<p><strong>ಬೆಂಗಳೂರು</strong>: ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಉದ್ಯೋಗ ಆಧಾರಿತ ಪ್ರೋತ್ಸಾಹ ಧನ (ಇಎಲ್ಐ) ಯೋಜನೆ ಆಗಸ್ಟ್ನಿಂದ ಜಾರಿಗೆ ಬರಲಿದೆ’ ಎಂದು ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತ ಬಾಲಕೃಷ್ಣ ನಾಯಕ ತಿಳಿಸಿದರು.</p>.<p>‘ಯಾವುದೇ ಕಂಪನಿ ಅಥವಾ ಸಂಸ್ಥೆಯಲ್ಲಿ ಮೊದಲ ಬಾರಿ ಉದ್ಯೋಗಕ್ಕೆ ಸೇರುವ ಉದ್ಯೋಗಿಗೆ ಈ ಯೋಜನೆ ಅನ್ವಯವಾಗಲಿದೆ’ ಎಂದು ಆರ್.ಆರ್.ನಗರದ ವಲಯ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.</p>.<p>‘ಈ ಯೋಜನೆಯಡಿ ಕೇಂದ್ರ ಸರ್ಕಾರ ಎರಡು ಕಂತುಗಳಲ್ಲಿ ಗರಿಷ್ಠ ₹15 ಸಾವಿರ ಪ್ರೋತ್ಸಾಹ ಧನ ನೀಡಲಿದೆ. ಯೋಜನೆ ಮೂಲಕ 3.5 ಕೋಟಿ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಹೆಚ್ಚುವರಿ ಉದ್ಯೋಗ ಸೃಷ್ಟಿಗಾಗಿ ಉದ್ಯೋಗದಾತರಿಗೂ ಎರಡು ವರ್ಷಗಳವರೆಗೆ ಪ್ರೋತ್ಸಾಹಧನ ನೀಡಲಾಗುತ್ತದೆ’ ಎಂದರು.</p>.<p>‘ಯೋಜನೆಯು ಎರಡು ಭಾಗಗಳನ್ನು ಒಳಗೊಂಡಿದೆ. ಮೊದಲ ಭಾಗವಾಗಿ ನೌಕರರ ಭವಿಷ್ಯ ನಿಧಿ ಸಂಘಟನೆ(ಇಪಿಎಫ್ಒ)ಯಲ್ಲಿ ನೋಂದಾಯಿತ ಉದ್ಯೋಗಿಗೆ ತಿಂಗಳಿಗೆ ಗರಿಷ್ಠ ₹15 ಸಾವಿರವನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ. ₹1 ಲಕ್ಷದವರೆಗೆ ವೇತನವಿರುವ ಉದ್ಯೋಗಿಗಳು ಇದಕ್ಕೆ ಅರ್ಹರಾಗಿರುತ್ತಾರೆ. ಮೊದಲ ಕಂತನ್ನು 6 ತಿಂಗಳ ಸೇವೆಯ ನಂತರ ಮತ್ತು 2ನೇ ಕಂತನ್ನು ಒಂದು ವರ್ಷದ ಸೇವೆಯ ನಂತರ ನೀಡಲಾಗುತ್ತದೆ’ಎಂದು ವಿವರಿಸಿದರು.</p>.<p>‘ಎರಡನೇ ಭಾಗವಾಗಿ ಕನಿಷ್ಠ ಆರು ತಿಂಗಳವರೆಗೆ ನಿರಂತರ ಉದ್ಯೋಗ ಹೊಂದಿರುವ ಪ್ರತಿ ಹೆಚ್ಚುವರಿ ಉದ್ಯೋಗಿಗೆ ಸರ್ಕಾರವು ಎರಡು ವರ್ಷಗಳವರೆಗೆ ತಿಂಗಳಿಗೆ ₹3ಸಾವಿರವರೆಗೆ ಪ್ರೋತ್ಸಾಹಧನ ನೀಡಲಿದೆ. ಇಪಿಎಫ್ಒದಲ್ಲಿ ನೋಂದಾಯಿಸಲಾದ 50ಕ್ಕಿಂತ ಕಡಿಮೆ ಉದ್ಯೋಗಿಗಳನ್ನು ಹೊಂದಿರುವ ಸಂಸ್ಥೆಗಳಿಗೆ ಕನಿಷ್ಠ ಇಬ್ಬರು ಹೆಚ್ಚುವರಿ ಉದ್ಯೋಗಿಗಳನ್ನು, 50 ಅಥವಾ ಅದಕ್ಕಿಂತ ಹೆಚ್ಚಿನ ಉದ್ಯೋಗಿಗಳನ್ನು ಹೊಂದಿರುವ ಸಂಸ್ಥೆಗಳು ಹೆಚ್ಚುವರಿಯಾಗಿ ಐದು ಮಂದಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಬೇಕಾಗುತ್ತದೆ’ ಎಂದು ಬಾಲಕೃಷ್ಣ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮತ್ತೊಬ್ಬ ಪ್ರಾದೇಶಿಕ ಆಯುಕ್ತ ವೆಂಕಟ ಸುಬ್ಬಯ್ಯ ಮತ್ತು ಸಹಾಯಕ ಕಮಿಷನರ್ ಸೂರಜ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಉದ್ಯೋಗ ಆಧಾರಿತ ಪ್ರೋತ್ಸಾಹ ಧನ (ಇಎಲ್ಐ) ಯೋಜನೆ ಆಗಸ್ಟ್ನಿಂದ ಜಾರಿಗೆ ಬರಲಿದೆ’ ಎಂದು ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತ ಬಾಲಕೃಷ್ಣ ನಾಯಕ ತಿಳಿಸಿದರು.</p>.<p>‘ಯಾವುದೇ ಕಂಪನಿ ಅಥವಾ ಸಂಸ್ಥೆಯಲ್ಲಿ ಮೊದಲ ಬಾರಿ ಉದ್ಯೋಗಕ್ಕೆ ಸೇರುವ ಉದ್ಯೋಗಿಗೆ ಈ ಯೋಜನೆ ಅನ್ವಯವಾಗಲಿದೆ’ ಎಂದು ಆರ್.ಆರ್.ನಗರದ ವಲಯ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.</p>.<p>‘ಈ ಯೋಜನೆಯಡಿ ಕೇಂದ್ರ ಸರ್ಕಾರ ಎರಡು ಕಂತುಗಳಲ್ಲಿ ಗರಿಷ್ಠ ₹15 ಸಾವಿರ ಪ್ರೋತ್ಸಾಹ ಧನ ನೀಡಲಿದೆ. ಯೋಜನೆ ಮೂಲಕ 3.5 ಕೋಟಿ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಹೆಚ್ಚುವರಿ ಉದ್ಯೋಗ ಸೃಷ್ಟಿಗಾಗಿ ಉದ್ಯೋಗದಾತರಿಗೂ ಎರಡು ವರ್ಷಗಳವರೆಗೆ ಪ್ರೋತ್ಸಾಹಧನ ನೀಡಲಾಗುತ್ತದೆ’ ಎಂದರು.</p>.<p>‘ಯೋಜನೆಯು ಎರಡು ಭಾಗಗಳನ್ನು ಒಳಗೊಂಡಿದೆ. ಮೊದಲ ಭಾಗವಾಗಿ ನೌಕರರ ಭವಿಷ್ಯ ನಿಧಿ ಸಂಘಟನೆ(ಇಪಿಎಫ್ಒ)ಯಲ್ಲಿ ನೋಂದಾಯಿತ ಉದ್ಯೋಗಿಗೆ ತಿಂಗಳಿಗೆ ಗರಿಷ್ಠ ₹15 ಸಾವಿರವನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ. ₹1 ಲಕ್ಷದವರೆಗೆ ವೇತನವಿರುವ ಉದ್ಯೋಗಿಗಳು ಇದಕ್ಕೆ ಅರ್ಹರಾಗಿರುತ್ತಾರೆ. ಮೊದಲ ಕಂತನ್ನು 6 ತಿಂಗಳ ಸೇವೆಯ ನಂತರ ಮತ್ತು 2ನೇ ಕಂತನ್ನು ಒಂದು ವರ್ಷದ ಸೇವೆಯ ನಂತರ ನೀಡಲಾಗುತ್ತದೆ’ಎಂದು ವಿವರಿಸಿದರು.</p>.<p>‘ಎರಡನೇ ಭಾಗವಾಗಿ ಕನಿಷ್ಠ ಆರು ತಿಂಗಳವರೆಗೆ ನಿರಂತರ ಉದ್ಯೋಗ ಹೊಂದಿರುವ ಪ್ರತಿ ಹೆಚ್ಚುವರಿ ಉದ್ಯೋಗಿಗೆ ಸರ್ಕಾರವು ಎರಡು ವರ್ಷಗಳವರೆಗೆ ತಿಂಗಳಿಗೆ ₹3ಸಾವಿರವರೆಗೆ ಪ್ರೋತ್ಸಾಹಧನ ನೀಡಲಿದೆ. ಇಪಿಎಫ್ಒದಲ್ಲಿ ನೋಂದಾಯಿಸಲಾದ 50ಕ್ಕಿಂತ ಕಡಿಮೆ ಉದ್ಯೋಗಿಗಳನ್ನು ಹೊಂದಿರುವ ಸಂಸ್ಥೆಗಳಿಗೆ ಕನಿಷ್ಠ ಇಬ್ಬರು ಹೆಚ್ಚುವರಿ ಉದ್ಯೋಗಿಗಳನ್ನು, 50 ಅಥವಾ ಅದಕ್ಕಿಂತ ಹೆಚ್ಚಿನ ಉದ್ಯೋಗಿಗಳನ್ನು ಹೊಂದಿರುವ ಸಂಸ್ಥೆಗಳು ಹೆಚ್ಚುವರಿಯಾಗಿ ಐದು ಮಂದಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಬೇಕಾಗುತ್ತದೆ’ ಎಂದು ಬಾಲಕೃಷ್ಣ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮತ್ತೊಬ್ಬ ಪ್ರಾದೇಶಿಕ ಆಯುಕ್ತ ವೆಂಕಟ ಸುಬ್ಬಯ್ಯ ಮತ್ತು ಸಹಾಯಕ ಕಮಿಷನರ್ ಸೂರಜ್ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>