<p><strong>ಬೆಂಗಳೂರು:</strong> ನಗರದ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ (ಸಿಐಟಿ) ಆಯೋಜಿಸಿದ್ದ 15ನೇ ಪದವಿ ಪ್ರದಾನ ಸಮಾರಂಭದಲ್ಲಿ ಎಂಜಿನಿಯರಿಂಗ್ ಪದವಿ ಪೂರೈಸಿದ ಮತ್ತು ಪಿಎಚ್.ಡಿ ಪದವೀಧರರಿಗೆ ಪದವಿ ಪ್ರದಾನ ಮಾಡಲಾಯಿತು.</p>.<p>ಪದವಿ ಪ್ರದಾನ ಮಾಡಿ ಮಾತನಾಡಿದ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್ಸಿ) ಮಾಜಿ ನಿರ್ದೇಶಕ ಪಿ.ಬಲರಾಮ್, ತಮ್ಮ ವೃತ್ತಿ ಜೀವನ ಮತ್ತು ಸಂಶೋಧನೆಗಳ ಒಳನೋಟವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಪದವಿ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಸಿದರು.</p>.<p>ಮೈಕ್ರೊಸಾಫ್ಟ್ ರಿಸರ್ಚ್ ಇಂಡಿಯಾದ, ಹಿರಿಯ ಪ್ರಧಾನ ಸಂಶೋಧಕ ಸ್ವಾಮಿ ಮನೋಹರ್ ಅವರು ಶಿಕ್ಷಣದ ಉದ್ದೇಶ, ಮಾನವನ ಮಿದುಳಿನ ವಿಕಾಸವನ್ನು ವಿವರಿಸಿದರು. ಯಶಸ್ವಿ ಜೀವನ ಮತ್ತು ವೃತ್ತಿಜೀವನವನ್ನು ರೂಪಿಸುವಲ್ಲಿ ಅರಿವಿನ ಮೌಲ್ಯ, ಸ್ಥಿತಿಸ್ಥಾಪಕತ್ವ ಮತ್ತು ಕಲ್ಪನೆಯ ಮಹತ್ವವನ್ನು ಒತ್ತಿ ಹೇಳಿದರು.</p>.<p>ಎಆರ್ಎಂ ಎಂಬೆಡೆಡ್ ಟೆಕ್ನಾಲಜೀಸ್ನ ಎಕೊಸಿಸ್ಟಮ್ ಅಲಯನ್ಸೆಸ್ನ ಪ್ರಾದೇಶಿಕ ಮುಖ್ಯಸ್ಥ ಸುಮೀತ್ ವರ್ಮ ಉದ್ಯಮಶೀಲತೆಯಲ್ಲಿ ಎಂಜಿನಿಯರ್ಗಳ ನಿರ್ಣಾಯಕ ಪಾತ್ರವನ್ನು ವಿವರಿಸಿದರು. ಯಶಸ್ವಿ ಜೀವನ ರೂಪಿಸುವ ಮತ್ತು ನಿರ್ವಹಿಸುವ ಕುರಿತು ಸಲಹೆಗಳನ್ನು ನೀಡಿದರು.</p>.<p>ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರಗಳನ್ನು ವಿತರಿಸಿದರು. ಸಿಐಟಿ ಅಧ್ಯಕ್ಷ ಡಿ.ಕೆ.ಮೋಹನ್, ಪ್ರಾಚಾರ್ಯೆ ಇಂದುಮತಿ ಮತ್ತು ಕಾಲೇಜಿನ ಸಿಬ್ಬಂದಿ ಸಮಾರಂಭದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ (ಸಿಐಟಿ) ಆಯೋಜಿಸಿದ್ದ 15ನೇ ಪದವಿ ಪ್ರದಾನ ಸಮಾರಂಭದಲ್ಲಿ ಎಂಜಿನಿಯರಿಂಗ್ ಪದವಿ ಪೂರೈಸಿದ ಮತ್ತು ಪಿಎಚ್.ಡಿ ಪದವೀಧರರಿಗೆ ಪದವಿ ಪ್ರದಾನ ಮಾಡಲಾಯಿತು.</p>.<p>ಪದವಿ ಪ್ರದಾನ ಮಾಡಿ ಮಾತನಾಡಿದ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್ಸಿ) ಮಾಜಿ ನಿರ್ದೇಶಕ ಪಿ.ಬಲರಾಮ್, ತಮ್ಮ ವೃತ್ತಿ ಜೀವನ ಮತ್ತು ಸಂಶೋಧನೆಗಳ ಒಳನೋಟವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಪದವಿ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಸಿದರು.</p>.<p>ಮೈಕ್ರೊಸಾಫ್ಟ್ ರಿಸರ್ಚ್ ಇಂಡಿಯಾದ, ಹಿರಿಯ ಪ್ರಧಾನ ಸಂಶೋಧಕ ಸ್ವಾಮಿ ಮನೋಹರ್ ಅವರು ಶಿಕ್ಷಣದ ಉದ್ದೇಶ, ಮಾನವನ ಮಿದುಳಿನ ವಿಕಾಸವನ್ನು ವಿವರಿಸಿದರು. ಯಶಸ್ವಿ ಜೀವನ ಮತ್ತು ವೃತ್ತಿಜೀವನವನ್ನು ರೂಪಿಸುವಲ್ಲಿ ಅರಿವಿನ ಮೌಲ್ಯ, ಸ್ಥಿತಿಸ್ಥಾಪಕತ್ವ ಮತ್ತು ಕಲ್ಪನೆಯ ಮಹತ್ವವನ್ನು ಒತ್ತಿ ಹೇಳಿದರು.</p>.<p>ಎಆರ್ಎಂ ಎಂಬೆಡೆಡ್ ಟೆಕ್ನಾಲಜೀಸ್ನ ಎಕೊಸಿಸ್ಟಮ್ ಅಲಯನ್ಸೆಸ್ನ ಪ್ರಾದೇಶಿಕ ಮುಖ್ಯಸ್ಥ ಸುಮೀತ್ ವರ್ಮ ಉದ್ಯಮಶೀಲತೆಯಲ್ಲಿ ಎಂಜಿನಿಯರ್ಗಳ ನಿರ್ಣಾಯಕ ಪಾತ್ರವನ್ನು ವಿವರಿಸಿದರು. ಯಶಸ್ವಿ ಜೀವನ ರೂಪಿಸುವ ಮತ್ತು ನಿರ್ವಹಿಸುವ ಕುರಿತು ಸಲಹೆಗಳನ್ನು ನೀಡಿದರು.</p>.<p>ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರಗಳನ್ನು ವಿತರಿಸಿದರು. ಸಿಐಟಿ ಅಧ್ಯಕ್ಷ ಡಿ.ಕೆ.ಮೋಹನ್, ಪ್ರಾಚಾರ್ಯೆ ಇಂದುಮತಿ ಮತ್ತು ಕಾಲೇಜಿನ ಸಿಬ್ಬಂದಿ ಸಮಾರಂಭದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>