ಮತ್ತೊಂದು ಕಾರ್ಯಾಚರಣೆಯಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಬಡಾವಣೆಯ 6ನೇ ಬ್ಲಾಕ್ನಲ್ಲಿ ನಿವೇಶನ ರಚನೆಗಾಗಿ ಭೂ ಸ್ವಾಧೀನಪಡಿಸಿ ಕೊಳ್ಳಲಾಗಿತ್ತು. ಆದರೆ, ಉಲ್ಲಾಳು ಗ್ರಾಮದ ಸರ್ವೆ ಸಂಖ್ಯೆ 202ರಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿದ್ದ 30x40 ಅಳತೆಯ ಏಳು ನಿವೇಶನಗಳಲ್ಲಿ ಅಕ್ರಮವಾಗಿ ತಾತ್ಕಾಲಿಕ ಶೆಡ್ಗಳನ್ನು ನಿರ್ಮಿಸಲಾಗಿತ್ತು. ನ್ಯಾಯಾಲಯದ ಆದೇಶದಂತೆ ಈ ಶೆಡ್ಗಳನ್ನೂ ಅಧಿಕಾರಿಗಳು ತೆರವುಗೊಳಿಸಿದರು. ಈ ನಿವೇಶನಗಳ ಪ್ರಸ್ತುತ ಮಾರುಕಟ್ಟೆ ಮೌಲ್ಯ ₹ 6.05 ಕೋಟಿ.