<p><strong>ಯಲಹಂಕ:</strong> ‘ಆಧುನೀಕರಣದ ಭರದಲ್ಲಿ ಪರಿಸರ ನಾಶವಾಗಿ, ಉಸಿರುಗಟ್ಟುವಂತಹ ವಾತಾವರಣದಲ್ಲಿ ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ನಟ ಅರುಣ್ ಸಾಗರ್ ವಿಷಾದಿಸಿದರು.</p><p>ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ತೋಟಗಾರಿಕೆ ಮಹಾವಿದ್ಯಾಲಯದ ಸಹಯೋಗದಲ್ಲಿ ಜಿಕೆವಿಕೆ ಆವರಣದಲ್ಲಿ ಆಯೋಜಿಸಿರುವ ಪರಿಸರ ದಿನಾಚರಣೆ ಮತ್ತು ಸಸ್ಯಸಂತೆ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಭೂಮಿ ಕೊಟ್ಟಂತಹ ಅವಕಾಶ ಮತ್ತು ಸ್ವಾತಂತ್ರ್ಯವನ್ನು ತುಂಬಾ ಕೆಟ್ಟದಾಗಿ ಬಳಸಿಕೊಳ್ಳುತ್ತಿದ್ದೇವೆ. ಪರಿಸರವನ್ನು ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು. ಹಳೆಯ ಸಾಂಪ್ರದಾಯಿಕ ಜೀವನಪದ್ಧತಿಯ ಜೊತೆಗೆ ನಾವೆಲ್ಲರೂ ಸಾಗಬೇಕಾಗಿದೆ. ‘ಪರಿಸರದ ಜೊತೆಗೆ ನಮ್ಮ ಬದುಕು- ನಮ್ಮ ಬದುಕಿನಿಂದ ಪರಿಸರ ಅಲ್ಲ’ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕು’ ಎಂದರು.</p>.<p>ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ(ಬಾಗಲಕೋಟೆ) ಸಂಶೋಧನಾ ನಿರ್ದೇಶಕ ಡಾ.ಎಚ್.ಸಿ.ಮಹೇಶಪ್ಪ ಮಾತನಾಡಿ, ‘ಪ್ರವಾಹ, ಭೂಕುಸಿತ, ಹವಾಮಾನ ವೈಪರೀತ್ಯಗಳು ಸಂಭವಿಸಿ, ಪರಿಸರದ ಮೇಲೆ ಎಷ್ಟೇ ದುರಂತಗಳು ನಡೆದರೂ ನಾವು ಎಚ್ಚೆತ್ತುಕೊಳ್ಳದೇ ಇರುವುದು ವಿಷಾದದ ಸಂಗತಿ’ ಎಂದು ಹೇಳಿದರು.</p><p>ತೋಟಗಾರಿಕಾ ಮಹಾವಿದ್ಯಾಲಯದ ಡೀನ್ ಡಾ.ಜಿ.ಎಸ್.ಕೆ.ಸ್ವಾಮಿ, ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತ ಮಹೇಶ ಬಿ. ಶಿರೂರ, ರೈತ ಉತ್ಪಾದಕ ಸಂಸ್ಥೆಗಳ ಉತ್ಕೃಷ್ಟ ಕೇಂದ್ರದ ನಿರ್ದೇಶಕ ಡಾ.ಆರ್.ಕೆ. ಮೇಸ್ತ, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಕೇಂದ್ರದ ವಿಸ್ತರಣಾ ನಿರ್ದೇಶಕ ಡಾ.ಎಸ್.ಎಲ್.ಜಗದೀಶ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ‘ಆಧುನೀಕರಣದ ಭರದಲ್ಲಿ ಪರಿಸರ ನಾಶವಾಗಿ, ಉಸಿರುಗಟ್ಟುವಂತಹ ವಾತಾವರಣದಲ್ಲಿ ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ನಟ ಅರುಣ್ ಸಾಗರ್ ವಿಷಾದಿಸಿದರು.</p><p>ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ತೋಟಗಾರಿಕೆ ಮಹಾವಿದ್ಯಾಲಯದ ಸಹಯೋಗದಲ್ಲಿ ಜಿಕೆವಿಕೆ ಆವರಣದಲ್ಲಿ ಆಯೋಜಿಸಿರುವ ಪರಿಸರ ದಿನಾಚರಣೆ ಮತ್ತು ಸಸ್ಯಸಂತೆ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಭೂಮಿ ಕೊಟ್ಟಂತಹ ಅವಕಾಶ ಮತ್ತು ಸ್ವಾತಂತ್ರ್ಯವನ್ನು ತುಂಬಾ ಕೆಟ್ಟದಾಗಿ ಬಳಸಿಕೊಳ್ಳುತ್ತಿದ್ದೇವೆ. ಪರಿಸರವನ್ನು ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು. ಹಳೆಯ ಸಾಂಪ್ರದಾಯಿಕ ಜೀವನಪದ್ಧತಿಯ ಜೊತೆಗೆ ನಾವೆಲ್ಲರೂ ಸಾಗಬೇಕಾಗಿದೆ. ‘ಪರಿಸರದ ಜೊತೆಗೆ ನಮ್ಮ ಬದುಕು- ನಮ್ಮ ಬದುಕಿನಿಂದ ಪರಿಸರ ಅಲ್ಲ’ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕು’ ಎಂದರು.</p>.<p>ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ(ಬಾಗಲಕೋಟೆ) ಸಂಶೋಧನಾ ನಿರ್ದೇಶಕ ಡಾ.ಎಚ್.ಸಿ.ಮಹೇಶಪ್ಪ ಮಾತನಾಡಿ, ‘ಪ್ರವಾಹ, ಭೂಕುಸಿತ, ಹವಾಮಾನ ವೈಪರೀತ್ಯಗಳು ಸಂಭವಿಸಿ, ಪರಿಸರದ ಮೇಲೆ ಎಷ್ಟೇ ದುರಂತಗಳು ನಡೆದರೂ ನಾವು ಎಚ್ಚೆತ್ತುಕೊಳ್ಳದೇ ಇರುವುದು ವಿಷಾದದ ಸಂಗತಿ’ ಎಂದು ಹೇಳಿದರು.</p><p>ತೋಟಗಾರಿಕಾ ಮಹಾವಿದ್ಯಾಲಯದ ಡೀನ್ ಡಾ.ಜಿ.ಎಸ್.ಕೆ.ಸ್ವಾಮಿ, ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತ ಮಹೇಶ ಬಿ. ಶಿರೂರ, ರೈತ ಉತ್ಪಾದಕ ಸಂಸ್ಥೆಗಳ ಉತ್ಕೃಷ್ಟ ಕೇಂದ್ರದ ನಿರ್ದೇಶಕ ಡಾ.ಆರ್.ಕೆ. ಮೇಸ್ತ, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಕೇಂದ್ರದ ವಿಸ್ತರಣಾ ನಿರ್ದೇಶಕ ಡಾ.ಎಸ್.ಎಲ್.ಜಗದೀಶ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>