತಿ ಪಡೆಯಬೇಕು ಮತ್ತು ಬಸ್ ಆದ್ಯತಾ ಪಥ ನಿರ್ಮಾಣ ಕಾರ್ಯ ಚುರುಕುಗೊಳಿಸಬೇಕು. ಈ ಎರಡು ಸೌಲಭ್ಯಗಳಿದ್ದರೆ ಸಾಕು. ಆದರೆ, ಯಾವುದೇ ಕಾರಣಕ್ಕೂ ಎಲಿವೇಟೆಡ್ ಕಾರಿಡಾರ್ ಬೇಡ’ ಎಂದು ಸಂಘಟನೆಗಳಪ್ರತಿನಿಧಿಗಳು ಮನವಿ ಮಾಡಿದರು.</p>.<p>‘ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಬೇಡ ಎಂದು ನೂರಾರು ನಾಗರಿಕ ಸಂಸ್ಥೆಗಳು ಹಲವು ಬಾರಿ ಮನವಿ ಸಲ್ಲಿಸಿವೆ. ಪ್ರತಿಪಕ್ಷದಲ್ಲಿದ್ದಾಗ ಬಿಜೆಪಿಯೂ ಈ ಯೋಜನೆಯನ್ನು ವಿರೋಧಿಸಿತ್ತು. ಈಗ ಆ ಪಕ್ಷದ ಶಾಸಕರೇ ಒತ್ತಾಯಿಸುತ್ತಿರುವುದು<br />ಎಷ್ಟು ಸರಿ’ ಎಂದು ಪ್ರತಿನಿಧಿಗಳು ಪ್ರಶ್ನಿಸಿದರು.</p>.<p>‘ಪೆರಿಫೆರಲ್ ವರ್ತುಲ ರಸ್ತೆಗಳ ನಿರ್ಮಾಣ ಮತ್ತು ಇತರೆ ಯೋಜನೆಗಳಂತೆ, ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಬಜೆಟ್ನಲ್ಲಿ ಹಣ ಮೀಸಲಿಡುವಂತೆ ಕೋರಲಾಗಿದೆ. ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಈ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ’ ಎಂದು ಅಶ್ವತ್ಥನಾರಾಯಣ ಹೇಳಿದರು.</p>.<p>‘ನಗರದ ಅತಿ ದಟ್ಟಣೆಯ 12 ಮಾರ್ಗಗಳಲ್ಲಿ ಬಸ್ ಆದ್ಯತಾ ಪಥ ನಿರ್ಮಾಣಕ್ಕೆ ಆದ್ಯತೆ ನೀಡುತ್ತೇವೆ. ಉಪನಗರ ರೈಲು ಯೋಜನೆಗೆ ಶೀಘ್ರದಲ್ಲಿಯೇ ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು (ಸಿಸಿಇಎ) ಅನುಮತಿ ನೀಡಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಯಾವುದೇ ಕಾರಣಕ್ಕೂ ಎಲಿವೇಟೆಡ್ ಕಾರಿಡಾರ್ ನಿರ್ಮಿಸಬಾರದು ಎಂದು ಸಿಟಿಜನ್ಸ್ ಫಾರ್ ಬೆಂಗಳೂರು (ಸಿಎಫ್ಬಿ) ಹಾಗೂ ಮಲ್ಲೇಶ್ವರ ಸ್ವಾಭಿಮಾನ ಸಂಸ್ಥೆಯ ಪ್ರತಿನಿಧಿಗಳು ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.</p>.<p>ಸಾರ್ವಜನಿಕ ಸಾರಿಗೆ ಉತ್ತೇಜಿಸಲು ಕ್ರಮ ತೆಗೆದುಕೊಳ್ಳಬೇಕು.ಬಸ್ ಪ್ರಯಾಣ ದರವನ್ನು ಕಡಿಮೆಗೊಳಿಸಬೇಕು. ಉಪನಗರ ರೈಲು ಯೋಜನೆಗೆ ಬೇಗ ಅನುಮತಿ ಪಡೆಯಬೇಕು ಮತ್ತು ಬಸ್ ಆದ್ಯತಾ ಪಥ ನಿರ್ಮಾಣ ಕಾರ್ಯ ಚುರುಕುಗೊಳಿಸಬೇಕು. ಈ ಎರಡು ಸೌಲಭ್ಯಗಳಿದ್ದರೆ ಸಾಕು. ಆದರೆ, ಯಾವುದೇ ಕಾರಣಕ್ಕೂ ಎಲಿವೇಟೆಡ್ ಕಾರಿಡಾರ್ ಬೇಡ’ ಎಂದು ಸಂಘಟನೆಗಳಪ್ರತಿನಿಧಿಗಳು ಮನವಿ ಮಾಡಿದರು.</p>.<p>‘ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಬೇಡ ಎಂದು ನೂರಾರು ನಾಗರಿಕ ಸಂಸ್ಥೆಗಳು ಹಲವು ಬಾರಿ ಮನವಿ ಸಲ್ಲಿಸಿವೆ. ಪ್ರತಿಪಕ್ಷದಲ್ಲಿದ್ದಾಗ ಬಿಜೆಪಿಯೂ ಈ ಯೋಜನೆಯನ್ನು ವಿರೋಧಿಸಿತ್ತು. ಈಗ ಆ ಪಕ್ಷದ ಶಾಸಕರೇ ಒತ್ತಾಯಿಸುತ್ತಿರುವುದು<br />ಎಷ್ಟು ಸರಿ’ ಎಂದು ಪ್ರತಿನಿಧಿಗಳು ಪ್ರಶ್ನಿಸಿದರು.</p>.<p>‘ಪೆರಿಫೆರಲ್ ವರ್ತುಲ ರಸ್ತೆಗಳ ನಿರ್ಮಾಣ ಮತ್ತು ಇತರೆ ಯೋಜನೆಗಳಂತೆ, ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಬಜೆಟ್ನಲ್ಲಿ ಹಣ ಮೀಸಲಿಡುವಂತೆ ಕೋರಲಾಗಿದೆ. ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಈ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ’ ಎಂದು ಅಶ್ವತ್ಥನಾರಾಯಣ ಹೇಳಿದರು.</p>.<p>‘ನಗರದ ಅತಿ ದಟ್ಟಣೆಯ 12 ಮಾರ್ಗಗಳಲ್ಲಿ ಬಸ್ ಆದ್ಯತಾ ಪಥ ನಿರ್ಮಾಣಕ್ಕೆ ಆದ್ಯತೆ ನೀಡುತ್ತೇವೆ. ಉಪನಗರ ರೈಲು ಯೋಜನೆಗೆ ಶೀಘ್ರದಲ್ಲಿಯೇ ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು (ಸಿಸಿಇಎ) ಅನುಮತಿ ನೀಡಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>