‘ಮುಖ್ಯಮಂತ್ರಿಗಳ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸುತ್ತಿದ್ದಾರೆ. ಇಂತಹ ಅರ್ಜಿಗಳಿಗೆ ಸ್ಪಂದಿಸಲೆಂದೇ ಕೌಶಲಾಭಿವೃದ್ಧಿ ಇಲಾಖೆಯಲ್ಲಿ ಪ್ರತ್ಯೇಕ ವಿಭಾಗ ತೆರೆಯಲಾಗುವುದು. ಜತೆಗೆ, ಈ ಪಟ್ಟಿಯನ್ನು ಕಾಸಿಯಾದಂತಹ ಸಂಸ್ಥೆಗಳಿಗೆ ನೀಡಲಾಗುವುದು. ಇದರಿಂದ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಲಿದೆ. ಅಲ್ಲದೆ, ಕಾರ್ಮಿಕ ಇಲಾಖೆಯು ಕೈಗೊಂಡಿರುವ ಆಶಾದೀಪ ಯೋಜನೆಯನ್ನು ಕೂಡ ಇದರ ಮೂಲಕ ಉತ್ತೇಜಿಸಲಾಗುತ್ತದೆ’ ಎಂದರು.