<p><strong>ಬೆಂಗಳೂರು:</strong> ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಅಂಗವಾಗಿ ಇದೇ ಮೊದಲ ಬಾರಿಗೆ ನೀಡುತ್ತಿರುವ ರಾಜ್ಯಮಟ್ಟದ ‘ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ಗೆ ‘ಪ್ರಜಾವಾಣಿ’ಯ ಹಿರಿಯ ವರದಿಗಾರ ಆರ್. ಮಂಜುನಾಥ್ ಸೇರಿದಂತೆ ಐವರು ಭಾಜನರಾಗಿದ್ದಾರೆ.</p>.<p>ಪರಿಸರ ಸಂರಕ್ಷಣೆ ಮತ್ತು ವ್ಯವಸ್ಥಾಪನಾ ಕ್ಷೇತ್ರದಲ್ಲಿ ವ್ಯಕ್ತಿ– ಸಂಸ್ಥೆಗಳು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ‘ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ ನೀಡಲಾಗುತ್ತಿದೆ. ಪ್ರಶಸ್ತಿಯು ತಲಾ ₹1 ಲಕ್ಷ ನಗದು ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ. ನವೆಂಬರ್ 19ರಂದು ಅರಮನೆ ಮೈದಾನದಲ್ಲಿ ನಡೆಯುವ ‘ಸುವರ್ಣ ಮಹೋತ್ಸವ ಸಮಾರಂಭ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ತಿಳಿಸಿದರು.</p>.<p>ದಾವಣಗೆರೆ ಜಿಲ್ಲಾಧಿಕಾರಿ, ಬೆಳಗಾವಿಯ ಉಕ್ಕಡದ ಮಜದೂರು ನವ ನಿರ್ಮಾಣ ಸಂಘಟನೆಯ ಶಿವಾಜಿ ಕಾಗಣಿಕರ, ಮಂಗಳೂರಿನ ಪ್ರೊ. ಜಿ.ಶ್ರೀನಿಕೇತನ್, ಬೆಂಗಳೂರಿನ ಗಣೇಶ್ ಶಂಕರ್, ಆರ್. ಮಂಜುನಾಥ್ ಅವರಿಗೆ ‘ಇಂದಿರಾ ಪ್ರಿಯದರ್ಶಿನಿ ಪರಿಸರ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.</p>.<p>ಸುವರ್ಣ ಮಹೋತ್ಸವದ ಅಂಗವಾಗಿ, ಪರಿಸರಕ್ಕೆ ಸಂಬಂಧಿಸಿದ ರೀಲ್ಸ್ ಸ್ಪರ್ಧೆಯಲ್ಲಿ ಧರ್ಮಸ್ಥಳದ ದೀಕ್ಷಿತ್, ಮೈಸೂರಿನ ಆರ್. ನಾಗೇಂದ್ರ, ಪುತ್ತೂರಿನ ಡಾ. ವೈ.ಡಿ. ನಂದೀಶ್ ಅವರು ವಿಜೇತರಾಗಿದ್ದಾರೆ. ಅವರಿಗೆ ಕ್ರಮವಾಗಿ ಪ್ರಥಮ (₹50 ಸಾವಿರ), ದ್ವಿತೀಯ (₹25 ಸಾವಿರ), ತೃತೀಯ (₹10 ಸಾವಿರ) ನಗದು– ಪ್ರಶಸ್ತಿ ಪತ್ರ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಅಂಗವಾಗಿ ಇದೇ ಮೊದಲ ಬಾರಿಗೆ ನೀಡುತ್ತಿರುವ ರಾಜ್ಯಮಟ್ಟದ ‘ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ಗೆ ‘ಪ್ರಜಾವಾಣಿ’ಯ ಹಿರಿಯ ವರದಿಗಾರ ಆರ್. ಮಂಜುನಾಥ್ ಸೇರಿದಂತೆ ಐವರು ಭಾಜನರಾಗಿದ್ದಾರೆ.</p>.<p>ಪರಿಸರ ಸಂರಕ್ಷಣೆ ಮತ್ತು ವ್ಯವಸ್ಥಾಪನಾ ಕ್ಷೇತ್ರದಲ್ಲಿ ವ್ಯಕ್ತಿ– ಸಂಸ್ಥೆಗಳು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ‘ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ ನೀಡಲಾಗುತ್ತಿದೆ. ಪ್ರಶಸ್ತಿಯು ತಲಾ ₹1 ಲಕ್ಷ ನಗದು ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ. ನವೆಂಬರ್ 19ರಂದು ಅರಮನೆ ಮೈದಾನದಲ್ಲಿ ನಡೆಯುವ ‘ಸುವರ್ಣ ಮಹೋತ್ಸವ ಸಮಾರಂಭ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ತಿಳಿಸಿದರು.</p>.<p>ದಾವಣಗೆರೆ ಜಿಲ್ಲಾಧಿಕಾರಿ, ಬೆಳಗಾವಿಯ ಉಕ್ಕಡದ ಮಜದೂರು ನವ ನಿರ್ಮಾಣ ಸಂಘಟನೆಯ ಶಿವಾಜಿ ಕಾಗಣಿಕರ, ಮಂಗಳೂರಿನ ಪ್ರೊ. ಜಿ.ಶ್ರೀನಿಕೇತನ್, ಬೆಂಗಳೂರಿನ ಗಣೇಶ್ ಶಂಕರ್, ಆರ್. ಮಂಜುನಾಥ್ ಅವರಿಗೆ ‘ಇಂದಿರಾ ಪ್ರಿಯದರ್ಶಿನಿ ಪರಿಸರ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.</p>.<p>ಸುವರ್ಣ ಮಹೋತ್ಸವದ ಅಂಗವಾಗಿ, ಪರಿಸರಕ್ಕೆ ಸಂಬಂಧಿಸಿದ ರೀಲ್ಸ್ ಸ್ಪರ್ಧೆಯಲ್ಲಿ ಧರ್ಮಸ್ಥಳದ ದೀಕ್ಷಿತ್, ಮೈಸೂರಿನ ಆರ್. ನಾಗೇಂದ್ರ, ಪುತ್ತೂರಿನ ಡಾ. ವೈ.ಡಿ. ನಂದೀಶ್ ಅವರು ವಿಜೇತರಾಗಿದ್ದಾರೆ. ಅವರಿಗೆ ಕ್ರಮವಾಗಿ ಪ್ರಥಮ (₹50 ಸಾವಿರ), ದ್ವಿತೀಯ (₹25 ಸಾವಿರ), ತೃತೀಯ (₹10 ಸಾವಿರ) ನಗದು– ಪ್ರಶಸ್ತಿ ಪತ್ರ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>