ಆಯುಷ್ ಮಂತ್ರಾಲಯದ ಆಡಳಿತ ಮಂಡಳಿಯ ಉಪಾಧ್ಯಕ್ಷ ಡಾ.ಎಂ.ಎ. ವಹೀದ್, ‘ಪ್ರಚಾರದ ಕೊರತೆಯಿಂದ ಈ ವೈದ್ಯಕೀಯ ಪದ್ಧತಿಯು ಮುನ್ನೆಲೆಗೆ ಬರಲಿಲ್ಲ. ಪರಿಣಾಮಕಾರಿಯಾದ ಔಷಧಿಗಳ ಬಗ್ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಬೇಕು. ಕಾಲೇಜುಗಳಲ್ಲಿ ಸಂಶೋಧನೆಗೆ ಅವಕಾಶ ಮಾಡಿಕೊಟ್ಟು, ಪ್ರೋತ್ಸಾಹಿಸಬೇಕು. ಯುನಾನಿ ವೈದ್ಯ ಪದ್ಧತಿಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಹಕೀಂ ಅಜ್ಮಲ್ ಖಾನ್ ಅವರು ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಯನ್ನು ಪ್ರಚುರಪಡಿಸಲು ಶ್ರಮಿಸಿದ್ದರು’ ಎಂದು ತಿಳಿಸಿದರು.