ಈಗ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವುದರಿಂದ ವಿದ್ಯುತ್ ಬೇಡಿಕೆ ತಗ್ಗಿದೆ. ಮುಂಗಾರು ಅವಧಿಯಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಮತ್ತು ಪವನ ವಿದ್ಯುತ್ ಉತ್ಪಾದನೆಯಲ್ಲೂ ಹೆಚ್ಚಳವಾಗುವ ಸಾಧ್ಯತೆಯನ್ನು ಮನಗಂಡು ವಿದ್ಯುತ್ ಮಾರಾಟದ ಮೇಲಿನ ನಿರ್ಬಂಧ ಹಿಂಪಡೆಯಲಾಗಿದೆ ಎಂದು ಇಂಧನ ಇಲಾಖೆ ಮೇ 24ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.