ನಂತರ ಮಾತನಾಡಿದ ಅವರು, ‘ಸಂವಿಧಾನದ ಆಶಯಗಳು ಮತ್ತು ಕನಸುಗಳ ಸಾಕಾರಕ್ಕಾಗಿ ಭಾರತೀಯರು ಒಗಟ್ಟಾಗಿ ಶ್ರಮಿಸಬೇಕಾಗಿದೆ. ದೇಶ ಮತ್ತು ಸಮಾಜದ ಪ್ರಗತಿಗೆ ಶಿಕ್ಷಣದ ಅಭಿವೃದ್ಧಿ ಬುನಾದಿಯಾಗಿದೆ. ಸರ್ವರಿಗೂ ಸಮಾನ ಗುಣಮಟ್ಟದ ಶಿಕ್ಷಣವನ್ನು ಕಡಿಮೆ ವೆಚ್ಚದಲ್ಲಿ ಒದಗಿಸುವ ಮಹತ್ವದ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ’ ಎಂದು ಅವರು ಅಭಿಪ್ರಾಯಪಟ್ಟರು.