‘ಕಡತಗಳನ್ನು ನಿಗದಿತ ಕಾಲಮಿತಿಯೊಳಗೆವಿಲೇವಾರಿ ಮಾಡುವಂತೆ ಸತತವಾಗಿ ನಿರ್ದೇಶನ ನೀಡಿದ್ದರೂ ಎಲಿಷ ಅವರು ನಿರ್ಲಕ್ಷಿಸಿದ್ದಾರೆ. 1966ರ ಕರ್ನಾಟಕ ನಾಗರಿಕ ಸೇವೆ (ನಡತೆ) ನಿಯಮ 3 (1) ಅನ್ನು ಉಲ್ಲಂಘಿಸಿ ಕರ್ತವ್ಯಲೋಪ ಎಸಗಿದ್ದಾರೆ. ಅವರನ್ನು ಅಮಾನತು ಮಾಡಿ, ಇಲಾಖಾ ವಿಚಾರಣೆ ಆರಂಭಿಬೇಕು’ ಎಂದು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಇತ್ತೀಚೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.