<p><strong>ಬೆಂಗಳೂರು</strong>: ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ಸಾಮೂಹಿಕ ಸ್ವಚ್ಛತಾ ಕಾರ್ಯ ಶುಕ್ರವಾರ ನಡೆಯಿತು.</p>.<p>ಮಹದೇವಪುರ ವಿಭಾಗದ ಹಗದೂರು ವ್ಯಾಪ್ತಿಯ ವೈಟ್ಫೀಲ್ಡ್ ಮುಖ್ಯರಸ್ತೆಯ ವರ್ತೂರು ಕೋಡಿಯಿಂದ ಹೋಪ್ ಫಾರ್ಮ್ವರೆಗೆ, ಗರುಡಾಚಾರ್ಪಾಳ್ಯದ ಸಿಂಗಯ್ಯಪಾಳ್ಯ ಮೆಟ್ರೊ ನಿಲ್ದಾಣದ ಬಳಿ, ವಿಜಿನಾಪುರ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು.</p>.<p>ಪಾದಚಾರಿ ಮಾರ್ಗಗಳಲ್ಲಿ ನಿರ್ಮಿಸಿದ್ದ ಪೆಟ್ಟಿಗೆ ಅಂಗಡಿಗಳು, ವಾಣಿಜ್ಯ ಮಳಿಗೆಗಳ ಮುಂದಿನ ಚಾವಣಿಗಳು, ತಾತ್ಕಾಲಿಕ ಚಾವಣಿ, ತಳ್ಳುವ ಗಾಡಿಗಳು, ಹಣ್ಣಿನ ಅಂಗಡಿಗಳು, ಕಟ್ಟಡದ ಅವಶೇಷಗಳು, ಅನಧಿಕೃತ ಕೇಬಲ್ಗಳು, ಫುಟ್ಪಾತ್ನಲ್ಲಿನ ಹೋಟೆಲ್ ಮುಂತಾದವುಗಳನ್ನು ತೆರವುಗೊಳಿಸಿ ಪಾದಚಾರಿಗಳ ಸುಗಮ ಸಂಚಾರಕ್ಕಾಗಿ ಅನುವು ಮಾಡಿಕೊಡಲಾಯಿತು.</p>.<p>ಮಹದೇವಪುರ ವ್ಯಾಪ್ತಿಯ ಎಲ್ಲ ವಾರ್ಡ್ಗಳಲ್ಲಿ ಈಗಾಗಲೇ ನಿಗದಿಪಡಿಸಿರುವ ದಿನಾಂಕದಂತೆ ಮುಂದಿನ ದಿನಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಮಹದೇವಪುರ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ತಿಳಿಸಿದರು.</p>.<p>ಕೆ.ಆರ್. ಪುರ ಮುಖ್ಯರಸ್ತೆ, ಬಸವನಪುರ, ಬೆಳ್ಳಂದೂರು, ಹೂಡಿ, ವಿಜ್ಞಾನ ನಗರ ಮತ್ತು ದೇವಸಂದ್ರ ವಾರ್ಡ್ ವ್ಯಾಪ್ತಿಯ ಹಲವು ಕಡೆಗಳಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಬಿ.ನಾರಾಯಣಪುರ, ಕೆ.ಆರ್. ಪುರ, ಪೈ ಲೇಔಟ್ ಪ್ರದೇಶಗಳಲ್ಲಿನ ಚರಂಡಿಗಳಲ್ಲಿ ತುಂಬಿದ್ದ ಹೂಳು ಹೊರತೆಗೆದು ಸ್ವಚ್ಛಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ಸಾಮೂಹಿಕ ಸ್ವಚ್ಛತಾ ಕಾರ್ಯ ಶುಕ್ರವಾರ ನಡೆಯಿತು.</p>.<p>ಮಹದೇವಪುರ ವಿಭಾಗದ ಹಗದೂರು ವ್ಯಾಪ್ತಿಯ ವೈಟ್ಫೀಲ್ಡ್ ಮುಖ್ಯರಸ್ತೆಯ ವರ್ತೂರು ಕೋಡಿಯಿಂದ ಹೋಪ್ ಫಾರ್ಮ್ವರೆಗೆ, ಗರುಡಾಚಾರ್ಪಾಳ್ಯದ ಸಿಂಗಯ್ಯಪಾಳ್ಯ ಮೆಟ್ರೊ ನಿಲ್ದಾಣದ ಬಳಿ, ವಿಜಿನಾಪುರ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು.</p>.<p>ಪಾದಚಾರಿ ಮಾರ್ಗಗಳಲ್ಲಿ ನಿರ್ಮಿಸಿದ್ದ ಪೆಟ್ಟಿಗೆ ಅಂಗಡಿಗಳು, ವಾಣಿಜ್ಯ ಮಳಿಗೆಗಳ ಮುಂದಿನ ಚಾವಣಿಗಳು, ತಾತ್ಕಾಲಿಕ ಚಾವಣಿ, ತಳ್ಳುವ ಗಾಡಿಗಳು, ಹಣ್ಣಿನ ಅಂಗಡಿಗಳು, ಕಟ್ಟಡದ ಅವಶೇಷಗಳು, ಅನಧಿಕೃತ ಕೇಬಲ್ಗಳು, ಫುಟ್ಪಾತ್ನಲ್ಲಿನ ಹೋಟೆಲ್ ಮುಂತಾದವುಗಳನ್ನು ತೆರವುಗೊಳಿಸಿ ಪಾದಚಾರಿಗಳ ಸುಗಮ ಸಂಚಾರಕ್ಕಾಗಿ ಅನುವು ಮಾಡಿಕೊಡಲಾಯಿತು.</p>.<p>ಮಹದೇವಪುರ ವ್ಯಾಪ್ತಿಯ ಎಲ್ಲ ವಾರ್ಡ್ಗಳಲ್ಲಿ ಈಗಾಗಲೇ ನಿಗದಿಪಡಿಸಿರುವ ದಿನಾಂಕದಂತೆ ಮುಂದಿನ ದಿನಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಮಹದೇವಪುರ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ತಿಳಿಸಿದರು.</p>.<p>ಕೆ.ಆರ್. ಪುರ ಮುಖ್ಯರಸ್ತೆ, ಬಸವನಪುರ, ಬೆಳ್ಳಂದೂರು, ಹೂಡಿ, ವಿಜ್ಞಾನ ನಗರ ಮತ್ತು ದೇವಸಂದ್ರ ವಾರ್ಡ್ ವ್ಯಾಪ್ತಿಯ ಹಲವು ಕಡೆಗಳಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಬಿ.ನಾರಾಯಣಪುರ, ಕೆ.ಆರ್. ಪುರ, ಪೈ ಲೇಔಟ್ ಪ್ರದೇಶಗಳಲ್ಲಿನ ಚರಂಡಿಗಳಲ್ಲಿ ತುಂಬಿದ್ದ ಹೂಳು ಹೊರತೆಗೆದು ಸ್ವಚ್ಛಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>