<p><strong>ಬೆಂಗಳೂರು</strong>: ‘ದೇಶ ಬೃಹತ್ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಯನ್ನು ಹೊಂದಿದೆ. ಕೇಂದ್ರ ಸರ್ಕಾರ ಪರಿಸರ ಸ್ನೇಹಿ ಚಿಂತನೆಗಳಿಗೆ ಮೇಕ್ ಇಂಡಿಯಾ ಉಪಕ್ರಮದ ಮೂಲಕ ಪ್ರೋತ್ಸಾಹಿಸುತ್ತಿದೆ’ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಹೇಳಿದರು.</p>.<p>ಸಿಎಂಆರ್ ವಿಶ್ವವಿದ್ಯಾಲಯ ಮತ್ತು ರ್ಯಾವರಣ್ ಗತಿವಿಧಿ ಅಂಡ್ ರೈನ್ಮ್ಯಾಟರ್ ಫೌಂಡೇಷನ್ ಸಹಯೋಗದಲ್ಲಿ ‘ಇವೈಎಸ್ಎಸ್–ಎಕೊ ಯೂತ್ ಸ್ಟಾರ್ಟ್ಅಪ್ ಸ್ಪರ್ಧೆ ಮತ್ತು ಶೃಂಗಸಭೆ–2022’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹವಾಮಾನ ವೈಪರೀತ್ಯದಂತಹ ತೊಂದರೆಗಳನ್ನು ಪರಿಹರಿಸಲು ನೆರವಾಗುವ ಪರಿಸರ ಸ್ನೇಹಿ ಸ್ಟಾರ್ಟ್ಅಪ್ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಹೊಂದುವುದು ಇಂದಿನ ಅಗತ್ಯವಾಗಿದೆ’ ಎಂದು ತಿಳಿಸಿದರು.</p>.<p>ಯುನೆಸ್ಕೊ ಎಂಜಿಐಇಪಿನ ಜಾಗತಿಕ ದಯಾ ರಾಯಭಾರಿ ರಿಕಿ ಕೇಜ್ ಮಾತನಾಡಿ, ‘ಹವಾಮಾನ ಬದಲಾವಣೆ, ಪ್ರಭೇದಗಳ ನಶಿಸುವಿಕೆ, ಅರಣ್ಯ ನಾಶ, ಪ್ಲಾಸ್ಟಿಕ್, ವಾಯು ಮಾಲಿನ್ಯ ನಿಯಂತ್ರಣಕ್ಕೆ ಸ್ಟಾರ್ಟ್ಅಪ್ಗಳ ಮೂಲಕ ಯುವಜನತೆ ಇದರ ನೇತೃತ್ವ ವಹಿಸಿರುವುದು ಶ್ವಾಘನೀಯ’ ಎಂದರು.</p>.<p>ಸಿಎಂಆರ್ ಸಂಸ್ಥೆಗಳ ಸಮೂಹದ ಅಧ್ಯಕ್ಷ ಕೆ.ಸಿ ರಾಮಮೂರ್ತಿ ಮಾತನಾಡಿ, ‘ಪರಿಸರಕ್ಕೆ ಸಂಬಂಧಿಸಿದಂತೆ ಸುಸ್ಥಿರ ಭವಿಷ್ಯಕ್ಕಾಗಿ ದೇಶದಲ್ಲಿ ಪರಿಸರ ವ್ಯವಸ್ಥೆಯೊಂದನ್ನು ಸೃಷ್ಟಿಸುವುದು ಈ ಶೃಂಗಸಭೆಯ ಉದ್ದೇಶ’ ಎಂದರು.</p>.<p>ಐಡಿಯಾ ವರ್ಗದಲ್ಲಿ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯ ಪ್ರಥಮ ಪ್ರಶಸ್ತಿ ಪಡೆದುಕೊಂಡಿತು.</p>.<p>ದ್ವಿತೀಯ ಸ್ಥಾನವನ್ನು ಎಐ-ಜೆನ್ಝೆಡ್ ಪುದುಚೇರಿ ಮತ್ತು ಕೊಂಗುನಾಡು ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ, ತಿರುಚಿನಾಪಲ್ಲಿಗೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ದೇಶ ಬೃಹತ್ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಯನ್ನು ಹೊಂದಿದೆ. ಕೇಂದ್ರ ಸರ್ಕಾರ ಪರಿಸರ ಸ್ನೇಹಿ ಚಿಂತನೆಗಳಿಗೆ ಮೇಕ್ ಇಂಡಿಯಾ ಉಪಕ್ರಮದ ಮೂಲಕ ಪ್ರೋತ್ಸಾಹಿಸುತ್ತಿದೆ’ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಹೇಳಿದರು.</p>.<p>ಸಿಎಂಆರ್ ವಿಶ್ವವಿದ್ಯಾಲಯ ಮತ್ತು ರ್ಯಾವರಣ್ ಗತಿವಿಧಿ ಅಂಡ್ ರೈನ್ಮ್ಯಾಟರ್ ಫೌಂಡೇಷನ್ ಸಹಯೋಗದಲ್ಲಿ ‘ಇವೈಎಸ್ಎಸ್–ಎಕೊ ಯೂತ್ ಸ್ಟಾರ್ಟ್ಅಪ್ ಸ್ಪರ್ಧೆ ಮತ್ತು ಶೃಂಗಸಭೆ–2022’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಹವಾಮಾನ ವೈಪರೀತ್ಯದಂತಹ ತೊಂದರೆಗಳನ್ನು ಪರಿಹರಿಸಲು ನೆರವಾಗುವ ಪರಿಸರ ಸ್ನೇಹಿ ಸ್ಟಾರ್ಟ್ಅಪ್ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಹೊಂದುವುದು ಇಂದಿನ ಅಗತ್ಯವಾಗಿದೆ’ ಎಂದು ತಿಳಿಸಿದರು.</p>.<p>ಯುನೆಸ್ಕೊ ಎಂಜಿಐಇಪಿನ ಜಾಗತಿಕ ದಯಾ ರಾಯಭಾರಿ ರಿಕಿ ಕೇಜ್ ಮಾತನಾಡಿ, ‘ಹವಾಮಾನ ಬದಲಾವಣೆ, ಪ್ರಭೇದಗಳ ನಶಿಸುವಿಕೆ, ಅರಣ್ಯ ನಾಶ, ಪ್ಲಾಸ್ಟಿಕ್, ವಾಯು ಮಾಲಿನ್ಯ ನಿಯಂತ್ರಣಕ್ಕೆ ಸ್ಟಾರ್ಟ್ಅಪ್ಗಳ ಮೂಲಕ ಯುವಜನತೆ ಇದರ ನೇತೃತ್ವ ವಹಿಸಿರುವುದು ಶ್ವಾಘನೀಯ’ ಎಂದರು.</p>.<p>ಸಿಎಂಆರ್ ಸಂಸ್ಥೆಗಳ ಸಮೂಹದ ಅಧ್ಯಕ್ಷ ಕೆ.ಸಿ ರಾಮಮೂರ್ತಿ ಮಾತನಾಡಿ, ‘ಪರಿಸರಕ್ಕೆ ಸಂಬಂಧಿಸಿದಂತೆ ಸುಸ್ಥಿರ ಭವಿಷ್ಯಕ್ಕಾಗಿ ದೇಶದಲ್ಲಿ ಪರಿಸರ ವ್ಯವಸ್ಥೆಯೊಂದನ್ನು ಸೃಷ್ಟಿಸುವುದು ಈ ಶೃಂಗಸಭೆಯ ಉದ್ದೇಶ’ ಎಂದರು.</p>.<p>ಐಡಿಯಾ ವರ್ಗದಲ್ಲಿ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯ ಪ್ರಥಮ ಪ್ರಶಸ್ತಿ ಪಡೆದುಕೊಂಡಿತು.</p>.<p>ದ್ವಿತೀಯ ಸ್ಥಾನವನ್ನು ಎಐ-ಜೆನ್ಝೆಡ್ ಪುದುಚೇರಿ ಮತ್ತು ಕೊಂಗುನಾಡು ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ, ತಿರುಚಿನಾಪಲ್ಲಿಗೆ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>