<p><strong>ಬೆಂಗಳೂರು:</strong> ಕೃಷಿ ಮತ್ತು ಕೃಷಿ ಉತ್ಪನ್ನಗಳ ಮಾರುಕಟ್ಟೆ ವಹಿವಾಟು ವ್ಯವಸ್ಥೆಯಲ್ಲಿ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗುತ್ತಿವೆ. ನಿರುದ್ಯೋಗ ಸಮಸ್ಯೆ ನಿವಾರಣೆಗೆ ಈ ಕ್ಷೇತ್ರಗಳು ಆಸರೆಯಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.</p>.<p>ಕೆಪೆಕ್ ಹಾಗೂ ಖೆತಿವಾಲ ಸಂಸ್ಥೆಗಳು ಗುರುವಾರ ಆಯೋಜಿಸಿದ್ದ ಕೃಷಿ ಜಾಗೃತಿ ಕಾರ್ಯಾಗಾರ ಮತ್ತು ಖೆತಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಾಂಪ್ರದಾಯಿಕ ಕೃಷಿಯೊಂದಿಗೆ ತಂತ್ರಜ್ಞಾನ, ವೈಜ್ಞಾನಿಕ ಪದ್ದತಿ ಅಳವಡಿಸಿಕೊಂಡರೆ ಸಮಯ, ಶ್ರಮದ ಉಳಿತಾಯದ ಜೊತೆಗೆ ಆದಾಯ ಹೆಚ್ಚುತ್ತದೆ. ರೈತರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೂ ಆದ್ಯತೆ ನೀಡಬೇಕು. ಮಾರುಕಟ್ಟೆಯ ಬಗ್ಗೆ ಜ್ಞಾನ ವಿಸ್ತಾರಗೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಕೆಪೆಕ್ನಲ್ಲಿ ಪಿಎಂಎಫ್ಎಂಇ ಯೋಜನೆಯಡಿ ಕಿರು ಆಹಾರ ಸಂಸ್ಕರಣೆ ಉದ್ಯಮ ಸ್ಥಾಪಿಸಲು ಅವಕಾಶವಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಒಟ್ಟು ₹ 15 ಲಕ್ಷ ಸಬ್ಸಿಡಿ ದೊರೆಯಲಿದೆ. ಇದಕ್ಕಾಗಿ ₹ 206 ಕೋಟಿ ಮೀಸಲಿಡಲಾಗಿದೆ ಎಂದು ವಿವರಿಸಿದರು.</p>.<p>ಕೆಪೆಕ್ನಲ್ಲಿ ಈ ವರ್ಷ 5 ಸಾವಿರ ಹೊಸ ಆಹಾರ ಉದ್ಯಮಗಳ ಸೃಷ್ಟಿಯ ಗುರಿ ಹೊಂದಲಾಗಿದೆ. ಕೃಷಿ ಇಲಾಖೆಯಲ್ಲಿ ಹಲವು ವಿನೂತನ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ₹ 8 ಕೋಟಿ ಸಹಾಯಧನದಲ್ಲಿ 40 ನವೋದ್ಯಮಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p> ರೈತರನ್ನು ಯಾಂತ್ರಿಕವಾಗಿಯೂ ಸಬಲರನ್ನಾಗಿ ಮಾಡಲು ರಾಜ್ಯ ಸರ್ಕಾರ ₹ 900 ಕೋಟಿ ವೆಚ್ಚದಲ್ಲಿ ಈಗಾಗಲೇ ಕೃಷಿ ಯಂತ್ರೋಪಕರಣಗಳು, ₹ 1075 ಕೋಟಿ ವೆಚ್ಚದಲ್ಲಿ ಸೂಕ್ಷ್ಮ ನೀರಾವರಿ ಪರಿಕರಗಳನ್ನು ವಿತರಿಸಿದೆ ಎಂದು ಸಚಿವರು ಮಾಹಿತಿ ನೀಡಿದರು.</p>.<p>ಜಲಾನಯನ ಇಲಾಖೆ ನಿರ್ದೇಶಕರಾದ ಮೊಹಮ್ಮದ ಪರವೇಜ ಬಂಥನಾಳ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್, ನಬಾರ್ಡ್ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ವಿ.ಎನ್. ಶರ್ಮಾ, ಎಸ್ಎಲ್ಬಿಸಿ ಸಂಯೋಜಕ ಭಾಸ್ಕರ್ ಭಟ್ಟಾಚಾರ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೃಷಿ ಮತ್ತು ಕೃಷಿ ಉತ್ಪನ್ನಗಳ ಮಾರುಕಟ್ಟೆ ವಹಿವಾಟು ವ್ಯವಸ್ಥೆಯಲ್ಲಿ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗುತ್ತಿವೆ. ನಿರುದ್ಯೋಗ ಸಮಸ್ಯೆ ನಿವಾರಣೆಗೆ ಈ ಕ್ಷೇತ್ರಗಳು ಆಸರೆಯಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.</p>.<p>ಕೆಪೆಕ್ ಹಾಗೂ ಖೆತಿವಾಲ ಸಂಸ್ಥೆಗಳು ಗುರುವಾರ ಆಯೋಜಿಸಿದ್ದ ಕೃಷಿ ಜಾಗೃತಿ ಕಾರ್ಯಾಗಾರ ಮತ್ತು ಖೆತಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಾಂಪ್ರದಾಯಿಕ ಕೃಷಿಯೊಂದಿಗೆ ತಂತ್ರಜ್ಞಾನ, ವೈಜ್ಞಾನಿಕ ಪದ್ದತಿ ಅಳವಡಿಸಿಕೊಂಡರೆ ಸಮಯ, ಶ್ರಮದ ಉಳಿತಾಯದ ಜೊತೆಗೆ ಆದಾಯ ಹೆಚ್ಚುತ್ತದೆ. ರೈತರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೂ ಆದ್ಯತೆ ನೀಡಬೇಕು. ಮಾರುಕಟ್ಟೆಯ ಬಗ್ಗೆ ಜ್ಞಾನ ವಿಸ್ತಾರಗೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಕೆಪೆಕ್ನಲ್ಲಿ ಪಿಎಂಎಫ್ಎಂಇ ಯೋಜನೆಯಡಿ ಕಿರು ಆಹಾರ ಸಂಸ್ಕರಣೆ ಉದ್ಯಮ ಸ್ಥಾಪಿಸಲು ಅವಕಾಶವಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಒಟ್ಟು ₹ 15 ಲಕ್ಷ ಸಬ್ಸಿಡಿ ದೊರೆಯಲಿದೆ. ಇದಕ್ಕಾಗಿ ₹ 206 ಕೋಟಿ ಮೀಸಲಿಡಲಾಗಿದೆ ಎಂದು ವಿವರಿಸಿದರು.</p>.<p>ಕೆಪೆಕ್ನಲ್ಲಿ ಈ ವರ್ಷ 5 ಸಾವಿರ ಹೊಸ ಆಹಾರ ಉದ್ಯಮಗಳ ಸೃಷ್ಟಿಯ ಗುರಿ ಹೊಂದಲಾಗಿದೆ. ಕೃಷಿ ಇಲಾಖೆಯಲ್ಲಿ ಹಲವು ವಿನೂತನ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ₹ 8 ಕೋಟಿ ಸಹಾಯಧನದಲ್ಲಿ 40 ನವೋದ್ಯಮಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p> ರೈತರನ್ನು ಯಾಂತ್ರಿಕವಾಗಿಯೂ ಸಬಲರನ್ನಾಗಿ ಮಾಡಲು ರಾಜ್ಯ ಸರ್ಕಾರ ₹ 900 ಕೋಟಿ ವೆಚ್ಚದಲ್ಲಿ ಈಗಾಗಲೇ ಕೃಷಿ ಯಂತ್ರೋಪಕರಣಗಳು, ₹ 1075 ಕೋಟಿ ವೆಚ್ಚದಲ್ಲಿ ಸೂಕ್ಷ್ಮ ನೀರಾವರಿ ಪರಿಕರಗಳನ್ನು ವಿತರಿಸಿದೆ ಎಂದು ಸಚಿವರು ಮಾಹಿತಿ ನೀಡಿದರು.</p>.<p>ಜಲಾನಯನ ಇಲಾಖೆ ನಿರ್ದೇಶಕರಾದ ಮೊಹಮ್ಮದ ಪರವೇಜ ಬಂಥನಾಳ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್, ನಬಾರ್ಡ್ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ವಿ.ಎನ್. ಶರ್ಮಾ, ಎಸ್ಎಲ್ಬಿಸಿ ಸಂಯೋಜಕ ಭಾಸ್ಕರ್ ಭಟ್ಟಾಚಾರ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>