ಬೆಂಗಳೂರು: ‘ಸ್ವಾತಂತ್ರ್ಯ ಬಂದಾಗಿನಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಸರ್ಕಾರಗಳು ಹಿಂದಿಯನ್ನು ರಾಜ್ಯಗಳ ಮೇಲೆ ಹೇರಿಕೆ ಮಾಡುತ್ತಾ ಬಂದಿವೆ. ಇದನ್ನು ಧಿಕ್ಕರಿಸುವ ಧೈರ್ಯವನ್ನು ರಾಜ್ಯ ಸರ್ಕಾರಗಳು ತೋರದ ಪರಿಣಾಮವೇ ಕನ್ನಡ ಕಡೆಗಣನೆಯಾಗುವ ಸ್ಥಿತಿಗೆ ತಲುಪಿದ್ದೇವೆ’ ಎಂದು ನಿವೃತ್ತ ಐಎಎಸ್ ಅಧಿಕಾರಿ ಎಸ್.ಎಮ್. ಜಾಮದಾರ್ ಬೇಸರ ವ್ಯಕ್ತಪಡಿಸಿದರು.