<p><strong>ಬೆಂಗಳೂರು</strong>: ಥಣಿಸಂದ್ರದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ತೆರವು ಮಾಡಿ, ಜಾಗವನ್ನು ವಶಕ್ಕೆ ಪಡೆಯಲಾಗಿದ್ದು, ಇದನ್ನು ಅರ್ಕಾವತಿ ಬಡಾವಣೆಗಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ. 2023ರಲ್ಲಿ ಪ್ರಾಥಮಿಕ ಅಧಿಸೂಚನೆ ಹಾಗೂ 2024ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಲಾಗಿತ್ತು ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ಪಷ್ಟಪಡಿಸಿದೆ.</p>.<p>2024ರಲ್ಲಿ ಒಂದು ಸುತ್ತಿನ ಒತ್ತುವರಿ ತೆರವುಗೊಳಿಸಿ, ಆಸ್ತಿ ಒಡೆತನವನ್ನು ಪಡೆದುಕೊಳ್ಳಲಾಗಿದೆ. ಈ ಸಂಬಂಧ ಭೂ ಮಾಲೀಕರು ಪರಿಹಾರವನ್ನು ಪಡೆದುಕೊಂಡಿದ್ದಾರೆ. 2014ರಲ್ಲಿ ಈ ಬಗ್ಗೆ ಹೈಕೋರ್ಟ್ ಆದೇಶವನ್ನು ಸಹ ಹೊರಡಿಸಿದೆ. 2021ರಲ್ಲಿ ಅರ್ಕಾವತಿ ಬಡಾವಣೆಗೆ ಸಂಬಂಧಿಸಿ ಹೈಕೋರ್ಟ್ ಆದೇಶ ಹೊರಡಿಸಿತ್ತು. ಇದರ ಹೊರತಾಗಿಯೂ, ಭೂಮಾಲೀಕರು ಅಕ್ರಮವಾಗಿ ನಿವೇಶನಗಳನ್ನು ನಿರ್ಮಿಸಿ, ಮಾರಾಟ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ನಿವೇಶನ ಖರೀದಿಸಿದ 33 ಮಂದಿ ನ್ಯಾಯಾಲಯ ನೇಮಿಸಿದ ಕೇಶವನಾರಾಯಣ ಸಮಿತಿಯಲ್ಲಿ ಪ್ರಕರಣ ದಾಖಲಿಸಿದರು. ಸಮಿತಿಯು ನೋಟಿಸ್ ನೀಡಿ, ವಿಚಾರಣೆ ನಡೆಸಿ, ಅವುಗಳನ್ನು ಅಕ್ರಮ ಎಂದು 2023ರಲ್ಲಿ ಘೋಷಿಸಿ, ಪ್ರಾಧಿಕಾರದ ಸುಪರ್ದಿಗೆ ಪಡೆದುಕೊಳ್ಳುವಂತೆ ನಿರ್ದೇಶನ ನೀಡಿತು ಎಂದು ತಿಳಿಸಿದ್ದಾರೆ. </p>.<p>ಈ ಭೂಮಿಯನ್ನು ಸ್ವಾಧೀನಪಡಿಸಿಕೊಂಡು, ಪರಿಹಾರ ಪಾವತಿಸಲಾಗಿದೆ. ನ್ಯಾಯಾಲಯ ಮತ್ತು ಪರಿಶೀಲನಾ ಸಮಿತಿಯಲ್ಲಿ ಬಿಡಿಎ ಪರವಾಗಿ ನಿರ್ಧಾರವಾಗಿದೆ. ನಿವೇಶನ ಮಾಲೀಕರಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಲಾಗಿದೆ. ಭೂ ಮಾಲೀಕರು ಬಿಡಿಎಗೆ ಸೇರಿದ ಭೂಮಿಯಲ್ಲಿ ಅಕ್ರಮವಾಗಿ ಶೆಡ್ಗಳನ್ನು ನಿರ್ಮಿಸಿ, ಬಾಡಿಗೆ ಸಂಗ್ರಹಿಸುತ್ತಿದ್ದರು ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಥಣಿಸಂದ್ರದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ತೆರವು ಮಾಡಿ, ಜಾಗವನ್ನು ವಶಕ್ಕೆ ಪಡೆಯಲಾಗಿದ್ದು, ಇದನ್ನು ಅರ್ಕಾವತಿ ಬಡಾವಣೆಗಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ. 2023ರಲ್ಲಿ ಪ್ರಾಥಮಿಕ ಅಧಿಸೂಚನೆ ಹಾಗೂ 2024ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಲಾಗಿತ್ತು ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ಪಷ್ಟಪಡಿಸಿದೆ.</p>.<p>2024ರಲ್ಲಿ ಒಂದು ಸುತ್ತಿನ ಒತ್ತುವರಿ ತೆರವುಗೊಳಿಸಿ, ಆಸ್ತಿ ಒಡೆತನವನ್ನು ಪಡೆದುಕೊಳ್ಳಲಾಗಿದೆ. ಈ ಸಂಬಂಧ ಭೂ ಮಾಲೀಕರು ಪರಿಹಾರವನ್ನು ಪಡೆದುಕೊಂಡಿದ್ದಾರೆ. 2014ರಲ್ಲಿ ಈ ಬಗ್ಗೆ ಹೈಕೋರ್ಟ್ ಆದೇಶವನ್ನು ಸಹ ಹೊರಡಿಸಿದೆ. 2021ರಲ್ಲಿ ಅರ್ಕಾವತಿ ಬಡಾವಣೆಗೆ ಸಂಬಂಧಿಸಿ ಹೈಕೋರ್ಟ್ ಆದೇಶ ಹೊರಡಿಸಿತ್ತು. ಇದರ ಹೊರತಾಗಿಯೂ, ಭೂಮಾಲೀಕರು ಅಕ್ರಮವಾಗಿ ನಿವೇಶನಗಳನ್ನು ನಿರ್ಮಿಸಿ, ಮಾರಾಟ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ನಿವೇಶನ ಖರೀದಿಸಿದ 33 ಮಂದಿ ನ್ಯಾಯಾಲಯ ನೇಮಿಸಿದ ಕೇಶವನಾರಾಯಣ ಸಮಿತಿಯಲ್ಲಿ ಪ್ರಕರಣ ದಾಖಲಿಸಿದರು. ಸಮಿತಿಯು ನೋಟಿಸ್ ನೀಡಿ, ವಿಚಾರಣೆ ನಡೆಸಿ, ಅವುಗಳನ್ನು ಅಕ್ರಮ ಎಂದು 2023ರಲ್ಲಿ ಘೋಷಿಸಿ, ಪ್ರಾಧಿಕಾರದ ಸುಪರ್ದಿಗೆ ಪಡೆದುಕೊಳ್ಳುವಂತೆ ನಿರ್ದೇಶನ ನೀಡಿತು ಎಂದು ತಿಳಿಸಿದ್ದಾರೆ. </p>.<p>ಈ ಭೂಮಿಯನ್ನು ಸ್ವಾಧೀನಪಡಿಸಿಕೊಂಡು, ಪರಿಹಾರ ಪಾವತಿಸಲಾಗಿದೆ. ನ್ಯಾಯಾಲಯ ಮತ್ತು ಪರಿಶೀಲನಾ ಸಮಿತಿಯಲ್ಲಿ ಬಿಡಿಎ ಪರವಾಗಿ ನಿರ್ಧಾರವಾಗಿದೆ. ನಿವೇಶನ ಮಾಲೀಕರಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಲಾಗಿದೆ. ಭೂ ಮಾಲೀಕರು ಬಿಡಿಎಗೆ ಸೇರಿದ ಭೂಮಿಯಲ್ಲಿ ಅಕ್ರಮವಾಗಿ ಶೆಡ್ಗಳನ್ನು ನಿರ್ಮಿಸಿ, ಬಾಡಿಗೆ ಸಂಗ್ರಹಿಸುತ್ತಿದ್ದರು ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>