<p><strong>ಬೆಂಗಳೂರು:</strong> ನಗರದ ಜ್ಯೋತಿ ನಿವಾಸ್ ಮಹಿಳಾ ಕಾಲೇಜಿನಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಪರವಾಗಿ ಒತ್ತಾಯಪೂರ್ವಕವಾಗಿ ಸಹಿ ಸಂಗ್ರಹಿಸುವ ಮೂಲಕ ಬಿಜೆಪಿ ಮುಖಂಡರು, ಎಬಿವಿಪಿ ಕಾರ್ಯಕರ್ತರು ದೌರ್ಜನ್ಯ ನಡೆಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷಈಶ್ವರ ಖಂಡ್ರೆ ಶುಕ್ರವಾರ ಆರೋಪಿಸಿದರು.</p>.<p>ಜೆಎನ್ಯುನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ನಗರಕ್ಕೂ ವ್ಯಾಪಿಸಿದೆ. ಕಾಯಿದೆ ಪರವಾಗಿ ಸಹಿ ಹಾಕದವರ ಮೇಲೆ ಹಲ್ಲೆ ಮಾಡಲಾಗಿದೆ. ವಿದ್ಯಾಕೇಂದ್ರಗಳಲ್ಲೂ ರಾಜಕಾರಣ ಮಾಡುತ್ತಿದ್ದು, ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>ಬೆದರಿಕೆ ಹಾಕಿದವರನ್ನೇ ಸರ್ಕಾರ ಸಮರ್ಥಿಸಿಕೊಳ್ಳುತ್ತಿದೆ. ಗೃಹ ಸಚಿವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇಂತಹ ಘಟನೆಗೆ ರಾಜ್ಯ, ಕೇಂದ್ರ ಸರ್ಕಾರಗಳೇ ಕಾರಣ. ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದವರ ಮೇಲೆ ಪ್ರಕರಣ ದಾಖಲಿಸಿಕೊಂಡು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>‘ಬಿಜೆಪಿ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಇಂಟರ್ನೆಟ್ ಕಡಿತ ಮಾಡುವ ಮೂಲಕ ದೌರ್ಜನ್ಯ ನಡೆಸುತ್ತಿದೆ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಜ್ಯೋತಿ ನಿವಾಸ್ ಮಹಿಳಾ ಕಾಲೇಜಿನಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಪರವಾಗಿ ಒತ್ತಾಯಪೂರ್ವಕವಾಗಿ ಸಹಿ ಸಂಗ್ರಹಿಸುವ ಮೂಲಕ ಬಿಜೆಪಿ ಮುಖಂಡರು, ಎಬಿವಿಪಿ ಕಾರ್ಯಕರ್ತರು ದೌರ್ಜನ್ಯ ನಡೆಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷಈಶ್ವರ ಖಂಡ್ರೆ ಶುಕ್ರವಾರ ಆರೋಪಿಸಿದರು.</p>.<p>ಜೆಎನ್ಯುನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ನಗರಕ್ಕೂ ವ್ಯಾಪಿಸಿದೆ. ಕಾಯಿದೆ ಪರವಾಗಿ ಸಹಿ ಹಾಕದವರ ಮೇಲೆ ಹಲ್ಲೆ ಮಾಡಲಾಗಿದೆ. ವಿದ್ಯಾಕೇಂದ್ರಗಳಲ್ಲೂ ರಾಜಕಾರಣ ಮಾಡುತ್ತಿದ್ದು, ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>ಬೆದರಿಕೆ ಹಾಕಿದವರನ್ನೇ ಸರ್ಕಾರ ಸಮರ್ಥಿಸಿಕೊಳ್ಳುತ್ತಿದೆ. ಗೃಹ ಸಚಿವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇಂತಹ ಘಟನೆಗೆ ರಾಜ್ಯ, ಕೇಂದ್ರ ಸರ್ಕಾರಗಳೇ ಕಾರಣ. ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದವರ ಮೇಲೆ ಪ್ರಕರಣ ದಾಖಲಿಸಿಕೊಂಡು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>‘ಬಿಜೆಪಿ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಇಂಟರ್ನೆಟ್ ಕಡಿತ ಮಾಡುವ ಮೂಲಕ ದೌರ್ಜನ್ಯ ನಡೆಸುತ್ತಿದೆ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>