<p><strong>ಬೆಂಗಳೂರು:</strong> ಹಳೆ ಮದ್ರಾಸ್ ರಸ್ತೆ, ಬೈಯಪ್ಪನಹಳ್ಳಿ, ಬಾಣಸವಾಡಿ ಸುತ್ತಮುತ್ತ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ನಿಯಮಿತ (ಬಿ–ಸ್ಮೈಲ್) ₹380 ಕೋಟಿ ವೆಚ್ಚದ ಎಲಿವೇಟೆಡ್ ರೋಟರಿ ಫ್ಲೈಓವರ್ ನಿರ್ಮಿಸಲು ಮುಂದಾಗಿದೆ.</p>.<p>2024ರ ಫೆಬ್ರುವರಿಯಲ್ಲೇ ಈ ಯೋಜನೆಯನ್ನು ತಯಾರಿಸಲಾಗಿದ್ದು, ಬಿ–ಸ್ಮೈಲ್ ಮೂಲಕ ಅನುಷ್ಠಾನಗೊಳಿಸಲು ಟೆಂಡರ್ ಆಹ್ವಾನಿಸಲಾಗಿದೆ. ಅಕ್ಟೋಬರ್ 13ರವರೆಗೆ ಬಿಡ್ ಸಲ್ಲಿಸಲು ಅವಕಾಶ ನೀಡಲಾಗಿದ್ದು, 24 ತಿಂಗಳಲ್ಲಿ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.</p>.<p>‘ಟರ್ನ್ ಕೀ ಲಮ್ಸಮ್’ ನಿಗದಿಪಡಿಸಿದ ದರಕ್ಕೇ ಯೋಜನೆಯನ್ನು ಪೂರ್ಣಗೊಳಿಸುವ ಮಾದರಿಯ ಟೆಂಡರ್ ಇದಾಗಿದೆ. ಜಿಎಸ್ಟಿ ಹೊರತುಪಡಿಸಿ, ₹304 ಕೋಟಿಯ ವೆಚ್ಚಕ್ಕೆ ಟೆಂಡರ್ ಆಹ್ವಾನಿಸಲಾಗಿದೆ. ಯೋಜನೆಯಿಂದ ಹೆಚ್ಚು ಪ್ರಯೋಜನ ಪಡೆಯುವ ರೈಲ್ವೆ ಇಲಾಖೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ನೀಡಲು ಈಗಾಗಲೇ ಒಪ್ಪಿದೆ. ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕುಗಳನ್ನು (ಟಿಡಿಆರ್) ನೀಡುವ ಮೂಲಕ ಖಾಸಗಿ ಭೂಮಿಯನ್ನು ಯೋಜನೆಗೆ ಸ್ವಾಧೀನಪಡಿಕೊಳ್ಳಲು ನಿರ್ಧರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಳೆ ಮದ್ರಾಸ್ ರಸ್ತೆ, ಬೈಯಪ್ಪನಹಳ್ಳಿ, ಬಾಣಸವಾಡಿ ಸುತ್ತಮುತ್ತ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ನಿಯಮಿತ (ಬಿ–ಸ್ಮೈಲ್) ₹380 ಕೋಟಿ ವೆಚ್ಚದ ಎಲಿವೇಟೆಡ್ ರೋಟರಿ ಫ್ಲೈಓವರ್ ನಿರ್ಮಿಸಲು ಮುಂದಾಗಿದೆ.</p>.<p>2024ರ ಫೆಬ್ರುವರಿಯಲ್ಲೇ ಈ ಯೋಜನೆಯನ್ನು ತಯಾರಿಸಲಾಗಿದ್ದು, ಬಿ–ಸ್ಮೈಲ್ ಮೂಲಕ ಅನುಷ್ಠಾನಗೊಳಿಸಲು ಟೆಂಡರ್ ಆಹ್ವಾನಿಸಲಾಗಿದೆ. ಅಕ್ಟೋಬರ್ 13ರವರೆಗೆ ಬಿಡ್ ಸಲ್ಲಿಸಲು ಅವಕಾಶ ನೀಡಲಾಗಿದ್ದು, 24 ತಿಂಗಳಲ್ಲಿ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.</p>.<p>‘ಟರ್ನ್ ಕೀ ಲಮ್ಸಮ್’ ನಿಗದಿಪಡಿಸಿದ ದರಕ್ಕೇ ಯೋಜನೆಯನ್ನು ಪೂರ್ಣಗೊಳಿಸುವ ಮಾದರಿಯ ಟೆಂಡರ್ ಇದಾಗಿದೆ. ಜಿಎಸ್ಟಿ ಹೊರತುಪಡಿಸಿ, ₹304 ಕೋಟಿಯ ವೆಚ್ಚಕ್ಕೆ ಟೆಂಡರ್ ಆಹ್ವಾನಿಸಲಾಗಿದೆ. ಯೋಜನೆಯಿಂದ ಹೆಚ್ಚು ಪ್ರಯೋಜನ ಪಡೆಯುವ ರೈಲ್ವೆ ಇಲಾಖೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ನೀಡಲು ಈಗಾಗಲೇ ಒಪ್ಪಿದೆ. ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕುಗಳನ್ನು (ಟಿಡಿಆರ್) ನೀಡುವ ಮೂಲಕ ಖಾಸಗಿ ಭೂಮಿಯನ್ನು ಯೋಜನೆಗೆ ಸ್ವಾಧೀನಪಡಿಕೊಳ್ಳಲು ನಿರ್ಧರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>