<p><strong>ಬೆಂಗಳೂರು</strong>: ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ (ಇಪಿಎಫ್) ಕೋ–ಆಪರೇಟಿವ್ ಸೊಸೈಟಿಯಲ್ಲಿ ನಡೆದ ₹70 ಕೋಟಿ ಮೊತ್ತದ ಅಕ್ರಮದಲ್ಲಿ, ₹6.5 ಕೋಟಿ ನಗದನ್ನು ಸೊಸೈಟಿಯ ಲೆಕ್ಕಾಧಿಕಾರಿ ಬಿ.ಎಲ್.ಜಗದೀಶ್ ಅವರ ಪತ್ನಿ ಲಕ್ಷ್ಮೀ ಅವರ ವಿವಿಧ ಬ್ಯಾಂಕ್ಗಳ ಖಾತೆಗಳಿಗೆ ವರ್ಗಾವಣೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.</p>.<p>ಜಗದೀಶ್ ಅವರ ಪತ್ನಿ ಲಕ್ಷ್ಮೀ ಹೆಸರಲ್ಲಿ ಹಲವು ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದ್ದು, 2009 ರಿಂದ 2024ರ ಅವಧಿಯಲ್ಲಿ ಒಟ್ಟು ₹6.5 ಕೋಟಿ ಸೊಸೈಟಿ ಖಾತೆಯಿಂದಲೇ ವರ್ಗಾವಣೆಯಾಗಿದೆ. ಈ ಹಣದಲ್ಲಿ ಲಕ್ಷ್ಮೀ ಅವರು ವಿಲಾಸಿ ಜೀವನ ನಡೆಸುತ್ತಿದ್ದರು. ದುಬಾರಿ ಕಾರು ಹಾಗೂ ಬೈಕ್ಗಳನ್ನು ಜಪ್ತಿ ಮಾಡಲಾಗಿದೆ. ಅವರ ಖಾತೆಯಲ್ಲಿದ್ದ ₹ 20 ಲಕ್ಷ ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಹಣ ವಂಚನೆಯಲ್ಲಿ ಸೊಸೈಟಿಯ ಸಿಇಒ ಜಿ.ಗೋಪಿನಾಥ್ ಅವರ ಪಾತ್ರ ಇರುವುದು ತನಿಖೆ ವೇಳೆ ಗೊತ್ತಾಗಿದ್ದು, ಲೆಕ್ಕಾಧಿಕಾರಿ ಜತೆ ಶಾಮೀಲಾಗಿ ಸೊಸೈಟಿಗೆ ಸೇರಿದ ₹15 ಕೋಟಿಯನ್ನು ಅಕ್ರಮವಾಗಿ ಬಳಸಿಕೊಂಡಿರುವುದು ಗೊತ್ತಾಗಿದೆ.</p>.<p>ಠೇವಣಿದಾರರಿಂದ ಲಕ್ಷಾಂತರ ರೂಪಾಯಿ ನಗದು ಪಡೆದಿರುವ ಗೋಪಿನಾಥ್ ಸ್ವಂತಕ್ಕೆ ಬಳಸಿಕೊಂಡಿದ್ದಾರೆ. ಗೋಪಿನಾಥ್ ಮತ್ತು ಲಕ್ಷ್ಮೀ ಅವರನ್ನು ನವೆಂಬರ್ 12ರವರೆಗೆ ಕಸ್ಟಡಿಗೆ ಪಡೆದಿದ್ದು, ತನಿಖೆ ನಡೆಸಲಾಗುತ್ತಿದೆ. ಇತರೆ ಆರೋಪಿಗಳಾದ ಜಗದೀಶ್ ಸೇರಿದಂತೆ ಹಲವರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಶೋಧ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ (ಇಪಿಎಫ್) ಕೋ–ಆಪರೇಟಿವ್ ಸೊಸೈಟಿಯಲ್ಲಿ ನಡೆದ ₹70 ಕೋಟಿ ಮೊತ್ತದ ಅಕ್ರಮದಲ್ಲಿ, ₹6.5 ಕೋಟಿ ನಗದನ್ನು ಸೊಸೈಟಿಯ ಲೆಕ್ಕಾಧಿಕಾರಿ ಬಿ.ಎಲ್.ಜಗದೀಶ್ ಅವರ ಪತ್ನಿ ಲಕ್ಷ್ಮೀ ಅವರ ವಿವಿಧ ಬ್ಯಾಂಕ್ಗಳ ಖಾತೆಗಳಿಗೆ ವರ್ಗಾವಣೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.</p>.<p>ಜಗದೀಶ್ ಅವರ ಪತ್ನಿ ಲಕ್ಷ್ಮೀ ಹೆಸರಲ್ಲಿ ಹಲವು ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದ್ದು, 2009 ರಿಂದ 2024ರ ಅವಧಿಯಲ್ಲಿ ಒಟ್ಟು ₹6.5 ಕೋಟಿ ಸೊಸೈಟಿ ಖಾತೆಯಿಂದಲೇ ವರ್ಗಾವಣೆಯಾಗಿದೆ. ಈ ಹಣದಲ್ಲಿ ಲಕ್ಷ್ಮೀ ಅವರು ವಿಲಾಸಿ ಜೀವನ ನಡೆಸುತ್ತಿದ್ದರು. ದುಬಾರಿ ಕಾರು ಹಾಗೂ ಬೈಕ್ಗಳನ್ನು ಜಪ್ತಿ ಮಾಡಲಾಗಿದೆ. ಅವರ ಖಾತೆಯಲ್ಲಿದ್ದ ₹ 20 ಲಕ್ಷ ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಹಣ ವಂಚನೆಯಲ್ಲಿ ಸೊಸೈಟಿಯ ಸಿಇಒ ಜಿ.ಗೋಪಿನಾಥ್ ಅವರ ಪಾತ್ರ ಇರುವುದು ತನಿಖೆ ವೇಳೆ ಗೊತ್ತಾಗಿದ್ದು, ಲೆಕ್ಕಾಧಿಕಾರಿ ಜತೆ ಶಾಮೀಲಾಗಿ ಸೊಸೈಟಿಗೆ ಸೇರಿದ ₹15 ಕೋಟಿಯನ್ನು ಅಕ್ರಮವಾಗಿ ಬಳಸಿಕೊಂಡಿರುವುದು ಗೊತ್ತಾಗಿದೆ.</p>.<p>ಠೇವಣಿದಾರರಿಂದ ಲಕ್ಷಾಂತರ ರೂಪಾಯಿ ನಗದು ಪಡೆದಿರುವ ಗೋಪಿನಾಥ್ ಸ್ವಂತಕ್ಕೆ ಬಳಸಿಕೊಂಡಿದ್ದಾರೆ. ಗೋಪಿನಾಥ್ ಮತ್ತು ಲಕ್ಷ್ಮೀ ಅವರನ್ನು ನವೆಂಬರ್ 12ರವರೆಗೆ ಕಸ್ಟಡಿಗೆ ಪಡೆದಿದ್ದು, ತನಿಖೆ ನಡೆಸಲಾಗುತ್ತಿದೆ. ಇತರೆ ಆರೋಪಿಗಳಾದ ಜಗದೀಶ್ ಸೇರಿದಂತೆ ಹಲವರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಶೋಧ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>