ಎಇಸಿಎಸ್ ಬಡಾವಣೆಯ ಚಿನ್ನಪ್ಪನಹಳ್ಳಿ ಕೆರೆಯಿಂದ ಮುನ್ನೆಕೊಳಲು ಕೆರೆಗೆ ಸಂಪರ್ಕ ಕಲ್ಪಿಸುವ ರಾಜಕಾಲುವೆ ಒತ್ತುವರಿ ಆಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಗುರುತು ಮಾಡಿ ಮನೆ, ವಾಣಿಜ್ಯ ಕಟ್ಟಡಗಳನ್ನು ಒಡೆಯಲು ನಿಂತಿದ್ದಾರೆ. ಕಾಂಪೌಂಡ್ ಒಡೆದು ಹಾಕಲಾಗಿದೆ. ಉಳಿದ ಕಟ್ಟಡಗಳನ್ನು ಒಂದು ವಾರದೊಳಗೆ ತೆರವು ಮಾಡುವಂತೆ ಮನೆ ಮಾಲೀಕರಿಗೆ ಸೂಚನೆ ನೀಡಲಾಗಿದೆ. 20ಕ್ಕೂ ಹೆಚ್ಚು ಮನೆಗಳನ್ನು ಒತ್ತುವರಿ ತೆರವಿಗಾಗಿ ಗುರುತು ಮಾಡಲಾಗಿದೆ.