<p><strong>ಬೆಂಗಳೂರು:</strong> ಮೈತ್ರಿ ಸರ್ಕಾರದ ಅವಧಿಯಲ್ಲಿ ಕೃಷಿ ಹೊಂಡ, ವೈಟ್ ಟಾಪಿಂಗ್ ಸೇರಿದಂತೆ ವಿವಿಧ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳ ತನಿಖೆಗೆ ಆದೇಶಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈಗ ಎಲಿವೇಟೆಡ್ ಕಾರಿಡಾರ್ಗೆ ಕರೆದಿದ್ದ ಟೆಂಡರ್ ರದ್ದುಪಡಿಸಿದ್ದು, ಪ್ರಧಾನಮಂತ್ರಿ ಆವಾಸ್ ಯೋಜನೆಯ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಸೂಚಿಸಿದ್ದಾರೆ.</p>.<p><strong>ಕಾರಿಡಾರ್:</strong>ಬೆಂಗಳೂರು ನಗರದಲ್ಲಿ ವಾಹನ ಸಂಚಾರ ದಟ್ಟಣೆ ಪರಿಹರಿಸುವ ಸಲುವಾಗಿ ಎಲಿವೇಟೆಡ್ ಕಾರಿಡಾರ್ ರಸ್ತೆ ನಿರ್ಮಾಣಕ್ಕೆ ಆಹ್ವಾನಿಸಿದ್ದ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆದೇಶಿಸಲಾಗಿದೆ. ವಾಸ್ತವ ಅಂದಾಜು ಮೊತ್ತದ ಕ್ರಿಯಾ ಯೋಜನೆಯನ್ನು ಹೊಸದಾಗಿ ತಯಾರಿಸುವಂತೆ ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.</p>.<p>ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್ಡಿಸಿಎಲ್) ಮೂಲಕ ಈ ಯೋಜನೆ ಜಾರಿಗೊಳಿಸಲಾಗಿತ್ತು. 87.87 ಕಿ.ಮೀ ಉದ್ದದ ಕಾರಿಡಾರ್ ರಸ್ತೆಯನ್ನು ನಿರ್ಮಿಸಲು ಉದ್ದೇಶಿಸಿದ್ದು, ಯೋಜನೆಯ ಮೊದಲ ಹಂತದಲ್ಲಿ 21.54 ಕಿ.ಮೀ ನಿರ್ಮಿಸಲು ಯೋಜಿಸಲಾಗಿತ್ತು. ₹6855 ಕೋಟಿ ಮೊತ್ತದಲ್ಲಿ ಯೋಜನೆ ಅನುಷ್ಠಾನಗೊಳಿಸಲು, ಮೂರು ಪ್ಯಾಕೇಜ್ಗಳಲ್ಲಿ ಟೆಂಡರ್ ಆಹ್ವಾನಿಸಲಾಗಿತ್ತು.</p>.<p>ಈ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ ಹಾಗೂ ಕ್ರಿಯಾ ಯೋಜನೆ ತಯಾರಿಸುವಲ್ಲಿ ಅಕ್ರಮಗಳು ನಡೆದಿವೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಟೆಂಡರ್ ಪ್ರಕ್ರಿಯೆ ರದ್ದುಗೊಳಿಸಲಾಗಿದೆ.</p>.<p><strong>ಮನೆ ನೀಡುವಲ್ಲೂ ಅಕ್ರಮ:</strong>ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ‘ಎಲ್ಲರಿಗೂ ಸೂರು’ ಎಂಬ ಗುರಿಯೊಂದಿಗೆ ಆರಂಭಿಸಿದ ವಸತಿ ಯೋಜನೆಯಲ್ಲೂ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಬಗ್ಗೆ ತನಿಖೆ ನಡೆಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಆದೇಶಿಸಲಾಗಿದೆ.</p>.<p>2017–2018ನೇ ಸಾಲಿನಲ್ಲಿ 49,368 ಮನೆಗಳನ್ನು ₹2661 ಕೋಟಿ ವೆಚ್ಚದಲ್ಲಿ ನಿರ್ಮಿಸಲು 2017 ಸೆಪ್ಟೆಂಬರ್ 12ರಂದು ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.</p>.<p><strong>ಕಸ ಸಂಗ್ರಹ ಡಬ್ಬ:</strong>ಬೆಂಗಳೂರು ನಗರ ವ್ಯಾಪ್ತಿಯಲ್ಲಿ 2016–17ರಲ್ಲಿ ₹55.27 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿದ್ದ ತ್ಯಾಜ್ಯ ಸಂಗ್ರಹ, ಸಾಗಣೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆಯೂ ತನಿಖೆಗೆ ಸೂಚಿಸಲಾಗಿದೆ.</p>.<p>ಆಯ್ದ 200 ಸ್ಥಳಗಳಲ್ಲಿ ತಲಾ ಎರಡರಂತೆ ಕಸ ಸಂಗ್ರಹ ಡಬ್ಬಗಳ ಅಳವಡಿಕೆ, ಈ ಡಬ್ಬಗಳಲ್ಲಿ ಸಂಗ್ರಹವಾದ ತ್ಯಾಜ್ಯ ಸಾಗಣೆ ಮಾಡಲು ಕ್ರೇನ್ಗಳನ್ನು ಒಳಗೊಂಡ 8 ಟ್ರಕ್ ಬಳಕೆ, ತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ ಸಾಗಣೆ ಹಾಗೂ 60 ತಿಂಗಳ ನಿರ್ವಹಣೆ ಮಾಡುವ ಗುತ್ತಿಗೆ ನೀಡಲಾಗಿತ್ತು. 2017ರಲ್ಲಿ ಕಾರ್ಯಾದೇಶ ನೀಡಲಾಗಿತ್ತು.</p>.<p>ಈ ಯೋಜನೆ ಗಮನಿಸಿದರೆ ನಗರದ ಶೇ 10ರಷ್ಟು ಸ್ಥಳಗಳಲ್ಲೂ ಕಸ ಸಂಗ್ರಹ ಡಬ್ಬಗಳನ್ನು ಅಳವಡಿಸದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸಮಗ್ರವಾಗಿ ತನಿಖೆ ನಡೆಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಆದೇಶಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮೈತ್ರಿ ಸರ್ಕಾರದ ಅವಧಿಯಲ್ಲಿ ಕೃಷಿ ಹೊಂಡ, ವೈಟ್ ಟಾಪಿಂಗ್ ಸೇರಿದಂತೆ ವಿವಿಧ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮಗಳ ತನಿಖೆಗೆ ಆದೇಶಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈಗ ಎಲಿವೇಟೆಡ್ ಕಾರಿಡಾರ್ಗೆ ಕರೆದಿದ್ದ ಟೆಂಡರ್ ರದ್ದುಪಡಿಸಿದ್ದು, ಪ್ರಧಾನಮಂತ್ರಿ ಆವಾಸ್ ಯೋಜನೆಯ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಸೂಚಿಸಿದ್ದಾರೆ.</p>.<p><strong>ಕಾರಿಡಾರ್:</strong>ಬೆಂಗಳೂರು ನಗರದಲ್ಲಿ ವಾಹನ ಸಂಚಾರ ದಟ್ಟಣೆ ಪರಿಹರಿಸುವ ಸಲುವಾಗಿ ಎಲಿವೇಟೆಡ್ ಕಾರಿಡಾರ್ ರಸ್ತೆ ನಿರ್ಮಾಣಕ್ಕೆ ಆಹ್ವಾನಿಸಿದ್ದ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆದೇಶಿಸಲಾಗಿದೆ. ವಾಸ್ತವ ಅಂದಾಜು ಮೊತ್ತದ ಕ್ರಿಯಾ ಯೋಜನೆಯನ್ನು ಹೊಸದಾಗಿ ತಯಾರಿಸುವಂತೆ ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.</p>.<p>ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್ಡಿಸಿಎಲ್) ಮೂಲಕ ಈ ಯೋಜನೆ ಜಾರಿಗೊಳಿಸಲಾಗಿತ್ತು. 87.87 ಕಿ.ಮೀ ಉದ್ದದ ಕಾರಿಡಾರ್ ರಸ್ತೆಯನ್ನು ನಿರ್ಮಿಸಲು ಉದ್ದೇಶಿಸಿದ್ದು, ಯೋಜನೆಯ ಮೊದಲ ಹಂತದಲ್ಲಿ 21.54 ಕಿ.ಮೀ ನಿರ್ಮಿಸಲು ಯೋಜಿಸಲಾಗಿತ್ತು. ₹6855 ಕೋಟಿ ಮೊತ್ತದಲ್ಲಿ ಯೋಜನೆ ಅನುಷ್ಠಾನಗೊಳಿಸಲು, ಮೂರು ಪ್ಯಾಕೇಜ್ಗಳಲ್ಲಿ ಟೆಂಡರ್ ಆಹ್ವಾನಿಸಲಾಗಿತ್ತು.</p>.<p>ಈ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ ಹಾಗೂ ಕ್ರಿಯಾ ಯೋಜನೆ ತಯಾರಿಸುವಲ್ಲಿ ಅಕ್ರಮಗಳು ನಡೆದಿವೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಟೆಂಡರ್ ಪ್ರಕ್ರಿಯೆ ರದ್ದುಗೊಳಿಸಲಾಗಿದೆ.</p>.<p><strong>ಮನೆ ನೀಡುವಲ್ಲೂ ಅಕ್ರಮ:</strong>ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ‘ಎಲ್ಲರಿಗೂ ಸೂರು’ ಎಂಬ ಗುರಿಯೊಂದಿಗೆ ಆರಂಭಿಸಿದ ವಸತಿ ಯೋಜನೆಯಲ್ಲೂ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಬಗ್ಗೆ ತನಿಖೆ ನಡೆಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಆದೇಶಿಸಲಾಗಿದೆ.</p>.<p>2017–2018ನೇ ಸಾಲಿನಲ್ಲಿ 49,368 ಮನೆಗಳನ್ನು ₹2661 ಕೋಟಿ ವೆಚ್ಚದಲ್ಲಿ ನಿರ್ಮಿಸಲು 2017 ಸೆಪ್ಟೆಂಬರ್ 12ರಂದು ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.</p>.<p><strong>ಕಸ ಸಂಗ್ರಹ ಡಬ್ಬ:</strong>ಬೆಂಗಳೂರು ನಗರ ವ್ಯಾಪ್ತಿಯಲ್ಲಿ 2016–17ರಲ್ಲಿ ₹55.27 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿದ್ದ ತ್ಯಾಜ್ಯ ಸಂಗ್ರಹ, ಸಾಗಣೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆಯೂ ತನಿಖೆಗೆ ಸೂಚಿಸಲಾಗಿದೆ.</p>.<p>ಆಯ್ದ 200 ಸ್ಥಳಗಳಲ್ಲಿ ತಲಾ ಎರಡರಂತೆ ಕಸ ಸಂಗ್ರಹ ಡಬ್ಬಗಳ ಅಳವಡಿಕೆ, ಈ ಡಬ್ಬಗಳಲ್ಲಿ ಸಂಗ್ರಹವಾದ ತ್ಯಾಜ್ಯ ಸಾಗಣೆ ಮಾಡಲು ಕ್ರೇನ್ಗಳನ್ನು ಒಳಗೊಂಡ 8 ಟ್ರಕ್ ಬಳಕೆ, ತ್ಯಾಜ್ಯ ಸಂಸ್ಕರಣಾ ಘಟಕಗಳಿಗೆ ಸಾಗಣೆ ಹಾಗೂ 60 ತಿಂಗಳ ನಿರ್ವಹಣೆ ಮಾಡುವ ಗುತ್ತಿಗೆ ನೀಡಲಾಗಿತ್ತು. 2017ರಲ್ಲಿ ಕಾರ್ಯಾದೇಶ ನೀಡಲಾಗಿತ್ತು.</p>.<p>ಈ ಯೋಜನೆ ಗಮನಿಸಿದರೆ ನಗರದ ಶೇ 10ರಷ್ಟು ಸ್ಥಳಗಳಲ್ಲೂ ಕಸ ಸಂಗ್ರಹ ಡಬ್ಬಗಳನ್ನು ಅಳವಡಿಸದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸಮಗ್ರವಾಗಿ ತನಿಖೆ ನಡೆಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಆದೇಶಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>