<p><strong>ಬೆಂಗಳೂರು</strong>: ದೇಶದ ಅಭಿವೃದ್ಧಿಯಲ್ಲಿ ಎಂಜಿನಿಯರ್ಗಳು ಮಹತ್ವದ ಪಾತ್ರ ವಹಿಸುತ್ತಾರೆ ಎಂದು ಬಿಸಿನೆಸ್ ಕಾರಿಡಾರ್ ಲಿಮಿಟೆಡ್ನ ಅಧ್ಯಕ್ಷ ಎಲ್.ಕೆ. ಅತೀಕ್ ತಿಳಿಸಿದರು.</p>.<p>ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ (ವಿಟಿಯು) ಸಂಯೋಜಿತವಾಗಿರುವ ಸ್ವಾಯತ್ತ ಸಂಸ್ಥೆ ಬೆಂಗಳೂರಿನ ಬಿ.ಎಂ.ಎಸ್. ಎಂಜಿನಿಯರಿಂಗ್ ಕಾಲೇಜಿನ 2025ರ ಬ್ಯಾಚ್ನ ಪದವಿ ದಿನ-II ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ದೇಶದಲ್ಲಿ ಎಂಜಿನಿಯರ್ಗಳಿಗೆ ಹೆಚ್ಚಿನ ಅವಕಾಶವಿದ್ದು, ಎಂಜಿನಿಯರಿಂಗ್ ಪದವಿ ಪಡೆಯುವವರ ಸಂಖ್ಯೆ ಹೆಚ್ಚಬೇಕು ಎಂದು ಆಶಿಸಿದರು.</p>.<p>ಉತ್ತಮ ಮನುಷ್ಯರಾಗಲು ಕಠಿಣ ಪರಿಶ್ರಮ ಪಡಬೇಕು. ಸಾಧನೆ ಮಾಡಲು ಗುರಿ ಇರಬೇಕು ಮತ್ತು ಗುರುಗಳ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು.</p>.<p>ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ ಬಿಒಜಿ ಸದಸ್ಯ, ಕರ್ನಲ್ (ನಿವೃತ್ತ) ಎಚ್.ಎಸ್. ಶಂಕರ್, ಪ್ರಾಂಶುಪಾಲ ಭೀಮಶಾ ಆರ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದೇಶದ ಅಭಿವೃದ್ಧಿಯಲ್ಲಿ ಎಂಜಿನಿಯರ್ಗಳು ಮಹತ್ವದ ಪಾತ್ರ ವಹಿಸುತ್ತಾರೆ ಎಂದು ಬಿಸಿನೆಸ್ ಕಾರಿಡಾರ್ ಲಿಮಿಟೆಡ್ನ ಅಧ್ಯಕ್ಷ ಎಲ್.ಕೆ. ಅತೀಕ್ ತಿಳಿಸಿದರು.</p>.<p>ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ (ವಿಟಿಯು) ಸಂಯೋಜಿತವಾಗಿರುವ ಸ್ವಾಯತ್ತ ಸಂಸ್ಥೆ ಬೆಂಗಳೂರಿನ ಬಿ.ಎಂ.ಎಸ್. ಎಂಜಿನಿಯರಿಂಗ್ ಕಾಲೇಜಿನ 2025ರ ಬ್ಯಾಚ್ನ ಪದವಿ ದಿನ-II ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ದೇಶದಲ್ಲಿ ಎಂಜಿನಿಯರ್ಗಳಿಗೆ ಹೆಚ್ಚಿನ ಅವಕಾಶವಿದ್ದು, ಎಂಜಿನಿಯರಿಂಗ್ ಪದವಿ ಪಡೆಯುವವರ ಸಂಖ್ಯೆ ಹೆಚ್ಚಬೇಕು ಎಂದು ಆಶಿಸಿದರು.</p>.<p>ಉತ್ತಮ ಮನುಷ್ಯರಾಗಲು ಕಠಿಣ ಪರಿಶ್ರಮ ಪಡಬೇಕು. ಸಾಧನೆ ಮಾಡಲು ಗುರಿ ಇರಬೇಕು ಮತ್ತು ಗುರುಗಳ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು.</p>.<p>ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ ಬಿಒಜಿ ಸದಸ್ಯ, ಕರ್ನಲ್ (ನಿವೃತ್ತ) ಎಚ್.ಎಸ್. ಶಂಕರ್, ಪ್ರಾಂಶುಪಾಲ ಭೀಮಶಾ ಆರ್ಯ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>