<p><strong>ಬೆಂಗಳೂರು:</strong> ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ನೆನಪನ್ನು ಮುಂದಿನ ಪೀಳಿಗೆಗೆ ಉಳಿಸಿಕೊಳ್ಳುವ ಉದ್ದೇಶದಿಂದ ‘ಎಚ್.ಎಸ್.ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನʼ ಎಂಬ ಸಂಸ್ಥೆ ಸ್ಥಾಪಿಸಲು ನಿರ್ಧರಿಸಲಾಯಿತು.</p>.<p>ನಗರದ ಗಾಂಧಿ ಭವನದಲ್ಲಿ ಶನಿವಾರ ನಡೆದ ದೊರೆಸ್ವಾಮಿ ಅವರ ಅಭಿಮಾನಿಗಳು-ಅನುಯಾಯಿಗಳ ಸಮಾಲೋಚನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.</p>.<p>ಸೌಹಾರ್ದ-ಸಹಬಾಳ್ವೆ, ಅಂತ್ಯೋದಯ-ಸರ್ವೋದಯ, ಪರಿಸರ ಸಂರಕ್ಷಣೆ, ಸಂವಿಧಾನ-ಪ್ರಜಾಪ್ರಭುತ್ವದ ರಕ್ಷಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ದೊರೆಸ್ವಾಮಿ ಅವರು ದಣಿವರಿಯದ ಹೋರಾಟ ನಡೆಸಿದ್ದರು. ಅವರ ಸ್ವಾತಂತ್ರ್ಯ ಚಳವಳಿಯ ನೈಜ ಇತಿಹಾಸವನ್ನು ಶಾಲಾ-ಕಾಲೇಜುಗಳ ಮೂಲಕ ಯುವಜನರಿಗೆ ಪರಿಚಯಿಸುವಂತೆ ಹಲವರು ಸಲಹೆ ನೀಡಿದರು. </p>.<p>ಬೆಂಗಳೂರಿನ ಯಾವುದಾದರೊಂದು ಪ್ರಮುಖ ರಸ್ತೆ ಅಥವಾ ಮೆಟ್ರೊ ನಿಲ್ದಾಣಕ್ಕೆ ದೊರಸ್ವಾಮಿ ಅವರ ಹೆಸರಿಡಬೇಕು, ಸ್ವಾತಂತ್ರ್ಯ ಉದ್ಯಾನದಲ್ಲಿ ಅವರ ಹೆಸರಿನಲ್ಲಿ ವಿವಿಧೋದ್ದೇಶ ಕೇಂದ್ರ ಸ್ಥಾಪಿಸಬೇಕು, ಬೆಂಗಳೂರು ವಿ.ವಿ. ಗಾಂಧಿ ಅಧ್ಯಯನ ಕೇಂದ್ರದಲ್ಲಿ ಅವರ ಹೆಸರಲ್ಲಿ ದತ್ತಿ ಸ್ಥಾಪಿಸಬೇಕು, ಅವರ ಬರಹ-ಭಾಷಣಗಳನ್ನು ಪುಸ್ತಕಗಳಾಗಿ ಪ್ರಕಟಿಸುವ ಕೆಲಸ ಮಾಡಬೇಕು ಎಂದು ಸಭೆ ಸರ್ಕಾರವನ್ನು ಆಗ್ರಹಿಸಿತು. ಇದಕ್ಕಾಗಿ ಗಣ್ಯರ ನಿಯೋಗವೊಂದು ಶೀಘ್ರವೇ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲು ನಿರ್ಧರಿಸಲಾಯಿತು.</p>.<p>ಸಭೆಯಲ್ಲಿ ಹೋರಾಟಗಾರ್ತಿಯರಾದ ಡಾ.ವಿಜಯಮ್ಮ, ಇಂದಿರಾ ಕೃಷ್ಣಪ್ಪ, ರೈತ ಚಳವಳಿಯ ವೀರಸಂಗಯ್ಯ ಮತ್ತು ಸಿದಗೌಡ ಮೋದಗಿ, ಡಾ. ವಸಂತಿ ಮೂರ್ತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ನೆನಪನ್ನು ಮುಂದಿನ ಪೀಳಿಗೆಗೆ ಉಳಿಸಿಕೊಳ್ಳುವ ಉದ್ದೇಶದಿಂದ ‘ಎಚ್.ಎಸ್.ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನʼ ಎಂಬ ಸಂಸ್ಥೆ ಸ್ಥಾಪಿಸಲು ನಿರ್ಧರಿಸಲಾಯಿತು.</p>.<p>ನಗರದ ಗಾಂಧಿ ಭವನದಲ್ಲಿ ಶನಿವಾರ ನಡೆದ ದೊರೆಸ್ವಾಮಿ ಅವರ ಅಭಿಮಾನಿಗಳು-ಅನುಯಾಯಿಗಳ ಸಮಾಲೋಚನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.</p>.<p>ಸೌಹಾರ್ದ-ಸಹಬಾಳ್ವೆ, ಅಂತ್ಯೋದಯ-ಸರ್ವೋದಯ, ಪರಿಸರ ಸಂರಕ್ಷಣೆ, ಸಂವಿಧಾನ-ಪ್ರಜಾಪ್ರಭುತ್ವದ ರಕ್ಷಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ದೊರೆಸ್ವಾಮಿ ಅವರು ದಣಿವರಿಯದ ಹೋರಾಟ ನಡೆಸಿದ್ದರು. ಅವರ ಸ್ವಾತಂತ್ರ್ಯ ಚಳವಳಿಯ ನೈಜ ಇತಿಹಾಸವನ್ನು ಶಾಲಾ-ಕಾಲೇಜುಗಳ ಮೂಲಕ ಯುವಜನರಿಗೆ ಪರಿಚಯಿಸುವಂತೆ ಹಲವರು ಸಲಹೆ ನೀಡಿದರು. </p>.<p>ಬೆಂಗಳೂರಿನ ಯಾವುದಾದರೊಂದು ಪ್ರಮುಖ ರಸ್ತೆ ಅಥವಾ ಮೆಟ್ರೊ ನಿಲ್ದಾಣಕ್ಕೆ ದೊರಸ್ವಾಮಿ ಅವರ ಹೆಸರಿಡಬೇಕು, ಸ್ವಾತಂತ್ರ್ಯ ಉದ್ಯಾನದಲ್ಲಿ ಅವರ ಹೆಸರಿನಲ್ಲಿ ವಿವಿಧೋದ್ದೇಶ ಕೇಂದ್ರ ಸ್ಥಾಪಿಸಬೇಕು, ಬೆಂಗಳೂರು ವಿ.ವಿ. ಗಾಂಧಿ ಅಧ್ಯಯನ ಕೇಂದ್ರದಲ್ಲಿ ಅವರ ಹೆಸರಲ್ಲಿ ದತ್ತಿ ಸ್ಥಾಪಿಸಬೇಕು, ಅವರ ಬರಹ-ಭಾಷಣಗಳನ್ನು ಪುಸ್ತಕಗಳಾಗಿ ಪ್ರಕಟಿಸುವ ಕೆಲಸ ಮಾಡಬೇಕು ಎಂದು ಸಭೆ ಸರ್ಕಾರವನ್ನು ಆಗ್ರಹಿಸಿತು. ಇದಕ್ಕಾಗಿ ಗಣ್ಯರ ನಿಯೋಗವೊಂದು ಶೀಘ್ರವೇ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲು ನಿರ್ಧರಿಸಲಾಯಿತು.</p>.<p>ಸಭೆಯಲ್ಲಿ ಹೋರಾಟಗಾರ್ತಿಯರಾದ ಡಾ.ವಿಜಯಮ್ಮ, ಇಂದಿರಾ ಕೃಷ್ಣಪ್ಪ, ರೈತ ಚಳವಳಿಯ ವೀರಸಂಗಯ್ಯ ಮತ್ತು ಸಿದಗೌಡ ಮೋದಗಿ, ಡಾ. ವಸಂತಿ ಮೂರ್ತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>