<p><strong>ಬೆಂಗಳೂರು:</strong> ವೈಟ್ಫೀಲ್ಡ್ ಠಾಣೆ ವ್ಯಾಪ್ತಿಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲೇ ವಿದ್ಯುತ್ ತಗುಲಿ ಎಂಜಿನಿಯರ್ ಚಂದ್ರಶೇಖರ್ (26) ಎಂಬುವರು ಮೃತಪಟ್ಟಿದ್ದಾರೆ.</p>.<p>ಚಿತ್ರದುರ್ಗದ ಚಂದ್ರಶೇಖರ್, ವರ್ಷದ ಹಿಂದಷ್ಟೇ ಕೆಲಸಕ್ಕೆ ಸೇರಿದ್ದರು. ವಿದ್ಯುತ್ ನಿರ್ವಹಣಾ ವಿಭಾಗದ ಜವಾಬ್ದಾರಿ ನೋಡಿಕೊಳ್ಳುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಎಂದಿನಂತೆ ಸೋಮವಾರ ರಾತ್ರಿ ಕಂಪನಿ ಕಚೇರಿಗೆ ಬಂದಿದ್ದ ಚಂದ್ರಶೇಖರ್, ಕೆಲಸದಲ್ಲಿ ತೊಡಗಿದ್ದರು. ಅದೇ ವೇಳೆಯೇ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು.</p>.<p>‘ಮೃತನ ಪೋಷಕರ ದೂರು ಆಧರಿಸಿ ಕಂಪನಿ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ವಿವರಿಸಿದರು.</p>.<p class="Briefhead"><strong>ಆಫ್ರಿಕಾ ಪ್ರಜೆಗಳಿಂದ ಹಲ್ಲೆ<br />ಬೆಂಗಳೂರು: </strong>ಕಾರಿನಲ್ಲಿ ಬಂದು ಬೈಕ್ಗೆ ಡಿಕ್ಕಿ ಹೊಡೆದ ಮೂವರು ಆಫ್ರಿಕಾ ಪ್ರಜೆಗಳ ವರ್ತನೆಯನ್ನು ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.</p>.<p>ಈ ಬಗ್ಗೆ ನರೇಶ್ (21) ಪೊಲೀಸರಿಗೆ ದೂರು ನೀಡಿದ್ದಾರೆ. ಭಾನುವಾರ ರಾತ್ರಿ 8ರ ಸುಮಾರಿಗೆ ತಾವು ಬೈಕ್ನಲ್ಲಿ ಎಚ್ಆರ್ಬಿಆರ್ ಬಡಾವಣೆಯಲ್ಲಿರುವ ಮನೆಗೆ ಹೊರಟಿದ್ದಾಗ ವೇಗವಾಗಿ ಬಂದ ಕಾರು ಹಿಂದಿನಿಂದ ಡಿಕ್ಕಿ ಹೊಡೆದು ನಿಲ್ಲದೆ ಪರಾರಿಯಾಯಿತು.</p>.<p>ಕಾರು ಬೆನ್ನತ್ತಿ ಅಡ್ಡಗಟ್ಟಿದ ನರೇಶ್ ಗೆ ಹಲ್ಲೆ ನಡೆಸಲಾಯಿತು ಎಂದು ಆರೋಪಿಸಲಾಗಿದೆ. ನರೇಶ್ ಅವರ ತಲೆ ಹಾಗೂ ಕಿವಿಗೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ನರೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ನರೇಶ್ ಸ್ನೇಹಿತರು ಆರೋಪಿಗಳನ್ನು ಹಿಡಿಯಲು ವಿಫಲ ಯತ್ನ ನಡೆಸಿದರು. ತಪ್ಪಿಸಿಕೊಳ್ಳಲು ಆರೋಪಿಗಳು ಕಾರನ್ನು ಬಿಟ್ಟು ಓಡಿಹೋದರು. ಆರೋಪಿಗಳ ಸುಳಿವು ಸಿಕ್ಕಿದ್ದು, ಬಂಧಿಸಲು ಕ್ರಮ ವಹಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವೈಟ್ಫೀಲ್ಡ್ ಠಾಣೆ ವ್ಯಾಪ್ತಿಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲೇ ವಿದ್ಯುತ್ ತಗುಲಿ ಎಂಜಿನಿಯರ್ ಚಂದ್ರಶೇಖರ್ (26) ಎಂಬುವರು ಮೃತಪಟ್ಟಿದ್ದಾರೆ.</p>.<p>ಚಿತ್ರದುರ್ಗದ ಚಂದ್ರಶೇಖರ್, ವರ್ಷದ ಹಿಂದಷ್ಟೇ ಕೆಲಸಕ್ಕೆ ಸೇರಿದ್ದರು. ವಿದ್ಯುತ್ ನಿರ್ವಹಣಾ ವಿಭಾಗದ ಜವಾಬ್ದಾರಿ ನೋಡಿಕೊಳ್ಳುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಎಂದಿನಂತೆ ಸೋಮವಾರ ರಾತ್ರಿ ಕಂಪನಿ ಕಚೇರಿಗೆ ಬಂದಿದ್ದ ಚಂದ್ರಶೇಖರ್, ಕೆಲಸದಲ್ಲಿ ತೊಡಗಿದ್ದರು. ಅದೇ ವೇಳೆಯೇ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು.</p>.<p>‘ಮೃತನ ಪೋಷಕರ ದೂರು ಆಧರಿಸಿ ಕಂಪನಿ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ವಿವರಿಸಿದರು.</p>.<p class="Briefhead"><strong>ಆಫ್ರಿಕಾ ಪ್ರಜೆಗಳಿಂದ ಹಲ್ಲೆ<br />ಬೆಂಗಳೂರು: </strong>ಕಾರಿನಲ್ಲಿ ಬಂದು ಬೈಕ್ಗೆ ಡಿಕ್ಕಿ ಹೊಡೆದ ಮೂವರು ಆಫ್ರಿಕಾ ಪ್ರಜೆಗಳ ವರ್ತನೆಯನ್ನು ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.</p>.<p>ಈ ಬಗ್ಗೆ ನರೇಶ್ (21) ಪೊಲೀಸರಿಗೆ ದೂರು ನೀಡಿದ್ದಾರೆ. ಭಾನುವಾರ ರಾತ್ರಿ 8ರ ಸುಮಾರಿಗೆ ತಾವು ಬೈಕ್ನಲ್ಲಿ ಎಚ್ಆರ್ಬಿಆರ್ ಬಡಾವಣೆಯಲ್ಲಿರುವ ಮನೆಗೆ ಹೊರಟಿದ್ದಾಗ ವೇಗವಾಗಿ ಬಂದ ಕಾರು ಹಿಂದಿನಿಂದ ಡಿಕ್ಕಿ ಹೊಡೆದು ನಿಲ್ಲದೆ ಪರಾರಿಯಾಯಿತು.</p>.<p>ಕಾರು ಬೆನ್ನತ್ತಿ ಅಡ್ಡಗಟ್ಟಿದ ನರೇಶ್ ಗೆ ಹಲ್ಲೆ ನಡೆಸಲಾಯಿತು ಎಂದು ಆರೋಪಿಸಲಾಗಿದೆ. ನರೇಶ್ ಅವರ ತಲೆ ಹಾಗೂ ಕಿವಿಗೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ನರೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ನರೇಶ್ ಸ್ನೇಹಿತರು ಆರೋಪಿಗಳನ್ನು ಹಿಡಿಯಲು ವಿಫಲ ಯತ್ನ ನಡೆಸಿದರು. ತಪ್ಪಿಸಿಕೊಳ್ಳಲು ಆರೋಪಿಗಳು ಕಾರನ್ನು ಬಿಟ್ಟು ಓಡಿಹೋದರು. ಆರೋಪಿಗಳ ಸುಳಿವು ಸಿಕ್ಕಿದ್ದು, ಬಂಧಿಸಲು ಕ್ರಮ ವಹಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>