<p><strong>ಬೆಂಗಳೂರು:</strong> ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಪ್ರವೇಶಕ್ಕಾಗಿ ಅರ್ಜಿ ಪಡೆಯಲು ರಾಜ್ಯದ ಎಲ್ಲೆಡೆ ಕಾಲೇಜುಗಳ ಮುಂದೆ ವಿದ್ಯಾರ್ಥಿಗಳ ಉದ್ದನೆಯ ಸಾಲು ಸಾಮಾನ್ಯವಾಗಿದೆ.</p>.<p>ಸಿಬಿಎಸ್ಇ, ಐಸಿಎಸ್ಇ ಪಠ್ಯಕ್ರಮದ ಕೆಲವು ಕಾಲೇಜುಗಳಲ್ಲಿ ಈಗಾಗಲೇ 11ನೇ ತರಗತಿಯ ದಾಖಲಾತಿ ಪೂರ್ಣಗೊಂಡಿದ್ದು, ತರಗತಿಗಳೂ ಆರಂಭವಾಗಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿಕಾಲೇಜುಗಳಲ್ಲಿ ಅರ್ಜಿ ವಿತರಣೆ ನಡೆಯುತ್ತಿದೆ.</p>.<p>ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗ ಮಾತ್ರವಲ್ಲದೆ, ಡಿಪ್ಲೊಮಾ, ಐಟಿಐನಂತಹ ವೃತ್ತಿಪರ ಕೋರ್ಸ್ಗಳಿಗೂ ಬೇಡಿಕೆ ಹೆಚ್ಚಾಗಿದೆ. ಕೆಲವು ಪ್ರತಿಷ್ಠಿತ ಖಾಸಗಿ ಕಾಲೇಜುಗಳು, ಪಿಯು ಮತ್ತು ಪದವಿ ದಾಖಲಾತಿಗೆ ಪ್ರವೇಶ ಪರೀಕ್ಷೆಯನ್ನೂ ನಡೆಸುತ್ತಿವೆ. ಹೊಸ ವಿಭಾಗ, ಹೊಸ ಕೋರ್ಸ್ಗಳೂ ಪ್ರಾರಂಭವಾಗಿವೆ. ಕಲಾ ವಿಭಾಗಕ್ಕೆ ದಾಖಲಾಗಲು ಬಯಸುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಿದೆ.</p>.<p>‘ಕಲಾ ವಿಭಾಗ ಆಯ್ಕೆಮಾಡಿಕೊಳ್ಳುತ್ತಿರುವವರ ಸಂಖ್ಯೆ ಕಳೆದ ಬಾರಿಗಿಂತ ಈ ಸಲ ಹೆಚ್ಚಾಗಿದೆ. ಪದವಿ ನಂತರ ಕೇಂದ್ರ ಮತ್ತು ರಾಜ್ಯ ಲೋಕಸೇವಾ ಆಯೋಗಗಳು ನಡೆಸುವ ಪರೀಕ್ಷೆ ತೆಗೆದುಕೊಳ್ಳಬೇಕು ಎಂಬ ಉದ್ದೇಶದಿಂದ ಈ ವಿಭಾಗವನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಸರ್ಕಾರಿ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಟಿ. ಶಶಿಕಲಾ ಹೇಳಿದರು.</p>.<p>‘ವಿಜ್ಞಾನ ಮತ್ತು ಗಣಿತದಲ್ಲಿ ಹೆಚ್ಚು ಅಂಕಗಳು ಬಂದಿದ್ದರೂ, ಕಲಾ ವಿಭಾಗದಲ್ಲಿ ನನಗೆ ಆಸಕ್ತಿ ಇದೆ. ಇದೇ ವಿಭಾಗದಲ್ಲಿನ ಸಂಯೋಜನೆಗಳನ್ನು ಆಯ್ಕೆ ಮಾಡಿಕೊಳ್ಳುತ್ತೇನೆ’ ಎಂದು ವಿದ್ಯಾರ್ಥಿ ರಮೇಶ್ ಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಪ್ರವೇಶಕ್ಕಾಗಿ ಅರ್ಜಿ ಪಡೆಯಲು ರಾಜ್ಯದ ಎಲ್ಲೆಡೆ ಕಾಲೇಜುಗಳ ಮುಂದೆ ವಿದ್ಯಾರ್ಥಿಗಳ ಉದ್ದನೆಯ ಸಾಲು ಸಾಮಾನ್ಯವಾಗಿದೆ.</p>.<p>ಸಿಬಿಎಸ್ಇ, ಐಸಿಎಸ್ಇ ಪಠ್ಯಕ್ರಮದ ಕೆಲವು ಕಾಲೇಜುಗಳಲ್ಲಿ ಈಗಾಗಲೇ 11ನೇ ತರಗತಿಯ ದಾಖಲಾತಿ ಪೂರ್ಣಗೊಂಡಿದ್ದು, ತರಗತಿಗಳೂ ಆರಂಭವಾಗಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿಕಾಲೇಜುಗಳಲ್ಲಿ ಅರ್ಜಿ ವಿತರಣೆ ನಡೆಯುತ್ತಿದೆ.</p>.<p>ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗ ಮಾತ್ರವಲ್ಲದೆ, ಡಿಪ್ಲೊಮಾ, ಐಟಿಐನಂತಹ ವೃತ್ತಿಪರ ಕೋರ್ಸ್ಗಳಿಗೂ ಬೇಡಿಕೆ ಹೆಚ್ಚಾಗಿದೆ. ಕೆಲವು ಪ್ರತಿಷ್ಠಿತ ಖಾಸಗಿ ಕಾಲೇಜುಗಳು, ಪಿಯು ಮತ್ತು ಪದವಿ ದಾಖಲಾತಿಗೆ ಪ್ರವೇಶ ಪರೀಕ್ಷೆಯನ್ನೂ ನಡೆಸುತ್ತಿವೆ. ಹೊಸ ವಿಭಾಗ, ಹೊಸ ಕೋರ್ಸ್ಗಳೂ ಪ್ರಾರಂಭವಾಗಿವೆ. ಕಲಾ ವಿಭಾಗಕ್ಕೆ ದಾಖಲಾಗಲು ಬಯಸುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಿದೆ.</p>.<p>‘ಕಲಾ ವಿಭಾಗ ಆಯ್ಕೆಮಾಡಿಕೊಳ್ಳುತ್ತಿರುವವರ ಸಂಖ್ಯೆ ಕಳೆದ ಬಾರಿಗಿಂತ ಈ ಸಲ ಹೆಚ್ಚಾಗಿದೆ. ಪದವಿ ನಂತರ ಕೇಂದ್ರ ಮತ್ತು ರಾಜ್ಯ ಲೋಕಸೇವಾ ಆಯೋಗಗಳು ನಡೆಸುವ ಪರೀಕ್ಷೆ ತೆಗೆದುಕೊಳ್ಳಬೇಕು ಎಂಬ ಉದ್ದೇಶದಿಂದ ಈ ವಿಭಾಗವನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಸರ್ಕಾರಿ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಟಿ. ಶಶಿಕಲಾ ಹೇಳಿದರು.</p>.<p>‘ವಿಜ್ಞಾನ ಮತ್ತು ಗಣಿತದಲ್ಲಿ ಹೆಚ್ಚು ಅಂಕಗಳು ಬಂದಿದ್ದರೂ, ಕಲಾ ವಿಭಾಗದಲ್ಲಿ ನನಗೆ ಆಸಕ್ತಿ ಇದೆ. ಇದೇ ವಿಭಾಗದಲ್ಲಿನ ಸಂಯೋಜನೆಗಳನ್ನು ಆಯ್ಕೆ ಮಾಡಿಕೊಳ್ಳುತ್ತೇನೆ’ ಎಂದು ವಿದ್ಯಾರ್ಥಿ ರಮೇಶ್ ಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>