ರಾಷ್ಟ್ರೀಯ ಸಂಘರ್ಷ ಸಮಿತಿ(ಎನ್ಎಸಿ) ನೇತೃತ್ವದಲ್ಲಿ ಹೋರಾಟ ನಡೆಯಲಿದ್ದು, ಪಿಂಚಣಿ ಯೋಜನೆ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ವಿಶ್ಲೇಷಣೆ, ಕನಿಷ್ಠ ಪಿಂಚಣಿ ₹7,500 ಮತ್ತು ಡಿ.ಎ(ತುಟ್ಟಿಭತ್ಯೆ), ವೈದ್ಯಕೀಯ ಸೌಲಭ್ಯ, ಪಿಂಚಣಿ ವಂಚಿತರಿಗೆ ಕನಿಷ್ಠ ₹5 ಸಾವಿರ ಪಿಂಚಣಿ ನೀಡುವ ವಿಷಯಗಳ ಬಗ್ಗೆ ಸಮಾವೇಶದಲ್ಲಿ ಚರ್ಚೆಗಳು ನಡೆಯಲಿವೆ ಎಂದು ಎನ್ಎಸಿ ತಿಳಿಸಿದೆ.