ಬನ್ನೇರುಘಟ್ಟ ವಲಯದ ಆರ್ಎಫ್ಒ ಆಗಿ ಅವರು 2018ರ ಜನವರಿಯಲ್ಲಿ ಅಧಿಕಾರ ಸ್ವೀಕರಿಸಿದ್ದರು. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಆಸುಪಾಸಿನಲ್ಲಿ ಗಣಿಗಾರಿಕೆ ಚಟುವಟಿಕೆ ನಿಯಂತ್ರಿಸಲು ಕ್ರಮ ವಹಿಸಿದ್ದರು. ವನ್ಯಜೀವಿಗಳು ಅಪಘಾತದಿಂದ ಸಾವಿಗೀಡಾಗುವುದನ್ನು ತಪ್ಪಿಸಲು ಶಿವನಹಳ್ಳಿ– ರಾಗಿಹಳ್ಳಿ ರಸ್ತೆಯಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿರ್ಬಂಧವನ್ನು ಜಾರಿಗೊಳಿಸಿದ್ದರು. ಮಾನವ– ವನ್ಯಜೀವಿ ಸಂಘರ್ಷ ತಪ್ಪಿಸಲು ರಾಷ್ಟ್ರೀಯ ಉದ್ಯಾನ ಆಸುಪಾಸಿನ ಗ್ರಾಮಗಳಲ್ಲಿ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಆನೇಕಲ್ ವಲಯದ ಆರ್ಎಫ್ಒ ಅವರುಇತ್ತೀಚೆಗೆ ವರ್ಗವಾದ ಬಳಿಕ ಆ ಹೊಣೆಯನ್ನೂ ಹೆಚ್ಚುವರಿಯಾಗಿ ನಿಭಾಯಿಸುತ್ತಿದ್ದರು.