‘ಕುಂಬಾರ ಸಮುದಾಯದವರು ಸಮಾಜಕ್ಕೆ ಹಲವು ಕೊಡುಗೆ ನೀಡಿದ್ದಾರೆ. ರಾಜ್ಯದಲ್ಲಿ 25 ಲಕ್ಷ ಜನಸಂಖ್ಯೆ ಇರುವ ಸಮುದಾಯದವರು ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದಾರೆ. ಸಮುದಾಯದ ಅಭಿವೃದ್ಧಿಗಾಗಿ ಹಲವು ಬಾರಿ ಪ್ರತಿಭಟನೆ ನಡೆಸಲಾಗಿದೆ. ನಮ್ಮ ಮನವಿಗಳಿಗೆ ಸರ್ಕಾರ ಸ್ಪಂದಿಸಿಲ್ಲ’ ಎಂದು ಪ್ರತಿಭಟನಕಾರರು ದೂರಿದರು.