<p><strong>ಬೆಂಗಳೂರು:</strong> ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಾರ್ಯಾಚರಣೆ ನಡೆಸಿ, ಆಸ್ಟಿನ್ ಟೌನ್, ಬಜಾಜ್ ಸ್ಟ್ರೀಟ್ ಮತ್ತು ನೀಲಸಂದ್ರದಲ್ಲಿ ಒತ್ತುವರಿಯಾಗಿದ್ದ ₹3 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡಿದೆ.<br><br>ಆಸ್ಟಿನ್ ಟೌನ್, ಬಜಾಜ್ ಸ್ಟ್ರೀಟ್, ನೀಲಸಂದ್ರ ಮಳಿಗೆ ಸಂಖ್ಯೆ 31/1 ಮತ್ತು 42ರಲ್ಲಿ ನಿರ್ಮಾಣವಾಗಿದ್ದ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸಿ, ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.</p>.<p>ಪ್ರಾಧಿಕಾರಕ್ಕೆ ಸೇರಿದ ಜಾಗವನ್ನು ಅತಿಕ್ರಮಿಸಿಕೊಂಡು, ಶೆಡ್ ಹಾಗೂ ಮಳಿಗೆಗಳನ್ನು ನಿರ್ಮಿಸಿಕೊಂಡು ವ್ಯಾಪಾರ ಮಾಡುತ್ತಿದ್ದರು. ಶೆಡ್ ತೆರವುಗೊಳಿಸುವಂತೆ ಒತ್ತುವರಿದಾರರಿಗೆ ನೋಟಿಸ್ ನೀಡಲಾಗಿತ್ತು. ಬಳಿಕ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಯಿತು ಎಂದು ಬಿಡಿಎ ಎಂಜಿನಿಯರ್ ತಿಳಿಸಿದರು. </p>.<p>ಕಾರ್ಯಾಚರಣೆಯನ್ನು ಬಿಡಿಎ ಕಾರ್ಯನಿರತ ಪಡೆಯ ಡಿವೈಎಸ್ಪಿ, ಪೂರ್ವ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಾರ್ಯಾಚರಣೆ ನಡೆಸಿ, ಆಸ್ಟಿನ್ ಟೌನ್, ಬಜಾಜ್ ಸ್ಟ್ರೀಟ್ ಮತ್ತು ನೀಲಸಂದ್ರದಲ್ಲಿ ಒತ್ತುವರಿಯಾಗಿದ್ದ ₹3 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡಿದೆ.<br><br>ಆಸ್ಟಿನ್ ಟೌನ್, ಬಜಾಜ್ ಸ್ಟ್ರೀಟ್, ನೀಲಸಂದ್ರ ಮಳಿಗೆ ಸಂಖ್ಯೆ 31/1 ಮತ್ತು 42ರಲ್ಲಿ ನಿರ್ಮಾಣವಾಗಿದ್ದ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸಿ, ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.</p>.<p>ಪ್ರಾಧಿಕಾರಕ್ಕೆ ಸೇರಿದ ಜಾಗವನ್ನು ಅತಿಕ್ರಮಿಸಿಕೊಂಡು, ಶೆಡ್ ಹಾಗೂ ಮಳಿಗೆಗಳನ್ನು ನಿರ್ಮಿಸಿಕೊಂಡು ವ್ಯಾಪಾರ ಮಾಡುತ್ತಿದ್ದರು. ಶೆಡ್ ತೆರವುಗೊಳಿಸುವಂತೆ ಒತ್ತುವರಿದಾರರಿಗೆ ನೋಟಿಸ್ ನೀಡಲಾಗಿತ್ತು. ಬಳಿಕ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಯಿತು ಎಂದು ಬಿಡಿಎ ಎಂಜಿನಿಯರ್ ತಿಳಿಸಿದರು. </p>.<p>ಕಾರ್ಯಾಚರಣೆಯನ್ನು ಬಿಡಿಎ ಕಾರ್ಯನಿರತ ಪಡೆಯ ಡಿವೈಎಸ್ಪಿ, ಪೂರ್ವ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>