ಹಿಂದೂ ಆಧ್ಯಾತ್ಮಿಕ ಸೇವಾ ಪ್ರತಿಷ್ಠಾನವು (ಎಚ್ಎಸ್ಎಸ್ಎಫ್) ಪರಿಸರ ದಿನಾಚರಣೆಯ ಪ್ರಯುಕ್ತ ಆನ್ಲೈನ್ ಮೂಲಕ ಭಾನುವಾರ ಏರ್ಪಡಿಸಿದ್ದ ‘ಪ್ರಕೃತಿ ವಂದನಾ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರಕೃತಿ ನಾಶದ ಪರಿಣಾಮ ದಿನಗಳು ಉರುಳಿದಂತೆ ನಮಗೆ ಭಯಾನಕ ಅನುಭವ ಉಂಟುಮಾಡುತ್ತಿದೆ. ಇದೇ ಜೀವನ ಶೈಲಿಯನ್ನು ನಾವು ಮುಂದುವರೆಸಿದಲ್ಲಿ ದೊಡ್ಡ ಪ್ರಮಾಣದ ಬೆಲೆ ತೆರಬೇಕಾಗುತ್ತದೆ.ಮನುಷ್ಯ ಸಂಬಂಧವು ಸೃಷ್ಟಿಯೊಂದಿಗೆ ಬೆರೆತು ಹೋಗಿದ್ದು, ನಾವು ಈ ಪ್ರಕೃತಿಯ ಒಂದು ಭಾಗವಾಗಿದ್ದೇವೆ. ಹಾಗಾಗಿ ಈ ಜಗತ್ತನ್ನು ಪೋಷಿಸುವುದು ನಮ್ಮ ಆದ್ಯ ಕರ್ತವ್ಯವಾಗಿದ್ದು, ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು’ ಎಂದರು.