<figcaption>""</figcaption>.<p><strong>ಬೆಂಗಳೂರು: </strong>ವಿರೋಧ ಪಕ್ಷದಲ್ಲಿದ್ದಾಗ ಎಲಿವೇಟೆಡ್ ಕಾರಿಡಾರ್ ಯೋಜನೆಯನ್ನು ವಿರೋಧಿಸಿದ್ದ ಬಿಜೆಪಿ, ಅಧಿಕಾರಕ್ಕೆ ಬಂದ ಬಳಿಕ ಈ ಯೋಜನೆ ಜಾರಿಗೆ ಮುಂದಾಗಿದೆ. ಈ ಯೋಜನೆಯನ್ನು ಹಂತ ಹಂತವಾಗಿ ಜಾರಿಗೆ ತರಬೇಕು. ಮೊದಲ ಹಂತದ ಅನುಷ್ಠಾನಕ್ಕೆ ಈ ಬಾರಿಯ ಬಜೆಟ್ನಲ್ಲಿ ಅನುದಾನ ಒದಗಿಸಬೇಕು ಎಂದು ಬಿಜೆಪಿ ಶಾಸಕರು ಒತ್ತಾಯಿಸಿದ್ದಾರೆ.</p>.<p>ನಗರದ ವಿಧಾನಸಭಾ ಕ್ಷೇತ್ರಗಳನ್ನು ಪ್ರತಿನಿಧಿಸುವ ಶಾಸಕರು ಮತ್ತು ಸಚಿವರು, ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ನೇತೃತ್ವದಲ್ಲಿ ಬುಧವಾರ ಸಭೆ ನಡೆಸಿ ಈ ಬಗ್ಗೆ ಚರ್ಚಿಸಿದರು. ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್ಡಿಸಿಎಲ್) ಅಧಿಕಾರಿಗಳು ಈ ಯೋಜನೆ ಕುರಿತು ಸಭೆಯಲ್ಲಿ ಮಾಹಿತಿ ನೀಡಿದರು.</p>.<p>‘ನಮ್ಮ ಮೆಟ್ರೊ’ ಮಾದರಿಯಲ್ಲೇ ಎಲಿವೇಟೆಡ್ ಕಾರಿಡಾರ್ ಯೋಜನೆಯನ್ನೂ ವಿವಿಧ ಹಂತಗಳಲ್ಲಿ ನಿರ್ಮಿಸಬೇಕು. ಮೊದಲ ಹಂತದ ಕಾಮಗಾರಿಗಳಿಗೆ ಈ ಸಲದ ಬಜೆಟ್ನಲ್ಲಿ ಆದ್ಯತೆ ಕೊಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಒತ್ತಾಯಿಸಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ಈ ಯೋಜನೆಗೆ ಅಂದಾಜು ₹ 26 ಸಾವಿರ ಕೋಟಿಗೂ ಅಧಿಕ ಅನುದಾನ ಬೇಕು. ಒಮ್ಮೆಲೇ ಇಷ್ಟೊಂದು ಪ್ರಮಾಣದಲ್ಲಿ ಹಣ ಹೊಂದಿಸುವುದು ಕಷ್ಟ. ಹೀಗಾಗಿ ಮೊದಲ ಹಂತದಲ್ಲಿ ಕನಿಷ್ಠ ಪಕ್ಷ ಪೂರ್ವ- ಪಶ್ಚಿಮ (ಕೆ.ಆರ್.ಪುರ- ಯಶವಂತಪುರ) ಕಾರಿಡಾರ್ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ಇದಕ್ಕೆ ಈ ಬಾರಿಯ ಬಜೆಟ್ನಲ್ಲಿ ಅನುದಾನ ಒದಗಿಸುವಂತೆ ಮನವಿ ಮಾಡಲು ಶಾಸಕರು ನಿರ್ಧರಿಸಿದರು.</p>.<p>‘29 ಕಿ.ಮೀ ಉದ್ದದ ಪೂರ್ವ–ಪಶ್ಚಿಮ ಕಾರಿಡಾರ್ನಲ್ಲಿ ಆರು ಪಥಗಳಿರುತ್ತವೆ. ಮೊದಲ ಹಂತದ ಈ ಕಾಮಗಾರಿಗೆ ₹ 9,300 ಕೋಟಿ ಬೇಕಾಗುತ್ತದೆ’ ಎಂದು ಅಶ್ವತ್ಥನಾರಾಯಣ ಸಭೆಯ ಗಮನಕ್ಕೆ ತಂದರು.</p>.<p>‘ಇದರ ನಂತರ ಮತ್ತೆ ಮೂರು ಹಂತಗಳಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಿಸಬೇಕಾಗುತ್ತದೆ. ಇದರ ಅನುಷ್ಠಾನಕ್ಕೆ 10 ವರ್ಷಗಳು ಬೇಕಾಗಬಹುದು. ಎಲಿವೇಟೆಡ್ ಕಾರಿಡಾರ್ನ ಕೆಲವು ಕಡೆ ಬಹು ಅಂತಸ್ತುಗಳ ಮಾರ್ಗಗಳು ನಿರ್ಮಾಣವಾಗಲಿವೆ. ಈ ಯೋಜನೆಯ ಭೂಸ್ವಾಧೀನಕ್ಕೇ ಅಂದಾಜು ₹ 10 ಸಾವಿರ ಕೋಟಿ ಬೇಕು. ವೆಚ್ಚವನ್ನು ಆದಷ್ಟು ಕಡಿಮೆ ಮಾಡಿ ಯೋಜನೆ ಜಾರಿಗೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಅವರು ವಿವರಿಸಿದರು.</p>.<p>‘ಕಾರಿಡಾರ್ ನಿರ್ಮಾಣದ ನಂತರ ನಗರದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಅರ್ಧ ಗಂಟೆಯಲ್ಲಿ ತಲುಪಬಹುದು. ಇದರಿಂದ ನಗರದ ಕೇಂದ್ರ ಭಾಗದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆಯಾಗಲಿದೆ’ ಎಂದರು.</p>.<p>ನಗರದ ಹೊರವಲಯದ ಸಂಪರ್ಕಕ್ಕೆ 120 ಕಿ.ಮೀ ಉದ್ದದ ರಸ್ತೆಗಳ ಅಭಿವೃದ್ಧಿಗೆ ಕನಿಷ್ಠ ₹ 1,400 ಕೋಟಿ ಬೇಕು. ಇದಕ್ಕೆ ಅನುದಾನ ಪಡೆಯುವ ಕುರಿತು ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರನ್ನು ಭೇಟಿ ಮಾಡಿ ಚರ್ಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ಸಚಿವರಾದ ಎಸ್.ಟಿ.ಸೋಮಶೇಖರ್, ಕೆ.ಗೋಪಾಲಯ್ಯ, ಬೈರತಿ ಬಸವರಾಜ್, ಶಾಸಕರಾದ ಅರವಿಂದ ಲಿಂಬಾವಳಿ, ಎಸ್.ಆರ್.ವಿಶ್ವನಾಥ್, ಉದಯ್ ಗರುಡಾಚಾರ್, ಎಸ್.ರಘು, ಎಲ್.ಎ.ರವಿಸುಬ್ರಹ್ಮಣ್ಯ, ಎಂ.ಸತೀಶ ರೆಡ್ಡಿ ಹಾಜರಿದ್ದರು.</p>.<p class="Subhead"><strong>ಮುನಿರತ್ನ ಹಾಜರ್</strong>: ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿರುವ ಮುನಿರತ್ನ ಅವರೂ ಸಭೆಯಲ್ಲಿ ಭಾಗವಹಿಸಿದ್ದರು.</p>.<p><strong>ವಲಸೆ ಬಂದ ನಾಯಕರಿಗೆ ಮಣೆ</strong><br />ಮೊದಲ ಹಂತದಲ್ಲಿ ಪೂರ್ವ– ಪಶ್ಚಿಮ ಕಾರಿಡಾರ್ ಜಾರಿಗೊಳಿಸಿದರೆ ಬಿಜೆಪಿಗೆ ಇತ್ತೀಚೆಗೆ ವಲಸೆ ಬಂದ ನಾಯಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಹೆಚ್ಚು ಅನುಕೂಲವಾಗಲಿದೆ. ಈ ಕಾರಿಡಾರ್ ಕೆ.ಆರ್.ಪುರ, ಹಲಸೂರು, ಕಂಟೋನ್ಮೆಂಟ್, ಮೇಖ್ರಿ ವೃತ್ತ ಮೂಲಕ ಯಶವಂತಪುರಕ್ಕೆ ಸಂಪರ್ಕ ಕಲ್ಪಿಸಲಿದೆ. ಮೊದಲ ಹಂತದಲ್ಲಿ ಪೂರ್ವ–ಪಶ್ಚಿಮ ಕಾರಿಡಾರ್ ನಿರ್ಮಿಸುವ ಪ್ರಸ್ತಾಪ ಬಿಜೆಪಿಯ ಕೆಲವು ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.</p>.<p><strong>ಟೆಂಡರ್ ರದ್ದುಪಡಿಸಿದ್ದ ಬಿಜೆಪಿ ಸರ್ಕಾರ</strong><br />ಎಲಿವೇಟೆಡ್ ಕಾರಿಡಾರ್ ಯೋಜನೆಯ ಮೊದಲ ಹಂತದಲ್ಲಿ 21.54 ಕಿ.ಮೀ ಉದ್ದದ ಉತ್ತರ–ದಕ್ಷಿಣ ಕಾರಿಡಾರ್ ನಿರ್ಮಿಸಲು ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರ ತೀರ್ಮಾನಿಸಿತ್ತು. ₹6,855 ಕೋಟಿ ಮೊತ್ತದ ಈ ಕಾಮಗಾರಿಯನ್ನು ಮೂರು ಪ್ಯಾಕೇಜ್ಗಳಲ್ಲಿ ಅನುಷ್ಠಾನಗೊಳಿಸಲು ಟೆಂಡರ್ ಕೂಡಾ ಆಹ್ವಾನಿಸಲಾಗಿತ್ತು. ಆದರೆ, ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಟೆಂಡರ್ ರದ್ದುಪಡಿಸಿದ್ದರು. ಈ ಯೋಜನೆಯನ್ನು ವಿರೋಧಿಸಿದ್ದ ಸಾಮಾಜಿಕ ಕಾರ್ಯಕರ್ತರು ಈ ನಡೆಯನ್ನು ಸ್ವಾಗತಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು: </strong>ವಿರೋಧ ಪಕ್ಷದಲ್ಲಿದ್ದಾಗ ಎಲಿವೇಟೆಡ್ ಕಾರಿಡಾರ್ ಯೋಜನೆಯನ್ನು ವಿರೋಧಿಸಿದ್ದ ಬಿಜೆಪಿ, ಅಧಿಕಾರಕ್ಕೆ ಬಂದ ಬಳಿಕ ಈ ಯೋಜನೆ ಜಾರಿಗೆ ಮುಂದಾಗಿದೆ. ಈ ಯೋಜನೆಯನ್ನು ಹಂತ ಹಂತವಾಗಿ ಜಾರಿಗೆ ತರಬೇಕು. ಮೊದಲ ಹಂತದ ಅನುಷ್ಠಾನಕ್ಕೆ ಈ ಬಾರಿಯ ಬಜೆಟ್ನಲ್ಲಿ ಅನುದಾನ ಒದಗಿಸಬೇಕು ಎಂದು ಬಿಜೆಪಿ ಶಾಸಕರು ಒತ್ತಾಯಿಸಿದ್ದಾರೆ.</p>.<p>ನಗರದ ವಿಧಾನಸಭಾ ಕ್ಷೇತ್ರಗಳನ್ನು ಪ್ರತಿನಿಧಿಸುವ ಶಾಸಕರು ಮತ್ತು ಸಚಿವರು, ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ನೇತೃತ್ವದಲ್ಲಿ ಬುಧವಾರ ಸಭೆ ನಡೆಸಿ ಈ ಬಗ್ಗೆ ಚರ್ಚಿಸಿದರು. ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್ಡಿಸಿಎಲ್) ಅಧಿಕಾರಿಗಳು ಈ ಯೋಜನೆ ಕುರಿತು ಸಭೆಯಲ್ಲಿ ಮಾಹಿತಿ ನೀಡಿದರು.</p>.<p>‘ನಮ್ಮ ಮೆಟ್ರೊ’ ಮಾದರಿಯಲ್ಲೇ ಎಲಿವೇಟೆಡ್ ಕಾರಿಡಾರ್ ಯೋಜನೆಯನ್ನೂ ವಿವಿಧ ಹಂತಗಳಲ್ಲಿ ನಿರ್ಮಿಸಬೇಕು. ಮೊದಲ ಹಂತದ ಕಾಮಗಾರಿಗಳಿಗೆ ಈ ಸಲದ ಬಜೆಟ್ನಲ್ಲಿ ಆದ್ಯತೆ ಕೊಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಒತ್ತಾಯಿಸಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ಈ ಯೋಜನೆಗೆ ಅಂದಾಜು ₹ 26 ಸಾವಿರ ಕೋಟಿಗೂ ಅಧಿಕ ಅನುದಾನ ಬೇಕು. ಒಮ್ಮೆಲೇ ಇಷ್ಟೊಂದು ಪ್ರಮಾಣದಲ್ಲಿ ಹಣ ಹೊಂದಿಸುವುದು ಕಷ್ಟ. ಹೀಗಾಗಿ ಮೊದಲ ಹಂತದಲ್ಲಿ ಕನಿಷ್ಠ ಪಕ್ಷ ಪೂರ್ವ- ಪಶ್ಚಿಮ (ಕೆ.ಆರ್.ಪುರ- ಯಶವಂತಪುರ) ಕಾರಿಡಾರ್ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ಇದಕ್ಕೆ ಈ ಬಾರಿಯ ಬಜೆಟ್ನಲ್ಲಿ ಅನುದಾನ ಒದಗಿಸುವಂತೆ ಮನವಿ ಮಾಡಲು ಶಾಸಕರು ನಿರ್ಧರಿಸಿದರು.</p>.<p>‘29 ಕಿ.ಮೀ ಉದ್ದದ ಪೂರ್ವ–ಪಶ್ಚಿಮ ಕಾರಿಡಾರ್ನಲ್ಲಿ ಆರು ಪಥಗಳಿರುತ್ತವೆ. ಮೊದಲ ಹಂತದ ಈ ಕಾಮಗಾರಿಗೆ ₹ 9,300 ಕೋಟಿ ಬೇಕಾಗುತ್ತದೆ’ ಎಂದು ಅಶ್ವತ್ಥನಾರಾಯಣ ಸಭೆಯ ಗಮನಕ್ಕೆ ತಂದರು.</p>.<p>‘ಇದರ ನಂತರ ಮತ್ತೆ ಮೂರು ಹಂತಗಳಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಿಸಬೇಕಾಗುತ್ತದೆ. ಇದರ ಅನುಷ್ಠಾನಕ್ಕೆ 10 ವರ್ಷಗಳು ಬೇಕಾಗಬಹುದು. ಎಲಿವೇಟೆಡ್ ಕಾರಿಡಾರ್ನ ಕೆಲವು ಕಡೆ ಬಹು ಅಂತಸ್ತುಗಳ ಮಾರ್ಗಗಳು ನಿರ್ಮಾಣವಾಗಲಿವೆ. ಈ ಯೋಜನೆಯ ಭೂಸ್ವಾಧೀನಕ್ಕೇ ಅಂದಾಜು ₹ 10 ಸಾವಿರ ಕೋಟಿ ಬೇಕು. ವೆಚ್ಚವನ್ನು ಆದಷ್ಟು ಕಡಿಮೆ ಮಾಡಿ ಯೋಜನೆ ಜಾರಿಗೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಅವರು ವಿವರಿಸಿದರು.</p>.<p>‘ಕಾರಿಡಾರ್ ನಿರ್ಮಾಣದ ನಂತರ ನಗರದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಅರ್ಧ ಗಂಟೆಯಲ್ಲಿ ತಲುಪಬಹುದು. ಇದರಿಂದ ನಗರದ ಕೇಂದ್ರ ಭಾಗದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆಯಾಗಲಿದೆ’ ಎಂದರು.</p>.<p>ನಗರದ ಹೊರವಲಯದ ಸಂಪರ್ಕಕ್ಕೆ 120 ಕಿ.ಮೀ ಉದ್ದದ ರಸ್ತೆಗಳ ಅಭಿವೃದ್ಧಿಗೆ ಕನಿಷ್ಠ ₹ 1,400 ಕೋಟಿ ಬೇಕು. ಇದಕ್ಕೆ ಅನುದಾನ ಪಡೆಯುವ ಕುರಿತು ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರನ್ನು ಭೇಟಿ ಮಾಡಿ ಚರ್ಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ಸಚಿವರಾದ ಎಸ್.ಟಿ.ಸೋಮಶೇಖರ್, ಕೆ.ಗೋಪಾಲಯ್ಯ, ಬೈರತಿ ಬಸವರಾಜ್, ಶಾಸಕರಾದ ಅರವಿಂದ ಲಿಂಬಾವಳಿ, ಎಸ್.ಆರ್.ವಿಶ್ವನಾಥ್, ಉದಯ್ ಗರುಡಾಚಾರ್, ಎಸ್.ರಘು, ಎಲ್.ಎ.ರವಿಸುಬ್ರಹ್ಮಣ್ಯ, ಎಂ.ಸತೀಶ ರೆಡ್ಡಿ ಹಾಜರಿದ್ದರು.</p>.<p class="Subhead"><strong>ಮುನಿರತ್ನ ಹಾಜರ್</strong>: ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿರುವ ಮುನಿರತ್ನ ಅವರೂ ಸಭೆಯಲ್ಲಿ ಭಾಗವಹಿಸಿದ್ದರು.</p>.<p><strong>ವಲಸೆ ಬಂದ ನಾಯಕರಿಗೆ ಮಣೆ</strong><br />ಮೊದಲ ಹಂತದಲ್ಲಿ ಪೂರ್ವ– ಪಶ್ಚಿಮ ಕಾರಿಡಾರ್ ಜಾರಿಗೊಳಿಸಿದರೆ ಬಿಜೆಪಿಗೆ ಇತ್ತೀಚೆಗೆ ವಲಸೆ ಬಂದ ನಾಯಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಹೆಚ್ಚು ಅನುಕೂಲವಾಗಲಿದೆ. ಈ ಕಾರಿಡಾರ್ ಕೆ.ಆರ್.ಪುರ, ಹಲಸೂರು, ಕಂಟೋನ್ಮೆಂಟ್, ಮೇಖ್ರಿ ವೃತ್ತ ಮೂಲಕ ಯಶವಂತಪುರಕ್ಕೆ ಸಂಪರ್ಕ ಕಲ್ಪಿಸಲಿದೆ. ಮೊದಲ ಹಂತದಲ್ಲಿ ಪೂರ್ವ–ಪಶ್ಚಿಮ ಕಾರಿಡಾರ್ ನಿರ್ಮಿಸುವ ಪ್ರಸ್ತಾಪ ಬಿಜೆಪಿಯ ಕೆಲವು ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.</p>.<p><strong>ಟೆಂಡರ್ ರದ್ದುಪಡಿಸಿದ್ದ ಬಿಜೆಪಿ ಸರ್ಕಾರ</strong><br />ಎಲಿವೇಟೆಡ್ ಕಾರಿಡಾರ್ ಯೋಜನೆಯ ಮೊದಲ ಹಂತದಲ್ಲಿ 21.54 ಕಿ.ಮೀ ಉದ್ದದ ಉತ್ತರ–ದಕ್ಷಿಣ ಕಾರಿಡಾರ್ ನಿರ್ಮಿಸಲು ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರ ತೀರ್ಮಾನಿಸಿತ್ತು. ₹6,855 ಕೋಟಿ ಮೊತ್ತದ ಈ ಕಾಮಗಾರಿಯನ್ನು ಮೂರು ಪ್ಯಾಕೇಜ್ಗಳಲ್ಲಿ ಅನುಷ್ಠಾನಗೊಳಿಸಲು ಟೆಂಡರ್ ಕೂಡಾ ಆಹ್ವಾನಿಸಲಾಗಿತ್ತು. ಆದರೆ, ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಟೆಂಡರ್ ರದ್ದುಪಡಿಸಿದ್ದರು. ಈ ಯೋಜನೆಯನ್ನು ವಿರೋಧಿಸಿದ್ದ ಸಾಮಾಜಿಕ ಕಾರ್ಯಕರ್ತರು ಈ ನಡೆಯನ್ನು ಸ್ವಾಗತಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>