<p><strong>ಬೆಂಗಳೂರು</strong>: ಕೆಥೋಲಿಕ್ ಧರ್ಮಸಭೆಯಲ್ಲಿ ಭಾಷಾ ಸಮಸ್ಯೆಯನ್ನು ಕೊನೆಗೊಳಿಸಿ, ಎಲ್ಲ ಕ್ರೈಸ್ತರನ್ನು ಒಂದೇ ವೇದಿಕೆಯಲ್ಲಿ ತರಬೇಕು ಎಂದು ಕರ್ನಾಟಕ ಕಥೋಲಿಕ್ ಕ್ರೈಸ್ತರ ಕನ್ನಡ ಸಂಘದ ಅಧ್ಯಕ್ಷ ರಫಾಯಲ್ ರಾಜ್ ಆಗ್ರಹಿಸಿದರು.</p>.<p>ಬೆಂಗಳೂರು ಮಹಾಧರ್ಮಕ್ಷೇತ್ರದ ನೂತನ ಸಹಾಯಕ ಧರ್ಮಾಧ್ಯಕ್ಷರಿಗೆ ಅಖಿಲ ಕರ್ನಾಟಕ ಕೆಥೋಲಿಕ್ ಕ್ರೈಸ್ತರ ಕನ್ನಡ ಸಂಘ, ಕರ್ನಾಟಕ ಕ್ರೈಸ್ತರ ಕನ್ನಡ ಅಭಿಮಾನಿಗಳ ಸಂಘ, ಕನ್ನಡ ಮತ್ತು ಜಾಗೃತಿ ವೇದಿಕೆ ಶುಕ್ರವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಈಗಲೂ ಜೀವಂತವಾಗಿರುವ ಭಾಷಾ ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಮೂಲಕ ಜನಸಾಮಾನ್ಯರು ಕೂಡ ಕನ್ನಡ ಭಾಷೆ, ಸಂಸ್ಕೃತಿಯನ್ನು ಎತ್ತಿಹಿಡಿಯಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ಪದಾಧಿಕಾರಿ ಐಸಾಕ್ ಆರೋಗ್ಯಸ್ವಾಮಿ ಮಾತನಾಡಿ, ‘ಕನ್ನಡದ ಮಕ್ಕಳಿಗಾಗಿ ಪ್ರಾದೇಶಿಕ ಗುರುಮಠ ಸ್ಥಾಪನೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ನೂತನ ಸಹಾಯಕ ಧರ್ಮಾಧ್ಯಕ್ಷರಾದ ಧರ್ಮಗುರು ಆರೋಕ್ಯರಾಜ್ ಸತೀಶ್ ಕುಮಾರ್ ಮತ್ತು ಧರ್ಮಗುರು ಜೋಸೆಫ್ ಸೂಸೈನಾದನ್ ಅವರನ್ನು ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆಥೋಲಿಕ್ ಧರ್ಮಸಭೆಯಲ್ಲಿ ಭಾಷಾ ಸಮಸ್ಯೆಯನ್ನು ಕೊನೆಗೊಳಿಸಿ, ಎಲ್ಲ ಕ್ರೈಸ್ತರನ್ನು ಒಂದೇ ವೇದಿಕೆಯಲ್ಲಿ ತರಬೇಕು ಎಂದು ಕರ್ನಾಟಕ ಕಥೋಲಿಕ್ ಕ್ರೈಸ್ತರ ಕನ್ನಡ ಸಂಘದ ಅಧ್ಯಕ್ಷ ರಫಾಯಲ್ ರಾಜ್ ಆಗ್ರಹಿಸಿದರು.</p>.<p>ಬೆಂಗಳೂರು ಮಹಾಧರ್ಮಕ್ಷೇತ್ರದ ನೂತನ ಸಹಾಯಕ ಧರ್ಮಾಧ್ಯಕ್ಷರಿಗೆ ಅಖಿಲ ಕರ್ನಾಟಕ ಕೆಥೋಲಿಕ್ ಕ್ರೈಸ್ತರ ಕನ್ನಡ ಸಂಘ, ಕರ್ನಾಟಕ ಕ್ರೈಸ್ತರ ಕನ್ನಡ ಅಭಿಮಾನಿಗಳ ಸಂಘ, ಕನ್ನಡ ಮತ್ತು ಜಾಗೃತಿ ವೇದಿಕೆ ಶುಕ್ರವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಈಗಲೂ ಜೀವಂತವಾಗಿರುವ ಭಾಷಾ ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಮೂಲಕ ಜನಸಾಮಾನ್ಯರು ಕೂಡ ಕನ್ನಡ ಭಾಷೆ, ಸಂಸ್ಕೃತಿಯನ್ನು ಎತ್ತಿಹಿಡಿಯಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ಪದಾಧಿಕಾರಿ ಐಸಾಕ್ ಆರೋಗ್ಯಸ್ವಾಮಿ ಮಾತನಾಡಿ, ‘ಕನ್ನಡದ ಮಕ್ಕಳಿಗಾಗಿ ಪ್ರಾದೇಶಿಕ ಗುರುಮಠ ಸ್ಥಾಪನೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ನೂತನ ಸಹಾಯಕ ಧರ್ಮಾಧ್ಯಕ್ಷರಾದ ಧರ್ಮಗುರು ಆರೋಕ್ಯರಾಜ್ ಸತೀಶ್ ಕುಮಾರ್ ಮತ್ತು ಧರ್ಮಗುರು ಜೋಸೆಫ್ ಸೂಸೈನಾದನ್ ಅವರನ್ನು ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>