<p><strong>ಬೆಂಗಳೂರು:</strong> ‘ಪರಿಸರದ ಮೇಲಿನ ನಿರಂತರ ಆಕ್ರಮಣ ಹಾಗೂ ನಗರೀಕರಣದಿಂದಾಗಿ ಇಂದು ಪ್ರಕೃತಿ ವಿನಾಶದತ್ತ ಸಾಗುತ್ತಿದೆ’ ಎಂದು ಆಸ್ಟರ್ ಆರ್.ವಿ.ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರಶಾಂತ್ ಕಳವಳ ವ್ಯಕ್ತಿಪಡಿಸಿದರು. </p>.<p>ಆಸ್ಪತ್ರೆ ನಗರದಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಅಭಿಯಾನದಲ್ಲಿ ಮಾತನಾಡಿದ ಅವರು, ಮುಂದಿನ ಪೀಳಿಗೆಗೆ ಆರೋಗ್ಯಯುತ ಪರಿಸರ ನಿರ್ಮಿಸಲು ನಗರ ಪ್ರದೇಶದಲ್ಲಿ ಗಿಡಗಳನ್ನು ಬೆಳೆಸಬೇಕು. ಪರಿಸರವನ್ನು ಸಂರಕ್ಷಿಸುವ ಕಾರ್ಯ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯ ಆಗಬೇಕು. ಪರಿಸರದ ಮಹತ್ವ ಅರಿತು ಕಾರ್ಯೋನ್ಮುಖರಾಗಬೇಕು’ ಎಂದು ಹೇಳಿದರು. </p>.<p>ಆಸ್ಪತ್ರೆಯ ಸಾಮಾಜಿಕ ಹೊಣೆಗಾರಿಕೆ ನಿಧಿ ವಿಭಾಗದ ಮುಖ್ಯಸ್ಥ ರೋಹನ್, ‘ನಗರದಲ್ಲಿ ಮಾಲಿನ್ಯ ಹಾಗೂ ತಾಪಮಾನ ಹೆಚ್ಚಳವಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ಬೆಳೆಸಿದಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು‘ ಎಂದರು.</p>.<p>ಆಸ್ಪತ್ರೆಯ 50ಕ್ಕೂ ಅಧಿಕ ಸಿಬ್ಬಂದಿ ಬನ್ನೇರುಘಟ್ಟದ ಬಳಿ 150 ಗಿಡಗಳನ್ನು ನೆಟ್ಟರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪರಿಸರದ ಮೇಲಿನ ನಿರಂತರ ಆಕ್ರಮಣ ಹಾಗೂ ನಗರೀಕರಣದಿಂದಾಗಿ ಇಂದು ಪ್ರಕೃತಿ ವಿನಾಶದತ್ತ ಸಾಗುತ್ತಿದೆ’ ಎಂದು ಆಸ್ಟರ್ ಆರ್.ವಿ.ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರಶಾಂತ್ ಕಳವಳ ವ್ಯಕ್ತಿಪಡಿಸಿದರು. </p>.<p>ಆಸ್ಪತ್ರೆ ನಗರದಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಅಭಿಯಾನದಲ್ಲಿ ಮಾತನಾಡಿದ ಅವರು, ಮುಂದಿನ ಪೀಳಿಗೆಗೆ ಆರೋಗ್ಯಯುತ ಪರಿಸರ ನಿರ್ಮಿಸಲು ನಗರ ಪ್ರದೇಶದಲ್ಲಿ ಗಿಡಗಳನ್ನು ಬೆಳೆಸಬೇಕು. ಪರಿಸರವನ್ನು ಸಂರಕ್ಷಿಸುವ ಕಾರ್ಯ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯ ಆಗಬೇಕು. ಪರಿಸರದ ಮಹತ್ವ ಅರಿತು ಕಾರ್ಯೋನ್ಮುಖರಾಗಬೇಕು’ ಎಂದು ಹೇಳಿದರು. </p>.<p>ಆಸ್ಪತ್ರೆಯ ಸಾಮಾಜಿಕ ಹೊಣೆಗಾರಿಕೆ ನಿಧಿ ವಿಭಾಗದ ಮುಖ್ಯಸ್ಥ ರೋಹನ್, ‘ನಗರದಲ್ಲಿ ಮಾಲಿನ್ಯ ಹಾಗೂ ತಾಪಮಾನ ಹೆಚ್ಚಳವಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ಬೆಳೆಸಿದಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು‘ ಎಂದರು.</p>.<p>ಆಸ್ಪತ್ರೆಯ 50ಕ್ಕೂ ಅಧಿಕ ಸಿಬ್ಬಂದಿ ಬನ್ನೇರುಘಟ್ಟದ ಬಳಿ 150 ಗಿಡಗಳನ್ನು ನೆಟ್ಟರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>