ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಗುಡಿಸಲು ಮುಕ್ತ ರಾಜ್ಯ ಮಾಡಲು ಯೋಜನೆ ರೂಪಿಸಲಾಗಿತ್ತು. 16 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಿದ್ದು, 13 ಲಕ್ಷ ಮನೆಗಳಿಗೆ ಮಂಜೂರಾತಿ ನೀಡಲಾಗಿತ್ತು. ಮನೆಗಳ ನಿರ್ಮಾಣ ಕೆಲಸವೂ ಚುರುಕಾಗಿ ಸಾಗಿತ್ತು. ಆದರೆ ಈಗ ಹಣ ಬಿಡುಗಡೆಯಾಗದೆ ಕೆಲಸ ಸ್ಥಗಿತಗೊಂಡಿದೆ. ಮನೆಗಳಿಗೆ ಮಂಜೂರಾತಿ ಪಡೆದು ಎಂಟತ್ತು ತಿಂಗಳು ಕಳೆದರೂ ಹಣವನ್ನೇ ಕೊಡುತ್ತಿಲ್ಲ ಎಂದು ಆರೋಪಿಸಿದರು.